Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ 'ಮೋಸ':...

ಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ ‘ಮೋಸ’: ವರದಿ

ರೈತರ ಭೂ ಸ್ವಾಧೀನ ಪರಿಹಾರ ಹಣದಲ್ಲಿ ಅವರಿಗೇ ಗೊತ್ತಿಲ್ಲದೆ ಚುನಾವಣಾ ಬಾಂಡ್‌ ಖರೀದಿಸಿದ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯ ಅಧಿಕಾರಿ

- Advertisement -
- Advertisement -

ಅಕ್ಟೋಬರ್ 11,2023 ರಂದು, ಗುಜರಾತ್‌ನ ಕಚ್ ಜಿಲ್ಲೆಯ ಅಂಜಾರ್‌ನ ದಲಿತ ಕುಟುಂಬದ ಆರು ಸದಸ್ಯರ ಹೆಸರಿನಲ್ಲಿ 11 ಕೋಟಿ 14 ಸಾವಿರ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಲಾಗಿತ್ತು.

ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಎಸ್‌ಬಿಐನ ಅಂಕಿ ಅಂಶಗಳ ಪ್ರಕಾರ, ಇವುಗಳಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಅಕ್ಟೋಬರ್ 2023 ರಂದು ಮತ್ತು 1 ಕೋಟಿ 14 ಸಾವಿರ ಮೌಲ್ಯದ ಬಾಂಡ್‌ಗಳನ್ನು 18 ಅಕ್ಟೋಬರ್ 2023 ರಂದು ಶಿವಸೇನೆ ನಗದೀಕರಿಸಿಕೊಂಡಿವೆ.

ಇದೀಗ ದಲಿತ ಕುಟುಂಬವು, ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯಾದ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಅಧಿಕಾರಿ ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದೆ.

2005 ರಲ್ಲಿ, ಅದಾನಿ ಗ್ರೂಪ್ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್ (ಎಡಬ್ಲ್ಯುಇಎಲ್) ಎಂಬ ಜಂಟಿ ಉದ್ಯಮವನ್ನು ಸ್ಥಾಪಿಸಿದೆ. ಅದಾನಿ ಗ್ರೂಪ್‌ನ ಪತ್ರಿಕಾ ಪ್ರಕಟಣೆಯ ಪ್ರಕಾರ, ಎಡಬ್ಲ್ಯುಇಎಲ್ ಮತ್ತು ಅದಾನಿ ಕಂಪನಿಯಲ್ಲಿ 65:35 ಶೇರು ಪಾಲು ಹೊಂದಿದೆ.

ದಿ ಕ್ವಿಂಟ್ ಜೊತೆ ಮಾತನಾಡಿರುವ ದಲಿತ ಕುಟುಂಬದ 41 ವರ್ಷದ ಹರೇಶ್ ಸಾವಕಾರ, ” ವೆಲ್‌ಸ್ಪನ್ ಕಂಪನಿಯು ಅಂಜಾರ್‌ನಲ್ಲಿನ ನಮ್ಮ ಕೃಷಿ ಭೂಮಿಯಲ್ಲಿ ಸುಮಾರು 43,000 ಚದರ ಮೀಟರ್ ಅನ್ನು ಪ್ರಾಜೆಕ್ಟ್‌ಗಾಗಿ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರವಾಗಿ ಕಂಪನಿ ನಮಗೆ ಹಣ ಕೊಡಬೇಕಾಗಿತ್ತು. ಆದರೆ, ಕಂಪನಿಯ ಹಿರಿಯ ಜನರಲ್ ಮ್ಯಾನೇಜರ್ ಮಹೇಂದ್ರಸಿನ್ಹ್ ಸೋಧಾ ಎಂಬವರು, “ಇಷ್ಟೊಂದು ಮೊತ್ತದ ಹಣ ನೀವು ನೇರವಾಗಿ ಸ್ವೀಕರಿಸಿದರೆ ಮುಂದೆ ಆದಾಯ ತೆರಿಗೆ ಇಲಾಖೆಯಿಂದ ಸಮಸ್ಯೆಯಾಗಬಹುದು” ಎಂದು ನಮಗೆ ಚುನಾವಣಾ ಬಾಂಡ್‌ ಖರೀದಿಸುವಂತೆ ಮಾಡಿದ್ದರು. ನಾವು ಚುನಾವಣಾ ಬಾಂಡ್ ಖರೀದಿಸುವಾಗ, “ನಿಮ್ಮ ಹಣ ಮುಂದಿನ ಕೆಲ ವರ್ಷಗಳಲ್ಲಿ 1.5 ಪಟ್ಟು ಹೆಚ್ಚಾಗಲಿದೆ ಎಂದಿದ್ದರು. ನಾವು ಅನಕ್ಷರಸ್ಥರಾದ ಕಾರಣ ನಮಗೆ ಏನೂ ಗೊತ್ತಿರಲಿಲ್ಲ. ಆದರೆ, ಈಗ ಚುನಾವಣಾ ಬಾಂಡ್ ಹಗರಣದ ಬಗ್ಗೆ ಗೊತ್ತಾಗುತ್ತಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ಮೋಸ ಮಾಡಲಾಗಿದೆ ಎನ್ನಲಾದ ದಲಿತ ಕುಟುಂಬದ ಆರು ಜನರಲ್ಲಿ ಒಬ್ಬರಾದ ಸಾವಕರ ಮನ್ವರ್ ಅವರ ಮಗನಾಗಿದ್ದಾರೆ ಹರೇಶ್ ಸಾವಕಾರ.

