Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...