Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ 'ಮೋಸ':...

ಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ ‘ಮೋಸ’: ವರದಿ

ರೈತರ ಭೂ ಸ್ವಾಧೀನ ಪರಿಹಾರ ಹಣದಲ್ಲಿ ಅವರಿಗೇ ಗೊತ್ತಿಲ್ಲದೆ ಚುನಾವಣಾ ಬಾಂಡ್‌ ಖರೀದಿಸಿದ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯ ಅಧಿಕಾರಿ

- Advertisement -
- Advertisement -

ಅಕ್ಟೋಬರ್ 11,2023 ರಂದು, ಗುಜರಾತ್‌ನ ಕಚ್ ಜಿಲ್ಲೆಯ ಅಂಜಾರ್‌ನ ದಲಿತ ಕುಟುಂಬದ ಆರು ಸದಸ್ಯರ ಹೆಸರಿನಲ್ಲಿ 11 ಕೋಟಿ 14 ಸಾವಿರ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಲಾಗಿತ್ತು.

ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಎಸ್‌ಬಿಐನ ಅಂಕಿ ಅಂಶಗಳ ಪ್ರಕಾರ, ಇವುಗಳಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಅಕ್ಟೋಬರ್ 2023 ರಂದು ಮತ್ತು 1 ಕೋಟಿ 14 ಸಾವಿರ ಮೌಲ್ಯದ ಬಾಂಡ್‌ಗಳನ್ನು 18 ಅಕ್ಟೋಬರ್ 2023 ರಂದು ಶಿವಸೇನೆ ನಗದೀಕರಿಸಿಕೊಂಡಿವೆ.

ಇದೀಗ ದಲಿತ ಕುಟುಂಬವು, ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯಾದ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಅಧಿಕಾರಿ ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದೆ.

2005 ರಲ್ಲಿ, ಅದಾನಿ ಗ್ರೂಪ್ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್ (ಎಡಬ್ಲ್ಯುಇಎಲ್) ಎಂಬ ಜಂಟಿ ಉದ್ಯಮವನ್ನು ಸ್ಥಾಪಿಸಿದೆ. ಅದಾನಿ ಗ್ರೂಪ್‌ನ ಪತ್ರಿಕಾ ಪ್ರಕಟಣೆಯ ಪ್ರಕಾರ, ಎಡಬ್ಲ್ಯುಇಎಲ್ ಮತ್ತು ಅದಾನಿ ಕಂಪನಿಯಲ್ಲಿ 65:35 ಶೇರು ಪಾಲು ಹೊಂದಿದೆ.

ದಿ ಕ್ವಿಂಟ್ ಜೊತೆ ಮಾತನಾಡಿರುವ ದಲಿತ ಕುಟುಂಬದ 41 ವರ್ಷದ ಹರೇಶ್ ಸಾವಕಾರ, ” ವೆಲ್‌ಸ್ಪನ್ ಕಂಪನಿಯು ಅಂಜಾರ್‌ನಲ್ಲಿನ ನಮ್ಮ ಕೃಷಿ ಭೂಮಿಯಲ್ಲಿ ಸುಮಾರು 43,000 ಚದರ ಮೀಟರ್ ಅನ್ನು ಪ್ರಾಜೆಕ್ಟ್‌ಗಾಗಿ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರವಾಗಿ ಕಂಪನಿ ನಮಗೆ ಹಣ ಕೊಡಬೇಕಾಗಿತ್ತು. ಆದರೆ, ಕಂಪನಿಯ ಹಿರಿಯ ಜನರಲ್ ಮ್ಯಾನೇಜರ್ ಮಹೇಂದ್ರಸಿನ್ಹ್ ಸೋಧಾ ಎಂಬವರು, “ಇಷ್ಟೊಂದು ಮೊತ್ತದ ಹಣ ನೀವು ನೇರವಾಗಿ ಸ್ವೀಕರಿಸಿದರೆ ಮುಂದೆ ಆದಾಯ ತೆರಿಗೆ ಇಲಾಖೆಯಿಂದ ಸಮಸ್ಯೆಯಾಗಬಹುದು” ಎಂದು ನಮಗೆ ಚುನಾವಣಾ ಬಾಂಡ್‌ ಖರೀದಿಸುವಂತೆ ಮಾಡಿದ್ದರು. ನಾವು ಚುನಾವಣಾ ಬಾಂಡ್ ಖರೀದಿಸುವಾಗ, “ನಿಮ್ಮ ಹಣ ಮುಂದಿನ ಕೆಲ ವರ್ಷಗಳಲ್ಲಿ 1.5 ಪಟ್ಟು ಹೆಚ್ಚಾಗಲಿದೆ ಎಂದಿದ್ದರು. ನಾವು ಅನಕ್ಷರಸ್ಥರಾದ ಕಾರಣ ನಮಗೆ ಏನೂ ಗೊತ್ತಿರಲಿಲ್ಲ. ಆದರೆ, ಈಗ ಚುನಾವಣಾ ಬಾಂಡ್ ಹಗರಣದ ಬಗ್ಗೆ ಗೊತ್ತಾಗುತ್ತಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ಮೋಸ ಮಾಡಲಾಗಿದೆ ಎನ್ನಲಾದ ದಲಿತ ಕುಟುಂಬದ ಆರು ಜನರಲ್ಲಿ ಒಬ್ಬರಾದ ಸಾವಕರ ಮನ್ವರ್ ಅವರ ಮಗನಾಗಿದ್ದಾರೆ ಹರೇಶ್ ಸಾವಕಾರ.

