Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...