Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ 'ಮೋಸ':...

ಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ ‘ಮೋಸ’: ವರದಿ

ರೈತರ ಭೂ ಸ್ವಾಧೀನ ಪರಿಹಾರ ಹಣದಲ್ಲಿ ಅವರಿಗೇ ಗೊತ್ತಿಲ್ಲದೆ ಚುನಾವಣಾ ಬಾಂಡ್‌ ಖರೀದಿಸಿದ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯ ಅಧಿಕಾರಿ

- Advertisement -
- Advertisement -

ಅಕ್ಟೋಬರ್ 11,2023 ರಂದು, ಗುಜರಾತ್‌ನ ಕಚ್ ಜಿಲ್ಲೆಯ ಅಂಜಾರ್‌ನ ದಲಿತ ಕುಟುಂಬದ ಆರು ಸದಸ್ಯರ ಹೆಸರಿನಲ್ಲಿ 11 ಕೋಟಿ 14 ಸಾವಿರ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಲಾಗಿತ್ತು.

ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಎಸ್‌ಬಿಐನ ಅಂಕಿ ಅಂಶಗಳ ಪ್ರಕಾರ, ಇವುಗಳಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಅಕ್ಟೋಬರ್ 2023 ರಂದು ಮತ್ತು 1 ಕೋಟಿ 14 ಸಾವಿರ ಮೌಲ್ಯದ ಬಾಂಡ್‌ಗಳನ್ನು 18 ಅಕ್ಟೋಬರ್ 2023 ರಂದು ಶಿವಸೇನೆ ನಗದೀಕರಿಸಿಕೊಂಡಿವೆ.

ಇದೀಗ ದಲಿತ ಕುಟುಂಬವು, ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯಾದ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಅಧಿಕಾರಿ ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದೆ.

2005 ರಲ್ಲಿ, ಅದಾನಿ ಗ್ರೂಪ್ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್ (ಎಡಬ್ಲ್ಯುಇಎಲ್) ಎಂಬ ಜಂಟಿ ಉದ್ಯಮವನ್ನು ಸ್ಥಾಪಿಸಿದೆ. ಅದಾನಿ ಗ್ರೂಪ್‌ನ ಪತ್ರಿಕಾ ಪ್ರಕಟಣೆಯ ಪ್ರಕಾರ, ಎಡಬ್ಲ್ಯುಇಎಲ್ ಮತ್ತು ಅದಾನಿ ಕಂಪನಿಯಲ್ಲಿ 65:35 ಶೇರು ಪಾಲು ಹೊಂದಿದೆ.

ದಿ ಕ್ವಿಂಟ್ ಜೊತೆ ಮಾತನಾಡಿರುವ ದಲಿತ ಕುಟುಂಬದ 41 ವರ್ಷದ ಹರೇಶ್ ಸಾವಕಾರ, ” ವೆಲ್‌ಸ್ಪನ್ ಕಂಪನಿಯು ಅಂಜಾರ್‌ನಲ್ಲಿನ ನಮ್ಮ ಕೃಷಿ ಭೂಮಿಯಲ್ಲಿ ಸುಮಾರು 43,000 ಚದರ ಮೀಟರ್ ಅನ್ನು ಪ್ರಾಜೆಕ್ಟ್‌ಗಾಗಿ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರವಾಗಿ ಕಂಪನಿ ನಮಗೆ ಹಣ ಕೊಡಬೇಕಾಗಿತ್ತು. ಆದರೆ, ಕಂಪನಿಯ ಹಿರಿಯ ಜನರಲ್ ಮ್ಯಾನೇಜರ್ ಮಹೇಂದ್ರಸಿನ್ಹ್ ಸೋಧಾ ಎಂಬವರು, “ಇಷ್ಟೊಂದು ಮೊತ್ತದ ಹಣ ನೀವು ನೇರವಾಗಿ ಸ್ವೀಕರಿಸಿದರೆ ಮುಂದೆ ಆದಾಯ ತೆರಿಗೆ ಇಲಾಖೆಯಿಂದ ಸಮಸ್ಯೆಯಾಗಬಹುದು” ಎಂದು ನಮಗೆ ಚುನಾವಣಾ ಬಾಂಡ್‌ ಖರೀದಿಸುವಂತೆ ಮಾಡಿದ್ದರು. ನಾವು ಚುನಾವಣಾ ಬಾಂಡ್ ಖರೀದಿಸುವಾಗ, “ನಿಮ್ಮ ಹಣ ಮುಂದಿನ ಕೆಲ ವರ್ಷಗಳಲ್ಲಿ 1.5 ಪಟ್ಟು ಹೆಚ್ಚಾಗಲಿದೆ ಎಂದಿದ್ದರು. ನಾವು ಅನಕ್ಷರಸ್ಥರಾದ ಕಾರಣ ನಮಗೆ ಏನೂ ಗೊತ್ತಿರಲಿಲ್ಲ. ಆದರೆ, ಈಗ ಚುನಾವಣಾ ಬಾಂಡ್ ಹಗರಣದ ಬಗ್ಗೆ ಗೊತ್ತಾಗುತ್ತಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ಮೋಸ ಮಾಡಲಾಗಿದೆ ಎನ್ನಲಾದ ದಲಿತ ಕುಟುಂಬದ ಆರು ಜನರಲ್ಲಿ ಒಬ್ಬರಾದ ಸಾವಕರ ಮನ್ವರ್ ಅವರ ಮಗನಾಗಿದ್ದಾರೆ ಹರೇಶ್ ಸಾವಕಾರ.

