Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ 'ಮೋಸ':...

ಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ ‘ಮೋಸ’: ವರದಿ

ರೈತರ ಭೂ ಸ್ವಾಧೀನ ಪರಿಹಾರ ಹಣದಲ್ಲಿ ಅವರಿಗೇ ಗೊತ್ತಿಲ್ಲದೆ ಚುನಾವಣಾ ಬಾಂಡ್‌ ಖರೀದಿಸಿದ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯ ಅಧಿಕಾರಿ

- Advertisement -
- Advertisement -

ಅಕ್ಟೋಬರ್ 11,2023 ರಂದು, ಗುಜರಾತ್‌ನ ಕಚ್ ಜಿಲ್ಲೆಯ ಅಂಜಾರ್‌ನ ದಲಿತ ಕುಟುಂಬದ ಆರು ಸದಸ್ಯರ ಹೆಸರಿನಲ್ಲಿ 11 ಕೋಟಿ 14 ಸಾವಿರ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಲಾಗಿತ್ತು.

ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಎಸ್‌ಬಿಐನ ಅಂಕಿ ಅಂಶಗಳ ಪ್ರಕಾರ, ಇವುಗಳಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಅಕ್ಟೋಬರ್ 2023 ರಂದು ಮತ್ತು 1 ಕೋಟಿ 14 ಸಾವಿರ ಮೌಲ್ಯದ ಬಾಂಡ್‌ಗಳನ್ನು 18 ಅಕ್ಟೋಬರ್ 2023 ರಂದು ಶಿವಸೇನೆ ನಗದೀಕರಿಸಿಕೊಂಡಿವೆ.

ಇದೀಗ ದಲಿತ ಕುಟುಂಬವು, ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯಾದ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಅಧಿಕಾರಿ ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದೆ.

2005 ರಲ್ಲಿ, ಅದಾನಿ ಗ್ರೂಪ್ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್ (ಎಡಬ್ಲ್ಯುಇಎಲ್) ಎಂಬ ಜಂಟಿ ಉದ್ಯಮವನ್ನು ಸ್ಥಾಪಿಸಿದೆ. ಅದಾನಿ ಗ್ರೂಪ್‌ನ ಪತ್ರಿಕಾ ಪ್ರಕಟಣೆಯ ಪ್ರಕಾರ, ಎಡಬ್ಲ್ಯುಇಎಲ್ ಮತ್ತು ಅದಾನಿ ಕಂಪನಿಯಲ್ಲಿ 65:35 ಶೇರು ಪಾಲು ಹೊಂದಿದೆ.

ದಿ ಕ್ವಿಂಟ್ ಜೊತೆ ಮಾತನಾಡಿರುವ ದಲಿತ ಕುಟುಂಬದ 41 ವರ್ಷದ ಹರೇಶ್ ಸಾವಕಾರ, ” ವೆಲ್‌ಸ್ಪನ್ ಕಂಪನಿಯು ಅಂಜಾರ್‌ನಲ್ಲಿನ ನಮ್ಮ ಕೃಷಿ ಭೂಮಿಯಲ್ಲಿ ಸುಮಾರು 43,000 ಚದರ ಮೀಟರ್ ಅನ್ನು ಪ್ರಾಜೆಕ್ಟ್‌ಗಾಗಿ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರವಾಗಿ ಕಂಪನಿ ನಮಗೆ ಹಣ ಕೊಡಬೇಕಾಗಿತ್ತು. ಆದರೆ, ಕಂಪನಿಯ ಹಿರಿಯ ಜನರಲ್ ಮ್ಯಾನೇಜರ್ ಮಹೇಂದ್ರಸಿನ್ಹ್ ಸೋಧಾ ಎಂಬವರು, “ಇಷ್ಟೊಂದು ಮೊತ್ತದ ಹಣ ನೀವು ನೇರವಾಗಿ ಸ್ವೀಕರಿಸಿದರೆ ಮುಂದೆ ಆದಾಯ ತೆರಿಗೆ ಇಲಾಖೆಯಿಂದ ಸಮಸ್ಯೆಯಾಗಬಹುದು” ಎಂದು ನಮಗೆ ಚುನಾವಣಾ ಬಾಂಡ್‌ ಖರೀದಿಸುವಂತೆ ಮಾಡಿದ್ದರು. ನಾವು ಚುನಾವಣಾ ಬಾಂಡ್ ಖರೀದಿಸುವಾಗ, “ನಿಮ್ಮ ಹಣ ಮುಂದಿನ ಕೆಲ ವರ್ಷಗಳಲ್ಲಿ 1.5 ಪಟ್ಟು ಹೆಚ್ಚಾಗಲಿದೆ ಎಂದಿದ್ದರು. ನಾವು ಅನಕ್ಷರಸ್ಥರಾದ ಕಾರಣ ನಮಗೆ ಏನೂ ಗೊತ್ತಿರಲಿಲ್ಲ. ಆದರೆ, ಈಗ ಚುನಾವಣಾ ಬಾಂಡ್ ಹಗರಣದ ಬಗ್ಗೆ ಗೊತ್ತಾಗುತ್ತಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ಮೋಸ ಮಾಡಲಾಗಿದೆ ಎನ್ನಲಾದ ದಲಿತ ಕುಟುಂಬದ ಆರು ಜನರಲ್ಲಿ ಒಬ್ಬರಾದ ಸಾವಕರ ಮನ್ವರ್ ಅವರ ಮಗನಾಗಿದ್ದಾರೆ ಹರೇಶ್ ಸಾವಕಾರ.

