Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...