Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...