Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...