ಸಾವಕರ ಅವರು 18 ಮಾರ್ಚ್ 2024 ರಂದು ಅಂಜಾರ್ ಪೊಲೀಸ್ ಠಾಣೆಯಲ್ಲಿ ತನಗಾದ ಮೋಸದ ಬಗ್ಗೆ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರತಿಯಲ್ಲಿ ವೆಲ್‌ಸ್ಪನ್ ಕಂಪನಿ ನಿರ್ದೇಶಕರಾದ ವಿಶ್ವನಾಥನ್ ಕೊಲ್ಲೆಂಗೋಡ್, ಸಂಜಯ್ ಗುಪ್ತಾ, ಚಿಂತನ್ ಠಾಕರ್ ಮತ್ತು ಪ್ರವೀಣ್ ಬನ್ಸಾಲಿ ಅವರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ, ಜೊತೆಗೆ ಮಹೇಂದ್ರಸಿನ್ಹ್ ಸೋಧಾ (ವೆಲ್‌ಸ್ಪನ್‌ನ ಹಿರಿಯ ಜನರಲ್ ಮ್ಯಾನೇಜರ್), ವಿಮಲ್ ಕಿಶೋರ್ ಜೋಶಿ (ಅಂಜರ್ ಭೂಸ್ವಾಧೀನ ಅಧಿಕಾರಿ ) ಮತ್ತು ಹೇಮಂತ್ ಅಲಿಯಾಸ್ ಡ್ಯಾನಿ ರಜನಿಕಾಂತ್ ಶಾ (ಬಿಜೆಪಿಯ ನಗರ ಸಿಟಿ ಅಧ್ಯಕ್ಷ) ಅವರ ಹೆಸರುಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಕ್ವಿಂಟ್ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಕೊಳ್ಳಬೇಕಿದೆ. ಪ್ರಕರಣದ ತನಿಖಾಧಿಕಾರಿ ಶೈಲೇಂದ್ರ ಸಿಸೋಡಿಯಾ ಅವರು ದಿ ಕ್ವಿಂಟ್‌ನೊಂದಿಗೆ ಮಾತನಾಡುತ್ತಾ, “ಅವರು ನಮಗೆ ದೂರು ನೀಡಿದ್ದಾರೆ. ನಾವು ಅದನ್ನು ಇನ್ನೂ ಪರಿಶೀಲಿಸುತ್ತಿದ್ದೇವೆ. ಒಮ್ಮೆ ಪರಿಶೀಲನೆ ಪೂರ್ಣಗೊಂಡು ಪ್ರಕರಣವು ಎಫ್‌ಐಆರ್‌ಗೆ ಅರ್ಹವಾಗಿದ್ದರೆ, ನಾವು ಎಫ್‌ಐಆರ್‌ ದಾಖಲಿಸುತ್ತೇವೆ ಎಂದಿದ್ದಾರೆ.

ಅಂಜಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ನೀಡಿದ ದೂರಿನಲ್ಲಿ, ದೂರುದಾರರು ಆಗಸ್ಟ್ 2023 ರಲ್ಲಿ ತಮ್ಮ ಕೃಷಿ ಭೂಮಿಯನ್ನು ವೆಲ್‌ಸ್ಪನ್ ಕಂಪನಿಗೆ 16,61,21,877 (ಹದಿನಾರು ಕೋಟಿ ಅರವತ್ತೊಂದು ಲಕ್ಷದ ಇಪ್ಪತ್ತೊಂದು ಸಾವಿರ ಎಂಟುನೂರ ಎಪ್ಪತ್ತೇಳು ರೂಪಾಯಿ)ಗೆ ಮಾರಾಟ ಮಾಡಲು ಅನುಮತಿ ಒಪ್ಪಿದ್ದೆವು.

ಇದರಲ್ಲಿ 2,80,15,000 (ಎರಡು ಕೋಟಿ ಎಂಬತ್ತು ಲಕ್ಷದ ಹದಿನೈದು ಸಾವಿರ) ಮುಂಗಡವಾಗಿ ಪಾವತಿಸಲಾಗಿತ್ತು. ಉಳಿದ 13,81,09,877 (ಹದಿಮೂರು ಕೋಟಿ ಎಂಬತ್ತೊಂದು ಲಕ್ಷದ ಒಂಬತ್ತು ಸಾವಿರದ ಎಂಟು ನೂರ ಎಪ್ಪತ್ತೇಳು) ಅನ್ನು ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಏಳು ಜಂಟಿ ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಕ್ಟೋಬರ್ 1, 2023 ಮತ್ತು 8 ಅಕ್ಟೋಬರ್ 2023ರ ನಡುವೆ, ಸ್ವಾಧೀನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ವೆಲ್‌ಸ್ಪನ್ ಉದ್ಯೋಗಿ ಮಹೇಂದ್ರಸಿನ್ಹ್ ಸೋಧಾ, ಹೆಚ್ಚು ಹಣ ಇಟ್ಟುಕೊಳ್ಳುವುದರಿಂದ ಆದಾಯ ತೆರಿಗೆ ಸಮಸ್ಯೆ ಮತ್ತು ಚುನಾವಣಾ ಬಾಂಡ್‌ನ ಲಾಭಗಳ ಬಗ್ಗೆ ಕಂಪನಿಯ ಕಾಂಪೌಂಡ್‌ನಲ್ಲಿರುವ ವೆಲ್‌ಸ್ಪನ್‌ನ ಅತಿಥಿ ಗೃಹದಲ್ಲಿ ಸಾವಕಾರ ಮತ್ತು ಅವರ ಮಗ ಹರೇಶ್ ಅವರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿ ಹಣ ಹೂಡಿಕೆ ಮಾಡಲು ಮನವರಿಕೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

“ದಲಿತ ಕುಟುಂಬದರ ಸದಸ್ಯರ ಖಾತೆಗಳಿಗೆ ಮೊದಲು ಹಣವನ್ನು ಜಮಾ ಮಾಡಿದ ದಿನಾಂಕಗಳ ವಿವರಗಳನ್ನು ದೃಢೀಕರಿಸಲು ಬ್ಯಾಂಕ್ ರಸೀದಿಗಳನ್ನು ನಾವು ನೋಡಿದ್ದೇವೆ ಮತ್ತು ನಂತರ ಎಸ್‌ಬಿಐನ ಗಾಂಧಿನಗರ ಶಾಖೆಯಲ್ಲಿ ಅದನ್ನು ನಗದೀಕರಿಸಿಕೊಂಡಿರುವುದನ್ನು ತಿಳಿದುಕೊಂಡಿದ್ದೇವೆ. ಮಾಡಲಾಗಿದೆ. ಕುಟುಂಬದವರು ಖರೀದಿಸಿದ ಬಾಂಡ್‌ಗಳ ಪ್ರತಿಗಳನ್ನು ಸಹ ನಾವು ನೋಡಿದ್ದೇವೆ” ಎಂದು ಕ್ವಿಂಟ್ ಹೇಳಿದೆ.

ಬಿಜೆಪಿ ಅಂಜಾರ್ ನಗರ ಅಧ್ಯಕ್ಷ ಹೇಮಂತ್ ರಜನಿಕಾಂತ್ ಶಾ ಈ ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ಸಾವಕಾರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ, ಕ್ವಿಂಟ್ ಜೊತೆ ಮಾತನಾಡಿರುವ ಶಾ ಅವರು ಈ ಪ್ರಕರಣದ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಹಗರಣದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...