ಸಾವಕರ ಅವರು 18 ಮಾರ್ಚ್ 2024 ರಂದು ಅಂಜಾರ್ ಪೊಲೀಸ್ ಠಾಣೆಯಲ್ಲಿ ತನಗಾದ ಮೋಸದ ಬಗ್ಗೆ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರತಿಯಲ್ಲಿ ವೆಲ್‌ಸ್ಪನ್ ಕಂಪನಿ ನಿರ್ದೇಶಕರಾದ ವಿಶ್ವನಾಥನ್ ಕೊಲ್ಲೆಂಗೋಡ್, ಸಂಜಯ್ ಗುಪ್ತಾ, ಚಿಂತನ್ ಠಾಕರ್ ಮತ್ತು ಪ್ರವೀಣ್ ಬನ್ಸಾಲಿ ಅವರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ, ಜೊತೆಗೆ ಮಹೇಂದ್ರಸಿನ್ಹ್ ಸೋಧಾ (ವೆಲ್‌ಸ್ಪನ್‌ನ ಹಿರಿಯ ಜನರಲ್ ಮ್ಯಾನೇಜರ್), ವಿಮಲ್ ಕಿಶೋರ್ ಜೋಶಿ (ಅಂಜರ್ ಭೂಸ್ವಾಧೀನ ಅಧಿಕಾರಿ ) ಮತ್ತು ಹೇಮಂತ್ ಅಲಿಯಾಸ್ ಡ್ಯಾನಿ ರಜನಿಕಾಂತ್ ಶಾ (ಬಿಜೆಪಿಯ ನಗರ ಸಿಟಿ ಅಧ್ಯಕ್ಷ) ಅವರ ಹೆಸರುಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಕ್ವಿಂಟ್ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಕೊಳ್ಳಬೇಕಿದೆ. ಪ್ರಕರಣದ ತನಿಖಾಧಿಕಾರಿ ಶೈಲೇಂದ್ರ ಸಿಸೋಡಿಯಾ ಅವರು ದಿ ಕ್ವಿಂಟ್‌ನೊಂದಿಗೆ ಮಾತನಾಡುತ್ತಾ, “ಅವರು ನಮಗೆ ದೂರು ನೀಡಿದ್ದಾರೆ. ನಾವು ಅದನ್ನು ಇನ್ನೂ ಪರಿಶೀಲಿಸುತ್ತಿದ್ದೇವೆ. ಒಮ್ಮೆ ಪರಿಶೀಲನೆ ಪೂರ್ಣಗೊಂಡು ಪ್ರಕರಣವು ಎಫ್‌ಐಆರ್‌ಗೆ ಅರ್ಹವಾಗಿದ್ದರೆ, ನಾವು ಎಫ್‌ಐಆರ್‌ ದಾಖಲಿಸುತ್ತೇವೆ ಎಂದಿದ್ದಾರೆ.

ಅಂಜಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ನೀಡಿದ ದೂರಿನಲ್ಲಿ, ದೂರುದಾರರು ಆಗಸ್ಟ್ 2023 ರಲ್ಲಿ ತಮ್ಮ ಕೃಷಿ ಭೂಮಿಯನ್ನು ವೆಲ್‌ಸ್ಪನ್ ಕಂಪನಿಗೆ 16,61,21,877 (ಹದಿನಾರು ಕೋಟಿ ಅರವತ್ತೊಂದು ಲಕ್ಷದ ಇಪ್ಪತ್ತೊಂದು ಸಾವಿರ ಎಂಟುನೂರ ಎಪ್ಪತ್ತೇಳು ರೂಪಾಯಿ)ಗೆ ಮಾರಾಟ ಮಾಡಲು ಅನುಮತಿ ಒಪ್ಪಿದ್ದೆವು.

ಇದರಲ್ಲಿ 2,80,15,000 (ಎರಡು ಕೋಟಿ ಎಂಬತ್ತು ಲಕ್ಷದ ಹದಿನೈದು ಸಾವಿರ) ಮುಂಗಡವಾಗಿ ಪಾವತಿಸಲಾಗಿತ್ತು. ಉಳಿದ 13,81,09,877 (ಹದಿಮೂರು ಕೋಟಿ ಎಂಬತ್ತೊಂದು ಲಕ್ಷದ ಒಂಬತ್ತು ಸಾವಿರದ ಎಂಟು ನೂರ ಎಪ್ಪತ್ತೇಳು) ಅನ್ನು ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಏಳು ಜಂಟಿ ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಕ್ಟೋಬರ್ 1, 2023 ಮತ್ತು 8 ಅಕ್ಟೋಬರ್ 2023ರ ನಡುವೆ, ಸ್ವಾಧೀನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ವೆಲ್‌ಸ್ಪನ್ ಉದ್ಯೋಗಿ ಮಹೇಂದ್ರಸಿನ್ಹ್ ಸೋಧಾ, ಹೆಚ್ಚು ಹಣ ಇಟ್ಟುಕೊಳ್ಳುವುದರಿಂದ ಆದಾಯ ತೆರಿಗೆ ಸಮಸ್ಯೆ ಮತ್ತು ಚುನಾವಣಾ ಬಾಂಡ್‌ನ ಲಾಭಗಳ ಬಗ್ಗೆ ಕಂಪನಿಯ ಕಾಂಪೌಂಡ್‌ನಲ್ಲಿರುವ ವೆಲ್‌ಸ್ಪನ್‌ನ ಅತಿಥಿ ಗೃಹದಲ್ಲಿ ಸಾವಕಾರ ಮತ್ತು ಅವರ ಮಗ ಹರೇಶ್ ಅವರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿ ಹಣ ಹೂಡಿಕೆ ಮಾಡಲು ಮನವರಿಕೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

“ದಲಿತ ಕುಟುಂಬದರ ಸದಸ್ಯರ ಖಾತೆಗಳಿಗೆ ಮೊದಲು ಹಣವನ್ನು ಜಮಾ ಮಾಡಿದ ದಿನಾಂಕಗಳ ವಿವರಗಳನ್ನು ದೃಢೀಕರಿಸಲು ಬ್ಯಾಂಕ್ ರಸೀದಿಗಳನ್ನು ನಾವು ನೋಡಿದ್ದೇವೆ ಮತ್ತು ನಂತರ ಎಸ್‌ಬಿಐನ ಗಾಂಧಿನಗರ ಶಾಖೆಯಲ್ಲಿ ಅದನ್ನು ನಗದೀಕರಿಸಿಕೊಂಡಿರುವುದನ್ನು ತಿಳಿದುಕೊಂಡಿದ್ದೇವೆ. ಮಾಡಲಾಗಿದೆ. ಕುಟುಂಬದವರು ಖರೀದಿಸಿದ ಬಾಂಡ್‌ಗಳ ಪ್ರತಿಗಳನ್ನು ಸಹ ನಾವು ನೋಡಿದ್ದೇವೆ” ಎಂದು ಕ್ವಿಂಟ್ ಹೇಳಿದೆ.

ಬಿಜೆಪಿ ಅಂಜಾರ್ ನಗರ ಅಧ್ಯಕ್ಷ ಹೇಮಂತ್ ರಜನಿಕಾಂತ್ ಶಾ ಈ ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ಸಾವಕಾರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ, ಕ್ವಿಂಟ್ ಜೊತೆ ಮಾತನಾಡಿರುವ ಶಾ ಅವರು ಈ ಪ್ರಕರಣದ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಹಗರಣದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...