Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ 'ಮೋಸ':...

ಚುನಾವಣಾ ಬಾಂಡ್‌| ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿ ಗುಜರಾತ್‌ನ ದಲಿತ ರೈತರಿಗೆ ‘ಮೋಸ’: ವರದಿ

ರೈತರ ಭೂ ಸ್ವಾಧೀನ ಪರಿಹಾರ ಹಣದಲ್ಲಿ ಅವರಿಗೇ ಗೊತ್ತಿಲ್ಲದೆ ಚುನಾವಣಾ ಬಾಂಡ್‌ ಖರೀದಿಸಿದ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯ ಅಧಿಕಾರಿ

- Advertisement -
- Advertisement -

ಅಕ್ಟೋಬರ್ 11,2023 ರಂದು, ಗುಜರಾತ್‌ನ ಕಚ್ ಜಿಲ್ಲೆಯ ಅಂಜಾರ್‌ನ ದಲಿತ ಕುಟುಂಬದ ಆರು ಸದಸ್ಯರ ಹೆಸರಿನಲ್ಲಿ 11 ಕೋಟಿ 14 ಸಾವಿರ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಲಾಗಿತ್ತು.

ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಎಸ್‌ಬಿಐನ ಅಂಕಿ ಅಂಶಗಳ ಪ್ರಕಾರ, ಇವುಗಳಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಅಕ್ಟೋಬರ್ 2023 ರಂದು ಮತ್ತು 1 ಕೋಟಿ 14 ಸಾವಿರ ಮೌಲ್ಯದ ಬಾಂಡ್‌ಗಳನ್ನು 18 ಅಕ್ಟೋಬರ್ 2023 ರಂದು ಶಿವಸೇನೆ ನಗದೀಕರಿಸಿಕೊಂಡಿವೆ.

ಇದೀಗ ದಲಿತ ಕುಟುಂಬವು, ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಯಾದ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಅಧಿಕಾರಿ ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದೆ.

2005 ರಲ್ಲಿ, ಅದಾನಿ ಗ್ರೂಪ್ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್ (ಎಡಬ್ಲ್ಯುಇಎಲ್) ಎಂಬ ಜಂಟಿ ಉದ್ಯಮವನ್ನು ಸ್ಥಾಪಿಸಿದೆ. ಅದಾನಿ ಗ್ರೂಪ್‌ನ ಪತ್ರಿಕಾ ಪ್ರಕಟಣೆಯ ಪ್ರಕಾರ, ಎಡಬ್ಲ್ಯುಇಎಲ್ ಮತ್ತು ಅದಾನಿ ಕಂಪನಿಯಲ್ಲಿ 65:35 ಶೇರು ಪಾಲು ಹೊಂದಿದೆ.

