Homeಮುಖಪುಟಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

- Advertisement -
- Advertisement -

ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾಹಿತಿ ಬಹಿರಂಗಪಡಿಸಿದೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

ರೂ. 352 ಕೋಟಿ ದೇಣಿಗೆ ನೀಡುವ ಮೂಲಕ ಕೆವೆಂಟರ್ಸ್ ಗ್ರೂಪ್ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರೂ. 285 ಕೋಟಿ ನೀಡಿರುವ ಆದಿತ್ಯ ಬಿರ್ಲಾ ಗ್ರೂಪ್ ಮತ್ತು ರೂ. 236.4 ಕೋಟಿ ನೀಡಿರುವ ಭಾರ್ತಿ ಏರ್‌ಟೆಲ್ ಗ್ರೂಪ್ ಇದೆ.

ಬಿಜೆಪಿ ಏಪ್ರಿಲ್ 2019ರಿಂದ ಜನವರಿ 2024ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಒಟ್ಟು ರೂ. 6,060 ಕೋಟಿ ದೇಣಿಗೆಯಲ್ಲಿ ಮೂರನೇ ಒಂದು ಭಾಗ, ಅಂದರೆ ಬರೋಬ್ಬರಿ 2,082 ಕೋಟಿ ರೂಪಾಯಿಯನ್ನು ಮೇಲೆ ತಿಳಿಸಿದ ಕಂಪನಿಗಳು ನೀಡಿವೆ.

ಒಟ್ಟಾರೆಯಾಗಿ, ಮಾರ್ಚ್ 2018ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ರೂ 8,252 ಕೋಟಿ ಹಣ ಸ್ವೀಕರಿಸಿದೆ. ಮಾರ್ಚ್ 1, 2018 ರಿಂದ ಏಪ್ರಿಲ್ 12, 2019ರ ನಡುವೆ ಪಡೆದ ರೂ. 4,000 ಕೋಟಿ ಮೌಲ್ಯದ ಬಾಂಡ್‌ಗಳ ಮಾಹಿತಿ ಲಭ್ಯವಾಗಿಲ್ಲ.

ಮೇಘಾ ಗ್ರೂಪ್ :

ಮೇಘಾ ಗ್ರೂಪ್ ಬಿಜೆಪಿಗೆ ನೀಡಿದ 664 ಕೋಟಿ ರೂ.ಗಳಲ್ಲಿ 584 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‌ನಿಂದ ಬಂದಿದೆ. ಉಳಿದ 80 ಕೋಟಿ ರೂ. ಮೇಘಾ ಗ್ರೂಪ್‌ನ ಅಂಗ ಸಂಸ್ಥೆಯಾದ ಗಾಝಿಯಾಬಾದ್ ಮೂಲದ ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್ ಮಿಷನ್ ಕಂಪನಿಯಿಂದ ಬಂದಿದೆ.

ಒಟ್ಟಾರೆಯಾಗಿ, ಮೇಘಾ ಗ್ರೂಪ್ 1,186 ಕೋಟಿ ರೂಪಾಯಿ ದೇಣಿಗೆಯನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದೆ. ಈ ಪೈಕಿ ಬಿಜೆಪಿ ಶೇ.56ರಷ್ಟು ಪಡೆದಿದೆ.

ರಿಲಯನ್ಸ್-ಸಂಯೋಜಿತ ಸಂಸ್ಥೆಗಳು :

ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳು ಬಿಜೆಪಿಗೆ ಎರಡನೇ ಅತೀ ಹೆಚ್ಚು, ಅಂದರೆ 545 ಕೋಟಿ ರೂ. ದೇಣಿಗೆ ನೀಡಿವೆ. ಈ ಪೈಕಿ 375 ಕೋಟಿ ರೂ. (ಶೇ. 69ರಷ್ಟು) ಮುಂಬೈ ಮೂಲದ ಕ್ವಿಕ್ ಸಪ್ಲೈ ಚೈನ್ ಪ್ರೈವೆಟ್ ಲಿಮಿಟೆಡ್‌ನಿಂದ ಬಂದಿದೆ.

