Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

ಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

- Advertisement -
- Advertisement -

ಕೇಂದ್ರದ ಆಡಳಿತರೂಢ ಬಿಜೆಪಿ ಕಳೆದ ಐದು ವರ್ಷಗಳಲ್ಲಿ ಚುನಾವಣಾ ಬಾಂಡ್‌ ಮೂಲಕ 6,060 ಕೋಟಿ ರೂಪಾಯಿ ಪಡೆದಿರುವ ಕುರಿತು ವಿಶೇಷ ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಒತ್ತಾಯಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಯಂತಹ ಕೇಂದ್ರೀಯ ಸಂಸ್ಥೆಗಳ ದಾಳಿ ಎದುರಿಸಿದ ಬೆನ್ನಲ್ಲೇ ಹಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದಿರುವುದನ್ನು ಪ್ರಸ್ತಾಪಿಸಿದರು. ಬಿಜೆಪಿ ಕೋಟ್ಯಾಂತರ ರೂಪಾಯಿ ದೇಣಿಗೆ ಪಡೆದಿದ್ದರೂ, ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

‘ನಾ ಖಾವೂಂಗ ನಾ ಖಾನೆ ದೂಂಗಾ’ (ತಿನ್ನುವುದಿಲ್ಲ, ಇತರರನ್ನು ತಿನ್ನಲು ಬಿಡುವುದಿಲ್ಲ)’ ಎಂದು ಪ್ರಧಾನಿ ಹೇಳುತ್ತಾರೆ. ಆದರೆ, ಇಂದು ಬಿಜೆಪಿ ಚುನಾವಣಾ ಬಾಂಡ್‌ಗಳಿಂದ ಹಣ ಗಳಿಸಿದೆ ಎಂಬುವುದನ್ನು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದೆ. ಎಸ್‌ಬಿಐ ಅಂಕಿ ಅಂಶಗಳು ಬಿಜೆಪಿಗೆ 50ರಷ್ಟು ಮತ್ತು ಕಾಂಗ್ರೆಸ್‌ಗೆ ಶೇ.11ರಷ್ಟು ದೇಣಿಗೆ ಬಂದಿರುವುದಾಗಿ” ತೋರಿಸಿದೆ ಎಂದಿದ್ದಾರೆ.

“ನಮ್ಮ ಮತದಾರರ ಸಂಖ್ಯೆ ಶೇಕಡಾವಾರು ನೋಡಿದರೆ ಸುಮಾರು ಮೂರನೇ ಒಂದು ಭಾಗ ಇದೆ. ಉಳಿದ ಜನರು ಬಿಜೆಪಿ ಸೇರಿದಂತೆ ಮೂರನೇ ಎರಡರಷ್ಟು ಇದ್ದಾರೆ. ಆದರೆ, ಬಿಜೆಪಿಯವರು ದೇಣಿಗೆಯಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪಡೆದಿದ್ದಾರೆ. ಅವರು ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಬಂಡವಾಳಶಾಹಿಗಳು ಅಥವಾ ಇತರ ಕಂಪನಿಗಳು ಈ ರೀತಿ ದೇಣಿಗೆ ನೀಡಬಹುದೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ದೇಣಿಗೆ ನೀಡಿದ ಕೆಲವೊಂದು ಕಂಪನಿಗಳು ಸಂಶಯಾಸ್ಪದವಾಗಿವೆ. ಅವರು ಯಾರು ಎಂದು ಗೊತ್ತಿಲ್ಲ. ಒಂದೋ ಅವರು ಇಡಿ, ಐಟಿ ಇಲಾಖೆಯ ಬೆದರಿಕೆಗೆ ಮಣಿದವರು ಆಗಿರಬಹುದು. ಮೋದಿ ಸರ್ಕಾರ ನಮ್ಮ ಪಕ್ಷಕ್ಕೆ ದೇಣಿಗೆ ನೀಡುವಂತೆ ಬೆದರಿಕೆ ಹಾಕಿರಬಹುದು. ಇಲ್ಲದಿದ್ದರೆ ಬಿಜೆಪಿ ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಎಂದು ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ನೀವು (ಬಿಜೆಪಿ) ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದೀರಿ. ಆದರೆ ಕಾಂಗ್ರೆಸ್ ಕಾರ್ಯಕರ್ತರು, ಸಂಸದರು ಮತ್ತು ಇತರ ಸಣ್ಣ ದಾನಿಗಳಿಂದ ದೇಣಿಗೆ ಪಡೆದರೆ, ನಮ್ಮ ಖಾತೆಗಳನ್ನೇ ಸ್ಥಗಿತಗೊಳಿಸಿದ್ದೀರಿ. ನೀವು 6,000 ಕೋಟಿ ರೂ.ಪಡೆದಿದ್ದೀರಿ. ನಮ್ಮ ಖಾತೆಗಳು ಸ್ಥಗಿತಗೊಂಡಿವೆ. ನಾವು ಹೇಗೆ ಚುನಾವಣೆ ಎದುರಿಸುವುದು? ವಿರೋಧ ಪಕ್ಷದ ಖಾತೆಯನ್ನು ಸ್ಥಗಿತಗೊಳಿಸಿದರೆ, ಅವರು ಚುನಾವಣೆಗೆ ಸ್ಪರ್ಧಿಸುವುದು ಹೇಗೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಹಂಚಿಕೊಳ್ಳದ ಎಸ್‌ಬಿಐ: ಮತ್ತೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...