Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...