ಉಳಿದ 170 ಕೋಟಿ ರೂ. ಹಣ ಅಂಬಾನಿ ಅವರ ವ್ಯಾಪಾರ ಸಹವರ್ತಿ ಸುರೇಂದ್ರ ಲೂನಿಯಾ, ರಿಲಯನ್ಸ್ ಎಕ್ಸಿಕ್ಯೂಟಿವ್‌ಗಳಾದ ಲಕ್ಷ್ಮಿದಾಸ್ ಮರ್ಚೆಂಟ್ ಮತ್ತು ಕೆ ರಾಮಚಂದ್ರನ್ ರಾಜಾ, ರಿಲಯನ್ಸ್‌ ಗ್ರೂಪ್‌ನ ಹಲವು ಅಂಗ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿರುವ ಸತ್ಯನಾರಾಯಣಮೂರ್ತಿ ವೀರ ವೆಂಕಟ ಕೊರ್ಲೆಪ್‌ಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ಬಂದಿದೆ.

ಈ ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳ ಪೈಕಿ ಶೇ. 94ರಷ್ಟು ಬಿಜೆಪಿ ಸ್ವೀಕರಿಸಿದೆ.

ಕೆವೆಂಟರ್ಸ್ ಗ್ರೂಪ್ :

ಕೆವೆಂಟರ್ಸ್ ಗ್ರೂಪ್ ತನ್ನ ನಾಲ್ಕು ಅಂಗ ಸಂಸ್ಥೆಗಳಾದ ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ (ಪ್ರಸ್ತುತ ಮ್ಯಾಗ್ನಿಫಿಸೆಂಟ್ ಫುಡ್‌ಪಾರ್ಕ್ಸ್ ಪ್ರಾಜೆಕ್ಟ್ ಲಿಮಿಟೆಡ್) ಎಂಕೆಜೆ ಎಂಟರ್‌ಪ್ರೈಸಸ್, ಮದನ್‌ಲಾಲ್ ಲಿಮಿಟೆಡ್ ಮತ್ತು ಸಾಸ್ಮಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮೂಲಕ ಬಿಜೆಪಿಗೆ 351.92 ಕೋಟಿ ರೂ. ದೇಣಿಗೆ ನೀಡಿದೆ.

ಈ ಪೈಕಿ ಮದನ್‌ಲಾಲ್‌ ಕಂಪನಿ ಮೂಲಕ ಅತೀ ಹೆಚ್ಚು, ಅಂದರೆ 175 ಕೋಟಿ ರೂ. ನೀಡಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕೆವೆಂಟರ್ ಗ್ರೂಪ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಒಟ್ಟು 616.92 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 57ರಷ್ಟು ಪಡೆದಿದೆ.

ಆದಿತ್ಯ ಬಿರ್ಲಾ ಗ್ರೂಪ್‌:

ಆದಿತ್ಯ ಬಿರ್ಲಾ ಸಮೂಹವು ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕ 285 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಈ ಮೂಲಕ ಬಿಜೆಪಿ ಅತೀ ಹೆಚ್ಚು ದೇಣಿಗೆ ನೀಡಿದ ನಾಲ್ಕನೇ ದಾನಿ ಎನಿಸಿಕೊಂಡಿದೆ.

ಐದು ಅಂಗಸಂಸ್ಥೆಗಳಾದ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್, ಎಬಿಎನ್ಎಲ್ ಇನ್ವೆಸ್ಟ್ಮೆಂಟ್ ಲಿಮಿಟೆಡ್, ಬಿರ್ಲಾ ಕಾರ್ಬನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಉತ್ಕಲ್ ಅಲ್ಯುಮಿನಾ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಮತ್ತು ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ ಮೂಲಕ ಆದಿತ್ಯ ಬಿರ್ಲಾ ಗ್ರೂಪ್ ಬಿಜೆಪಿಗೆ ದೇಣಿಗೆ ನೀಡಿದೆ.

ಬಿರ್ಲಾ ಗ್ರೂಪ್‌ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು 555.8 ಕೋಟಿ ರೂಪಾಯಿ ದೇಣಿಗೆಯಲ್ಲಿ ಬಿಜೆಪಿ ಶೇ. 51ರಷ್ಟು ಪಡೆದಿದೆ.

