Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

ಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

- Advertisement -
- Advertisement -

ಕೇಂದ್ರದ ಆಡಳಿತರೂಢ ಬಿಜೆಪಿ ಕಳೆದ ಐದು ವರ್ಷಗಳಲ್ಲಿ ಚುನಾವಣಾ ಬಾಂಡ್‌ ಮೂಲಕ 6,060 ಕೋಟಿ ರೂಪಾಯಿ ಪಡೆದಿರುವ ಕುರಿತು ವಿಶೇಷ ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಒತ್ತಾಯಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಯಂತಹ ಕೇಂದ್ರೀಯ ಸಂಸ್ಥೆಗಳ ದಾಳಿ ಎದುರಿಸಿದ ಬೆನ್ನಲ್ಲೇ ಹಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದಿರುವುದನ್ನು ಪ್ರಸ್ತಾಪಿಸಿದರು. ಬಿಜೆಪಿ ಕೋಟ್ಯಾಂತರ ರೂಪಾಯಿ ದೇಣಿಗೆ ಪಡೆದಿದ್ದರೂ, ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

‘ನಾ ಖಾವೂಂಗ ನಾ ಖಾನೆ ದೂಂಗಾ’ (ತಿನ್ನುವುದಿಲ್ಲ, ಇತರರನ್ನು ತಿನ್ನಲು ಬಿಡುವುದಿಲ್ಲ)’ ಎಂದು ಪ್ರಧಾನಿ ಹೇಳುತ್ತಾರೆ. ಆದರೆ, ಇಂದು ಬಿಜೆಪಿ ಚುನಾವಣಾ ಬಾಂಡ್‌ಗಳಿಂದ ಹಣ ಗಳಿಸಿದೆ ಎಂಬುವುದನ್ನು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದೆ. ಎಸ್‌ಬಿಐ ಅಂಕಿ ಅಂಶಗಳು ಬಿಜೆಪಿಗೆ 50ರಷ್ಟು ಮತ್ತು ಕಾಂಗ್ರೆಸ್‌ಗೆ ಶೇ.11ರಷ್ಟು ದೇಣಿಗೆ ಬಂದಿರುವುದಾಗಿ” ತೋರಿಸಿದೆ ಎಂದಿದ್ದಾರೆ.

“ನಮ್ಮ ಮತದಾರರ ಸಂಖ್ಯೆ ಶೇಕಡಾವಾರು ನೋಡಿದರೆ ಸುಮಾರು ಮೂರನೇ ಒಂದು ಭಾಗ ಇದೆ. ಉಳಿದ ಜನರು ಬಿಜೆಪಿ ಸೇರಿದಂತೆ ಮೂರನೇ ಎರಡರಷ್ಟು ಇದ್ದಾರೆ. ಆದರೆ, ಬಿಜೆಪಿಯವರು ದೇಣಿಗೆಯಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪಡೆದಿದ್ದಾರೆ. ಅವರು ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಬಂಡವಾಳಶಾಹಿಗಳು ಅಥವಾ ಇತರ ಕಂಪನಿಗಳು ಈ ರೀತಿ ದೇಣಿಗೆ ನೀಡಬಹುದೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ದೇಣಿಗೆ ನೀಡಿದ ಕೆಲವೊಂದು ಕಂಪನಿಗಳು ಸಂಶಯಾಸ್ಪದವಾಗಿವೆ. ಅವರು ಯಾರು ಎಂದು ಗೊತ್ತಿಲ್ಲ. ಒಂದೋ ಅವರು ಇಡಿ, ಐಟಿ ಇಲಾಖೆಯ ಬೆದರಿಕೆಗೆ ಮಣಿದವರು ಆಗಿರಬಹುದು. ಮೋದಿ ಸರ್ಕಾರ ನಮ್ಮ ಪಕ್ಷಕ್ಕೆ ದೇಣಿಗೆ ನೀಡುವಂತೆ ಬೆದರಿಕೆ ಹಾಕಿರಬಹುದು. ಇಲ್ಲದಿದ್ದರೆ ಬಿಜೆಪಿ ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಎಂದು ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ನೀವು (ಬಿಜೆಪಿ) ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದೀರಿ. ಆದರೆ ಕಾಂಗ್ರೆಸ್ ಕಾರ್ಯಕರ್ತರು, ಸಂಸದರು ಮತ್ತು ಇತರ ಸಣ್ಣ ದಾನಿಗಳಿಂದ ದೇಣಿಗೆ ಪಡೆದರೆ, ನಮ್ಮ ಖಾತೆಗಳನ್ನೇ ಸ್ಥಗಿತಗೊಳಿಸಿದ್ದೀರಿ. ನೀವು 6,000 ಕೋಟಿ ರೂ.ಪಡೆದಿದ್ದೀರಿ. ನಮ್ಮ ಖಾತೆಗಳು ಸ್ಥಗಿತಗೊಂಡಿವೆ. ನಾವು ಹೇಗೆ ಚುನಾವಣೆ ಎದುರಿಸುವುದು? ವಿರೋಧ ಪಕ್ಷದ ಖಾತೆಯನ್ನು ಸ್ಥಗಿತಗೊಳಿಸಿದರೆ, ಅವರು ಚುನಾವಣೆಗೆ ಸ್ಪರ್ಧಿಸುವುದು ಹೇಗೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಹಂಚಿಕೊಳ್ಳದ ಎಸ್‌ಬಿಐ: ಮತ್ತೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...