Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ 'ಮೋಸ':...

ಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ ‘ಮೋಸ’: ವರದಿ

ರೈತರ ಭೂ ಸ್ವಾಧೀನ ಪರಿಹಾರ ಹಣದಲ್ಲಿ ಅವರಿಗೇ ಗೊತ್ತಿಲ್ಲದೆ ಚುನಾವಣಾ ಬಾಂಡ್‌ ಖರೀದಿಸಿದ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯ ಅಧಿಕಾರಿ

- Advertisement -
- Advertisement -

ಅಕ್ಟೋಬರ್ 11,2023 ರಂದು, ಗುಜರಾತ್‌ನ ಕಚ್ ಜಿಲ್ಲೆಯ ಅಂಜಾರ್‌ನ ದಲಿತ ಕುಟುಂಬದ ಆರು ಸದಸ್ಯರ ಹೆಸರಿನಲ್ಲಿ 11 ಕೋಟಿ 14 ಸಾವಿರ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಲಾಗಿತ್ತು.

ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಎಸ್‌ಬಿಐನ ಅಂಕಿ ಅಂಶಗಳ ಪ್ರಕಾರ, ಇವುಗಳಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಅಕ್ಟೋಬರ್ 2023 ರಂದು ಮತ್ತು 1 ಕೋಟಿ 14 ಸಾವಿರ ಮೌಲ್ಯದ ಬಾಂಡ್‌ಗಳನ್ನು 18 ಅಕ್ಟೋಬರ್ 2023 ರಂದು ಶಿವಸೇನೆ ನಗದೀಕರಿಸಿಕೊಂಡಿವೆ.

ಇದೀಗ ದಲಿತ ಕುಟುಂಬವು, ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯಾದ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಅಧಿಕಾರಿ ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದೆ.

2005 ರಲ್ಲಿ, ಅದಾನಿ ಗ್ರೂಪ್ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್ (ಎಡಬ್ಲ್ಯುಇಎಲ್) ಎಂಬ ಜಂಟಿ ಉದ್ಯಮವನ್ನು ಸ್ಥಾಪಿಸಿದೆ. ಅದಾನಿ ಗ್ರೂಪ್‌ನ ಪತ್ರಿಕಾ ಪ್ರಕಟಣೆಯ ಪ್ರಕಾರ, ಎಡಬ್ಲ್ಯುಇಎಲ್ ಮತ್ತು ಅದಾನಿ ಕಂಪನಿಯಲ್ಲಿ 65:35 ಶೇರು ಪಾಲು ಹೊಂದಿದೆ.

ದಿ ಕ್ವಿಂಟ್ ಜೊತೆ ಮಾತನಾಡಿರುವ ದಲಿತ ಕುಟುಂಬದ 41 ವರ್ಷದ ಹರೇಶ್ ಸಾವಕಾರ, ” ವೆಲ್‌ಸ್ಪನ್ ಕಂಪನಿಯು ಅಂಜಾರ್‌ನಲ್ಲಿನ ನಮ್ಮ ಕೃಷಿ ಭೂಮಿಯಲ್ಲಿ ಸುಮಾರು 43,000 ಚದರ ಮೀಟರ್ ಅನ್ನು ಪ್ರಾಜೆಕ್ಟ್‌ಗಾಗಿ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರವಾಗಿ ಕಂಪನಿ ನಮಗೆ ಹಣ ಕೊಡಬೇಕಾಗಿತ್ತು. ಆದರೆ, ಕಂಪನಿಯ ಹಿರಿಯ ಜನರಲ್ ಮ್ಯಾನೇಜರ್ ಮಹೇಂದ್ರಸಿನ್ಹ್ ಸೋಧಾ ಎಂಬವರು, “ಇಷ್ಟೊಂದು ಮೊತ್ತದ ಹಣ ನೀವು ನೇರವಾಗಿ ಸ್ವೀಕರಿಸಿದರೆ ಮುಂದೆ ಆದಾಯ ತೆರಿಗೆ ಇಲಾಖೆಯಿಂದ ಸಮಸ್ಯೆಯಾಗಬಹುದು” ಎಂದು ನಮಗೆ ಚುನಾವಣಾ ಬಾಂಡ್‌ ಖರೀದಿಸುವಂತೆ ಮಾಡಿದ್ದರು. ನಾವು ಚುನಾವಣಾ ಬಾಂಡ್ ಖರೀದಿಸುವಾಗ, “ನಿಮ್ಮ ಹಣ ಮುಂದಿನ ಕೆಲ ವರ್ಷಗಳಲ್ಲಿ 1.5 ಪಟ್ಟು ಹೆಚ್ಚಾಗಲಿದೆ ಎಂದಿದ್ದರು. ನಾವು ಅನಕ್ಷರಸ್ಥರಾದ ಕಾರಣ ನಮಗೆ ಏನೂ ಗೊತ್ತಿರಲಿಲ್ಲ. ಆದರೆ, ಈಗ ಚುನಾವಣಾ ಬಾಂಡ್ ಹಗರಣದ ಬಗ್ಗೆ ಗೊತ್ತಾಗುತ್ತಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ಮೋಸ ಮಾಡಲಾಗಿದೆ ಎನ್ನಲಾದ ದಲಿತ ಕುಟುಂಬದ ಆರು ಜನರಲ್ಲಿ ಒಬ್ಬರಾದ ಸಾವಕರ ಮನ್ವರ್ ಅವರ ಮಗನಾಗಿದ್ದಾರೆ ಹರೇಶ್ ಸಾವಕಾರ.