ಸಾವಕರ ಅವರು 18 ಮಾರ್ಚ್ 2024 ರಂದು ಅಂಜಾರ್ ಪೊಲೀಸ್ ಠಾಣೆಯಲ್ಲಿ ತನಗಾದ ಮೋಸದ ಬಗ್ಗೆ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರತಿಯಲ್ಲಿ ವೆಲ್‌ಸ್ಪನ್ ಕಂಪನಿ ನಿರ್ದೇಶಕರಾದ ವಿಶ್ವನಾಥನ್ ಕೊಲ್ಲೆಂಗೋಡ್, ಸಂಜಯ್ ಗುಪ್ತಾ, ಚಿಂತನ್ ಠಾಕರ್ ಮತ್ತು ಪ್ರವೀಣ್ ಬನ್ಸಾಲಿ ಅವರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ, ಜೊತೆಗೆ ಮಹೇಂದ್ರಸಿನ್ಹ್ ಸೋಧಾ (ವೆಲ್‌ಸ್ಪನ್‌ನ ಹಿರಿಯ ಜನರಲ್ ಮ್ಯಾನೇಜರ್), ವಿಮಲ್ ಕಿಶೋರ್ ಜೋಶಿ (ಅಂಜರ್ ಭೂಸ್ವಾಧೀನ ಅಧಿಕಾರಿ ) ಮತ್ತು ಹೇಮಂತ್ ಅಲಿಯಾಸ್ ಡ್ಯಾನಿ ರಜನಿಕಾಂತ್ ಶಾ (ಬಿಜೆಪಿಯ ನಗರ ಸಿಟಿ ಅಧ್ಯಕ್ಷ) ಅವರ ಹೆಸರುಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಕ್ವಿಂಟ್ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಕೊಳ್ಳಬೇಕಿದೆ. ಪ್ರಕರಣದ ತನಿಖಾಧಿಕಾರಿ ಶೈಲೇಂದ್ರ ಸಿಸೋಡಿಯಾ ಅವರು ದಿ ಕ್ವಿಂಟ್‌ನೊಂದಿಗೆ ಮಾತನಾಡುತ್ತಾ, “ಅವರು ನಮಗೆ ದೂರು ನೀಡಿದ್ದಾರೆ. ನಾವು ಅದನ್ನು ಇನ್ನೂ ಪರಿಶೀಲಿಸುತ್ತಿದ್ದೇವೆ. ಒಮ್ಮೆ ಪರಿಶೀಲನೆ ಪೂರ್ಣಗೊಂಡು ಪ್ರಕರಣವು ಎಫ್‌ಐಆರ್‌ಗೆ ಅರ್ಹವಾಗಿದ್ದರೆ, ನಾವು ಎಫ್‌ಐಆರ್‌ ದಾಖಲಿಸುತ್ತೇವೆ ಎಂದಿದ್ದಾರೆ.

ಅಂಜಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ನೀಡಿದ ದೂರಿನಲ್ಲಿ, ದೂರುದಾರರು ಆಗಸ್ಟ್ 2023 ರಲ್ಲಿ ತಮ್ಮ ಕೃಷಿ ಭೂಮಿಯನ್ನು ವೆಲ್‌ಸ್ಪನ್ ಕಂಪನಿಗೆ 16,61,21,877 (ಹದಿನಾರು ಕೋಟಿ ಅರವತ್ತೊಂದು ಲಕ್ಷದ ಇಪ್ಪತ್ತೊಂದು ಸಾವಿರ ಎಂಟುನೂರ ಎಪ್ಪತ್ತೇಳು ರೂಪಾಯಿ)ಗೆ ಮಾರಾಟ ಮಾಡಲು ಅನುಮತಿ ಒಪ್ಪಿದ್ದೆವು.

ಇದರಲ್ಲಿ 2,80,15,000 (ಎರಡು ಕೋಟಿ ಎಂಬತ್ತು ಲಕ್ಷದ ಹದಿನೈದು ಸಾವಿರ) ಮುಂಗಡವಾಗಿ ಪಾವತಿಸಲಾಗಿತ್ತು. ಉಳಿದ 13,81,09,877 (ಹದಿಮೂರು ಕೋಟಿ ಎಂಬತ್ತೊಂದು ಲಕ್ಷದ ಒಂಬತ್ತು ಸಾವಿರದ ಎಂಟು ನೂರ ಎಪ್ಪತ್ತೇಳು) ಅನ್ನು ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಏಳು ಜಂಟಿ ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಕ್ಟೋಬರ್ 1, 2023 ಮತ್ತು 8 ಅಕ್ಟೋಬರ್ 2023ರ ನಡುವೆ, ಸ್ವಾಧೀನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ವೆಲ್‌ಸ್ಪನ್ ಉದ್ಯೋಗಿ ಮಹೇಂದ್ರಸಿನ್ಹ್ ಸೋಧಾ, ಹೆಚ್ಚು ಹಣ ಇಟ್ಟುಕೊಳ್ಳುವುದರಿಂದ ಆದಾಯ ತೆರಿಗೆ ಸಮಸ್ಯೆ ಮತ್ತು ಚುನಾವಣಾ ಬಾಂಡ್‌ನ ಲಾಭಗಳ ಬಗ್ಗೆ ಕಂಪನಿಯ ಕಾಂಪೌಂಡ್‌ನಲ್ಲಿರುವ ವೆಲ್‌ಸ್ಪನ್‌ನ ಅತಿಥಿ ಗೃಹದಲ್ಲಿ ಸಾವಕಾರ ಮತ್ತು ಅವರ ಮಗ ಹರೇಶ್ ಅವರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿ ಹಣ ಹೂಡಿಕೆ ಮಾಡಲು ಮನವರಿಕೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

“ದಲಿತ ಕುಟುಂಬದರ ಸದಸ್ಯರ ಖಾತೆಗಳಿಗೆ ಮೊದಲು ಹಣವನ್ನು ಜಮಾ ಮಾಡಿದ ದಿನಾಂಕಗಳ ವಿವರಗಳನ್ನು ದೃಢೀಕರಿಸಲು ಬ್ಯಾಂಕ್ ರಸೀದಿಗಳನ್ನು ನಾವು ನೋಡಿದ್ದೇವೆ ಮತ್ತು ನಂತರ ಎಸ್‌ಬಿಐನ ಗಾಂಧಿನಗರ ಶಾಖೆಯಲ್ಲಿ ಅದನ್ನು ನಗದೀಕರಿಸಿಕೊಂಡಿರುವುದನ್ನು ತಿಳಿದುಕೊಂಡಿದ್ದೇವೆ. ಮಾಡಲಾಗಿದೆ. ಕುಟುಂಬದವರು ಖರೀದಿಸಿದ ಬಾಂಡ್‌ಗಳ ಪ್ರತಿಗಳನ್ನು ಸಹ ನಾವು ನೋಡಿದ್ದೇವೆ” ಎಂದು ಕ್ವಿಂಟ್ ಹೇಳಿದೆ.

ಬಿಜೆಪಿ ಅಂಜಾರ್ ನಗರ ಅಧ್ಯಕ್ಷ ಹೇಮಂತ್ ರಜನಿಕಾಂತ್ ಶಾ ಈ ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ಸಾವಕಾರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ, ಕ್ವಿಂಟ್ ಜೊತೆ ಮಾತನಾಡಿರುವ ಶಾ ಅವರು ಈ ಪ್ರಕರಣದ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಹಗರಣದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...