ಸಾವಕರ ಅವರು 18 ಮಾರ್ಚ್ 2024 ರಂದು ಅಂಜಾರ್ ಪೊಲೀಸ್ ಠಾಣೆಯಲ್ಲಿ ತನಗಾದ ಮೋಸದ ಬಗ್ಗೆ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರತಿಯಲ್ಲಿ ವೆಲ್‌ಸ್ಪನ್ ಕಂಪನಿ ನಿರ್ದೇಶಕರಾದ ವಿಶ್ವನಾಥನ್ ಕೊಲ್ಲೆಂಗೋಡ್, ಸಂಜಯ್ ಗುಪ್ತಾ, ಚಿಂತನ್ ಠಾಕರ್ ಮತ್ತು ಪ್ರವೀಣ್ ಬನ್ಸಾಲಿ ಅವರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ, ಜೊತೆಗೆ ಮಹೇಂದ್ರಸಿನ್ಹ್ ಸೋಧಾ (ವೆಲ್‌ಸ್ಪನ್‌ನ ಹಿರಿಯ ಜನರಲ್ ಮ್ಯಾನೇಜರ್), ವಿಮಲ್ ಕಿಶೋರ್ ಜೋಶಿ (ಅಂಜರ್ ಭೂಸ್ವಾಧೀನ ಅಧಿಕಾರಿ ) ಮತ್ತು ಹೇಮಂತ್ ಅಲಿಯಾಸ್ ಡ್ಯಾನಿ ರಜನಿಕಾಂತ್ ಶಾ (ಬಿಜೆಪಿಯ ನಗರ ಸಿಟಿ ಅಧ್ಯಕ್ಷ) ಅವರ ಹೆಸರುಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಕ್ವಿಂಟ್ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಕೊಳ್ಳಬೇಕಿದೆ. ಪ್ರಕರಣದ ತನಿಖಾಧಿಕಾರಿ ಶೈಲೇಂದ್ರ ಸಿಸೋಡಿಯಾ ಅವರು ದಿ ಕ್ವಿಂಟ್‌ನೊಂದಿಗೆ ಮಾತನಾಡುತ್ತಾ, “ಅವರು ನಮಗೆ ದೂರು ನೀಡಿದ್ದಾರೆ. ನಾವು ಅದನ್ನು ಇನ್ನೂ ಪರಿಶೀಲಿಸುತ್ತಿದ್ದೇವೆ. ಒಮ್ಮೆ ಪರಿಶೀಲನೆ ಪೂರ್ಣಗೊಂಡು ಪ್ರಕರಣವು ಎಫ್‌ಐಆರ್‌ಗೆ ಅರ್ಹವಾಗಿದ್ದರೆ, ನಾವು ಎಫ್‌ಐಆರ್‌ ದಾಖಲಿಸುತ್ತೇವೆ ಎಂದಿದ್ದಾರೆ.

ಅಂಜಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ನೀಡಿದ ದೂರಿನಲ್ಲಿ, ದೂರುದಾರರು ಆಗಸ್ಟ್ 2023 ರಲ್ಲಿ ತಮ್ಮ ಕೃಷಿ ಭೂಮಿಯನ್ನು ವೆಲ್‌ಸ್ಪನ್ ಕಂಪನಿಗೆ 16,61,21,877 (ಹದಿನಾರು ಕೋಟಿ ಅರವತ್ತೊಂದು ಲಕ್ಷದ ಇಪ್ಪತ್ತೊಂದು ಸಾವಿರ ಎಂಟುನೂರ ಎಪ್ಪತ್ತೇಳು ರೂಪಾಯಿ)ಗೆ ಮಾರಾಟ ಮಾಡಲು ಅನುಮತಿ ಒಪ್ಪಿದ್ದೆವು.

ಇದರಲ್ಲಿ 2,80,15,000 (ಎರಡು ಕೋಟಿ ಎಂಬತ್ತು ಲಕ್ಷದ ಹದಿನೈದು ಸಾವಿರ) ಮುಂಗಡವಾಗಿ ಪಾವತಿಸಲಾಗಿತ್ತು. ಉಳಿದ 13,81,09,877 (ಹದಿಮೂರು ಕೋಟಿ ಎಂಬತ್ತೊಂದು ಲಕ್ಷದ ಒಂಬತ್ತು ಸಾವಿರದ ಎಂಟು ನೂರ ಎಪ್ಪತ್ತೇಳು) ಅನ್ನು ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಏಳು ಜಂಟಿ ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಕ್ಟೋಬರ್ 1, 2023 ಮತ್ತು 8 ಅಕ್ಟೋಬರ್ 2023ರ ನಡುವೆ, ಸ್ವಾಧೀನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ವೆಲ್‌ಸ್ಪನ್ ಉದ್ಯೋಗಿ ಮಹೇಂದ್ರಸಿನ್ಹ್ ಸೋಧಾ, ಹೆಚ್ಚು ಹಣ ಇಟ್ಟುಕೊಳ್ಳುವುದರಿಂದ ಆದಾಯ ತೆರಿಗೆ ಸಮಸ್ಯೆ ಮತ್ತು ಚುನಾವಣಾ ಬಾಂಡ್‌ನ ಲಾಭಗಳ ಬಗ್ಗೆ ಕಂಪನಿಯ ಕಾಂಪೌಂಡ್‌ನಲ್ಲಿರುವ ವೆಲ್‌ಸ್ಪನ್‌ನ ಅತಿಥಿ ಗೃಹದಲ್ಲಿ ಸಾವಕಾರ ಮತ್ತು ಅವರ ಮಗ ಹರೇಶ್ ಅವರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿ ಹಣ ಹೂಡಿಕೆ ಮಾಡಲು ಮನವರಿಕೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

“ದಲಿತ ಕುಟುಂಬದರ ಸದಸ್ಯರ ಖಾತೆಗಳಿಗೆ ಮೊದಲು ಹಣವನ್ನು ಜಮಾ ಮಾಡಿದ ದಿನಾಂಕಗಳ ವಿವರಗಳನ್ನು ದೃಢೀಕರಿಸಲು ಬ್ಯಾಂಕ್ ರಸೀದಿಗಳನ್ನು ನಾವು ನೋಡಿದ್ದೇವೆ ಮತ್ತು ನಂತರ ಎಸ್‌ಬಿಐನ ಗಾಂಧಿನಗರ ಶಾಖೆಯಲ್ಲಿ ಅದನ್ನು ನಗದೀಕರಿಸಿಕೊಂಡಿರುವುದನ್ನು ತಿಳಿದುಕೊಂಡಿದ್ದೇವೆ. ಮಾಡಲಾಗಿದೆ. ಕುಟುಂಬದವರು ಖರೀದಿಸಿದ ಬಾಂಡ್‌ಗಳ ಪ್ರತಿಗಳನ್ನು ಸಹ ನಾವು ನೋಡಿದ್ದೇವೆ” ಎಂದು ಕ್ವಿಂಟ್ ಹೇಳಿದೆ.

ಬಿಜೆಪಿ ಅಂಜಾರ್ ನಗರ ಅಧ್ಯಕ್ಷ ಹೇಮಂತ್ ರಜನಿಕಾಂತ್ ಶಾ ಈ ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ಸಾವಕಾರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ, ಕ್ವಿಂಟ್ ಜೊತೆ ಮಾತನಾಡಿರುವ ಶಾ ಅವರು ಈ ಪ್ರಕರಣದ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಹಗರಣದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...