ಸಾವಕರ ಅವರು 18 ಮಾರ್ಚ್ 2024 ರಂದು ಅಂಜಾರ್ ಪೊಲೀಸ್ ಠಾಣೆಯಲ್ಲಿ ತನಗಾದ ಮೋಸದ ಬಗ್ಗೆ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರತಿಯಲ್ಲಿ ವೆಲ್‌ಸ್ಪನ್ ಕಂಪನಿ ನಿರ್ದೇಶಕರಾದ ವಿಶ್ವನಾಥನ್ ಕೊಲ್ಲೆಂಗೋಡ್, ಸಂಜಯ್ ಗುಪ್ತಾ, ಚಿಂತನ್ ಠಾಕರ್ ಮತ್ತು ಪ್ರವೀಣ್ ಬನ್ಸಾಲಿ ಅವರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ, ಜೊತೆಗೆ ಮಹೇಂದ್ರಸಿನ್ಹ್ ಸೋಧಾ (ವೆಲ್‌ಸ್ಪನ್‌ನ ಹಿರಿಯ ಜನರಲ್ ಮ್ಯಾನೇಜರ್), ವಿಮಲ್ ಕಿಶೋರ್ ಜೋಶಿ (ಅಂಜರ್ ಭೂಸ್ವಾಧೀನ ಅಧಿಕಾರಿ ) ಮತ್ತು ಹೇಮಂತ್ ಅಲಿಯಾಸ್ ಡ್ಯಾನಿ ರಜನಿಕಾಂತ್ ಶಾ (ಬಿಜೆಪಿಯ ನಗರ ಸಿಟಿ ಅಧ್ಯಕ್ಷ) ಅವರ ಹೆಸರುಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಕ್ವಿಂಟ್ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಕೊಳ್ಳಬೇಕಿದೆ. ಪ್ರಕರಣದ ತನಿಖಾಧಿಕಾರಿ ಶೈಲೇಂದ್ರ ಸಿಸೋಡಿಯಾ ಅವರು ದಿ ಕ್ವಿಂಟ್‌ನೊಂದಿಗೆ ಮಾತನಾಡುತ್ತಾ, “ಅವರು ನಮಗೆ ದೂರು ನೀಡಿದ್ದಾರೆ. ನಾವು ಅದನ್ನು ಇನ್ನೂ ಪರಿಶೀಲಿಸುತ್ತಿದ್ದೇವೆ. ಒಮ್ಮೆ ಪರಿಶೀಲನೆ ಪೂರ್ಣಗೊಂಡು ಪ್ರಕರಣವು ಎಫ್‌ಐಆರ್‌ಗೆ ಅರ್ಹವಾಗಿದ್ದರೆ, ನಾವು ಎಫ್‌ಐಆರ್‌ ದಾಖಲಿಸುತ್ತೇವೆ ಎಂದಿದ್ದಾರೆ.

ಅಂಜಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ನೀಡಿದ ದೂರಿನಲ್ಲಿ, ದೂರುದಾರರು ಆಗಸ್ಟ್ 2023 ರಲ್ಲಿ ತಮ್ಮ ಕೃಷಿ ಭೂಮಿಯನ್ನು ವೆಲ್‌ಸ್ಪನ್ ಕಂಪನಿಗೆ 16,61,21,877 (ಹದಿನಾರು ಕೋಟಿ ಅರವತ್ತೊಂದು ಲಕ್ಷದ ಇಪ್ಪತ್ತೊಂದು ಸಾವಿರ ಎಂಟುನೂರ ಎಪ್ಪತ್ತೇಳು ರೂಪಾಯಿ)ಗೆ ಮಾರಾಟ ಮಾಡಲು ಅನುಮತಿ ಒಪ್ಪಿದ್ದೆವು.

ಇದರಲ್ಲಿ 2,80,15,000 (ಎರಡು ಕೋಟಿ ಎಂಬತ್ತು ಲಕ್ಷದ ಹದಿನೈದು ಸಾವಿರ) ಮುಂಗಡವಾಗಿ ಪಾವತಿಸಲಾಗಿತ್ತು. ಉಳಿದ 13,81,09,877 (ಹದಿಮೂರು ಕೋಟಿ ಎಂಬತ್ತೊಂದು ಲಕ್ಷದ ಒಂಬತ್ತು ಸಾವಿರದ ಎಂಟು ನೂರ ಎಪ್ಪತ್ತೇಳು) ಅನ್ನು ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಏಳು ಜಂಟಿ ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಕ್ಟೋಬರ್ 1, 2023 ಮತ್ತು 8 ಅಕ್ಟೋಬರ್ 2023ರ ನಡುವೆ, ಸ್ವಾಧೀನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ವೆಲ್‌ಸ್ಪನ್ ಉದ್ಯೋಗಿ ಮಹೇಂದ್ರಸಿನ್ಹ್ ಸೋಧಾ, ಹೆಚ್ಚು ಹಣ ಇಟ್ಟುಕೊಳ್ಳುವುದರಿಂದ ಆದಾಯ ತೆರಿಗೆ ಸಮಸ್ಯೆ ಮತ್ತು ಚುನಾವಣಾ ಬಾಂಡ್‌ನ ಲಾಭಗಳ ಬಗ್ಗೆ ಕಂಪನಿಯ ಕಾಂಪೌಂಡ್‌ನಲ್ಲಿರುವ ವೆಲ್‌ಸ್ಪನ್‌ನ ಅತಿಥಿ ಗೃಹದಲ್ಲಿ ಸಾವಕಾರ ಮತ್ತು ಅವರ ಮಗ ಹರೇಶ್ ಅವರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿ ಹಣ ಹೂಡಿಕೆ ಮಾಡಲು ಮನವರಿಕೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

“ದಲಿತ ಕುಟುಂಬದರ ಸದಸ್ಯರ ಖಾತೆಗಳಿಗೆ ಮೊದಲು ಹಣವನ್ನು ಜಮಾ ಮಾಡಿದ ದಿನಾಂಕಗಳ ವಿವರಗಳನ್ನು ದೃಢೀಕರಿಸಲು ಬ್ಯಾಂಕ್ ರಸೀದಿಗಳನ್ನು ನಾವು ನೋಡಿದ್ದೇವೆ ಮತ್ತು ನಂತರ ಎಸ್‌ಬಿಐನ ಗಾಂಧಿನಗರ ಶಾಖೆಯಲ್ಲಿ ಅದನ್ನು ನಗದೀಕರಿಸಿಕೊಂಡಿರುವುದನ್ನು ತಿಳಿದುಕೊಂಡಿದ್ದೇವೆ. ಮಾಡಲಾಗಿದೆ. ಕುಟುಂಬದವರು ಖರೀದಿಸಿದ ಬಾಂಡ್‌ಗಳ ಪ್ರತಿಗಳನ್ನು ಸಹ ನಾವು ನೋಡಿದ್ದೇವೆ” ಎಂದು ಕ್ವಿಂಟ್ ಹೇಳಿದೆ.

ಬಿಜೆಪಿ ಅಂಜಾರ್ ನಗರ ಅಧ್ಯಕ್ಷ ಹೇಮಂತ್ ರಜನಿಕಾಂತ್ ಶಾ ಈ ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ಸಾವಕಾರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ, ಕ್ವಿಂಟ್ ಜೊತೆ ಮಾತನಾಡಿರುವ ಶಾ ಅವರು ಈ ಪ್ರಕರಣದ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಹಗರಣದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...