ಇಂಡಿಯಾ ಟುಡೇ ಜೊತೆ ಸಂಪರ್ಕ ಹೊಂದಿರುವ ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್‌ ಬಿಜೆಪಿಗೆ ಸುಮಾರು 59 ಕೋಟಿ ರೂ. ನೀಡಿರುವುದು ಇಲ್ಲಿ ಗಮನಾರ್ಹ

ಇಂಡಿಯಾ ಟುಡೇ ಗ್ರೂಪ್‌ನ ಪ್ರಮುಖ ಹೋಲ್ಡಿಂಗ್ ಕಂಪನಿ ಲಿವಿಂಗ್ ಮೀಡಿಯಾ ಲಿಮಿಟೆಡ್ ಇದು ಶೇ. 51.61 ಶೇರ್ ಹೊಂದಿದ್ದು, ಉಳಿದ ಶೇ. 41.5 ಶೇರ್ ಅನ್ನು ಐಜಿಹೆಚ್ ಹೋಲ್ಡಿಂಗ್ಸ್ ಗ್ರೂಪ್ ಜೊತೆ ಹಂಚಿಕೊಂಡಿದೆ. ಐಜಿಹೆಚ್ ಕಂಪನಿಯು ಎಸ್ಸೆಲ್ ಮೈನಿಂಗ್ ಮತ್ತು ಇಂಡಸ್ಟ್ರೀಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಭಾರ್ತಿ ಏರ್ಟೆಲ್ ಗ್ರೂಪ್:

ಸುನಿಲ್ ಭಾರ್ತಿ ಮಿತ್ತಲ್ ನೇತೃತ್ವದ ಭಾರ್ತಿ ಏರ್‌ಟೆಲ್ ಗ್ರೂಪ್, ಭಾರ್ತಿ ಏರ್‌ಟೆಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಕರೆಂಟ್ ಎಸಿ ಜಿಸಿಒ, ಭಾರ್ತಿ ಇನ್‌ಫ್ರಾಟೆಲ್ ಮತ್ತು ಭಾರ್ತಿ ಟೆಲಿಮೀಡಿಯಾ ಎಂಬ ನಾಲ್ಕು ಸಂಸ್ಥೆಗಳ ಮೂಲಕ ಬಿಜೆಪಿಗೆ ರೂ. 236.4 ಕೋಟಿ ದೇಣಿಗೆ ನೀಡಿದೆ.

ಏರ್ಟೆಲ್ ಗ್ರೂಪ್‌ನ ನಾಲ್ಕು ಅಂಗ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್ ಲಿಮಿಟೆಡ್‌ 183 ಕೋಟಿ ರೂ. ದೇಣಿಗೆಯನ್ನು ಬಿಜೆಪಿಗೆ ನೀಡಿದೆ.

ಭಾರ್ತಿ ಏರ್‌ಟೆಲ್ ಗ್ರೂಪ್ ಒಟ್ಟು 247 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ. ಅದರಲ್ಲಿ ಶೇ. 96 ರಷ್ಟು ಬಿಜೆಪಿ ತನ್ನದಾಗಿಸಿಕೊಂಡಿದೆ.

ವೇದಾಂತ :

ಲೋಹ ಮತ್ತು ಗಣಿಗಾರಿಕೆ ಕಂಪನಿಗಳ ಗ್ರೂಪ್ ವೇದಾಂತ ಬಿಜೆಪಿಗೆ 230.15 ರೂ. ದೇಣಿಗೆ ನೀಡಿದೆ. ವೇದಾಂತ ಗ್ರೂಪ್ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ಇದು 400.65 ಕೋಟಿ ರೂ. ದೇಣಿಗೆಯಲ್ಲಿ ಶೇ. 57ರಷ್ಟು ಬಿಜೆಪಿ ಪಡೆದಿದೆ.

ಮಾಹಿತಿ ಕೃಪೆ: newslaundry

ಇದನ್ನೂ ಓದಿ: ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...