ದಿ ಕ್ವಿಂಟ್ ಜೊತೆ ಮಾತನಾಡಿರುವ ದಲಿತ ಕುಟುಂಬದ 41 ವರ್ಷದ ಹರೇಶ್ ಸಾವಕಾರ, ” ವೆಲ್‌ಸ್ಪನ್ ಕಂಪನಿಯು ಅಂಜಾರ್‌ನಲ್ಲಿನ ನಮ್ಮ ಕೃಷಿ ಭೂಮಿಯಲ್ಲಿ ಸುಮಾರು 43,000 ಚದರ ಮೀಟರ್ ಅನ್ನು ಪ್ರಾಜೆಕ್ಟ್‌ಗಾಗಿ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರವಾಗಿ ಕಂಪನಿ ನಮಗೆ ಹಣ ಕೊಡಬೇಕಾಗಿತ್ತು. ಆದರೆ, ಕಂಪನಿಯ ಹಿರಿಯ ಜನರಲ್ ಮ್ಯಾನೇಜರ್ ಮಹೇಂದ್ರಸಿನ್ಹ್ ಸೋಧಾ ಎಂಬವರು, “ಇಷ್ಟೊಂದು ಮೊತ್ತದ ಹಣ ನೀವು ನೇರವಾಗಿ ಸ್ವೀಕರಿಸಿದರೆ ಮುಂದೆ ಆದಾಯ ತೆರಿಗೆ ಇಲಾಖೆಯಿಂದ ಸಮಸ್ಯೆಯಾಗಬಹುದು” ಎಂದು ನಮಗೆ ಚುನಾವಣಾ ಬಾಂಡ್‌ ಖರೀದಿಸುವಂತೆ ಮಾಡಿದ್ದರು. ನಾವು ಚುನಾವಣಾ ಬಾಂಡ್ ಖರೀದಿಸುವಾಗ, “ನಿಮ್ಮ ಹಣ ಮುಂದಿನ ಕೆಲ ವರ್ಷಗಳಲ್ಲಿ 1.5 ಪಟ್ಟು ಹೆಚ್ಚಾಗಲಿದೆ ಎಂದಿದ್ದರು. ನಾವು ಅನಕ್ಷರಸ್ಥರಾದ ಕಾರಣ ನಮಗೆ ಏನೂ ಗೊತ್ತಿರಲಿಲ್ಲ. ಆದರೆ, ಈಗ ಚುನಾವಣಾ ಬಾಂಡ್ ಹಗರಣದ ಬಗ್ಗೆ ಗೊತ್ತಾಗುತ್ತಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿ ಮೋಸ ಮಾಡಲಾಗಿದೆ ಎನ್ನಲಾದ ದಲಿತ ಕುಟುಂಬದ ಆರು ಜನರಲ್ಲಿ ಒಬ್ಬರಾದ ಸಾವಕರ ಮನ್ವರ್ ಅವರ ಮಗನಾಗಿದ್ದಾರೆ ಹರೇಶ್ ಸಾವಕಾರ.

ಸಾವಕರ ಅವರು 18 ಮಾರ್ಚ್ 2024 ರಂದು ಅಂಜಾರ್ ಪೊಲೀಸ್ ಠಾಣೆಯಲ್ಲಿ ತನಗಾದ ಮೋಸದ ಬಗ್ಗೆ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರತಿಯಲ್ಲಿ ವೆಲ್‌ಸ್ಪನ್ ಕಂಪನಿ ನಿರ್ದೇಶಕರಾದ ವಿಶ್ವನಾಥನ್ ಕೊಲ್ಲೆಂಗೋಡ್, ಸಂಜಯ್ ಗುಪ್ತಾ, ಚಿಂತನ್ ಠಾಕರ್ ಮತ್ತು ಪ್ರವೀಣ್ ಬನ್ಸಾಲಿ ಅವರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ, ಜೊತೆಗೆ ಮಹೇಂದ್ರಸಿನ್ಹ್ ಸೋಧಾ (ವೆಲ್‌ಸ್ಪನ್‌ನ ಹಿರಿಯ ಜನರಲ್ ಮ್ಯಾನೇಜರ್), ವಿಮಲ್ ಕಿಶೋರ್ ಜೋಶಿ (ಅಂಜರ್ ಭೂಸ್ವಾಧೀನ ಅಧಿಕಾರಿ ) ಮತ್ತು ಹೇಮಂತ್ ಅಲಿಯಾಸ್ ಡ್ಯಾನಿ ರಜನಿಕಾಂತ್ ಶಾ (ಬಿಜೆಪಿಯ ನಗರ ಸಿಟಿ ಅಧ್ಯಕ್ಷ) ಅವರ ಹೆಸರುಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಕ್ವಿಂಟ್ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಕೊಳ್ಳಬೇಕಿದೆ. ಪ್ರಕರಣದ ತನಿಖಾಧಿಕಾರಿ ಶೈಲೇಂದ್ರ ಸಿಸೋಡಿಯಾ ಅವರು ದಿ ಕ್ವಿಂಟ್‌ನೊಂದಿಗೆ ಮಾತನಾಡುತ್ತಾ, “ಅವರು ನಮಗೆ ದೂರು ನೀಡಿದ್ದಾರೆ. ನಾವು ಅದನ್ನು ಇನ್ನೂ ಪರಿಶೀಲಿಸುತ್ತಿದ್ದೇವೆ. ಒಮ್ಮೆ ಪರಿಶೀಲನೆ ಪೂರ್ಣಗೊಂಡು ಪ್ರಕರಣವು ಎಫ್‌ಐಆರ್‌ಗೆ ಅರ್ಹವಾಗಿದ್ದರೆ, ನಾವು ಎಫ್‌ಐಆರ್‌ ದಾಖಲಿಸುತ್ತೇವೆ ಎಂದಿದ್ದಾರೆ.

ಅಂಜಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ನೀಡಿದ ದೂರಿನಲ್ಲಿ, ದೂರುದಾರರು ಆಗಸ್ಟ್ 2023 ರಲ್ಲಿ ತಮ್ಮ ಕೃಷಿ ಭೂಮಿಯನ್ನು ವೆಲ್‌ಸ್ಪನ್ ಕಂಪನಿಗೆ 16,61,21,877 (ಹದಿನಾರು ಕೋಟಿ ಅರವತ್ತೊಂದು ಲಕ್ಷದ ಇಪ್ಪತ್ತೊಂದು ಸಾವಿರ ಎಂಟುನೂರ ಎಪ್ಪತ್ತೇಳು ರೂಪಾಯಿ)ಗೆ ಮಾರಾಟ ಮಾಡಲು ಅನುಮತಿ ಒಪ್ಪಿದ್ದೆವು.

ಇದರಲ್ಲಿ 2,80,15,000 (ಎರಡು ಕೋಟಿ ಎಂಬತ್ತು ಲಕ್ಷದ ಹದಿನೈದು ಸಾವಿರ) ಮುಂಗಡವಾಗಿ ಪಾವತಿಸಲಾಗಿತ್ತು. ಉಳಿದ 13,81,09,877 (ಹದಿಮೂರು ಕೋಟಿ ಎಂಬತ್ತೊಂದು ಲಕ್ಷದ ಒಂಬತ್ತು ಸಾವಿರದ ಎಂಟು ನೂರ ಎಪ್ಪತ್ತೇಳು) ಅನ್ನು ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಏಳು ಜಂಟಿ ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಕ್ಟೋಬರ್ 1, 2023 ಮತ್ತು 8 ಅಕ್ಟೋಬರ್ 2023ರ ನಡುವೆ, ಸ್ವಾಧೀನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ವೆಲ್‌ಸ್ಪನ್ ಉದ್ಯೋಗಿ ಮಹೇಂದ್ರಸಿನ್ಹ್ ಸೋಧಾ, ಹೆಚ್ಚು ಹಣ ಇಟ್ಟುಕೊಳ್ಳುವುದರಿಂದ ಆದಾಯ ತೆರಿಗೆ ಸಮಸ್ಯೆ ಮತ್ತು ಚುನಾವಣಾ ಬಾಂಡ್‌ನ ಲಾಭಗಳ ಬಗ್ಗೆ ಕಂಪನಿಯ ಕಾಂಪೌಂಡ್‌ನಲ್ಲಿರುವ ವೆಲ್‌ಸ್ಪನ್‌ನ ಅತಿಥಿ ಗೃಹದಲ್ಲಿ ಸಾವಕಾರ ಮತ್ತು ಅವರ ಮಗ ಹರೇಶ್ ಅವರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿ ಹಣ ಹೂಡಿಕೆ ಮಾಡಲು ಮನವರಿಕೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

“ದಲಿತ ಕುಟುಂಬದರ ಸದಸ್ಯರ ಖಾತೆಗಳಿಗೆ ಮೊದಲು ಹಣವನ್ನು ಜಮಾ ಮಾಡಿದ ದಿನಾಂಕಗಳ ವಿವರಗಳನ್ನು ದೃಢೀಕರಿಸಲು ಬ್ಯಾಂಕ್ ರಸೀದಿಗಳನ್ನು ನಾವು ನೋಡಿದ್ದೇವೆ ಮತ್ತು ನಂತರ ಎಸ್‌ಬಿಐನ ಗಾಂಧಿನಗರ ಶಾಖೆಯಲ್ಲಿ ಅದನ್ನು ನಗದೀಕರಿಸಿಕೊಂಡಿರುವುದನ್ನು ತಿಳಿದುಕೊಂಡಿದ್ದೇವೆ. ಮಾಡಲಾಗಿದೆ. ಕುಟುಂಬದವರು ಖರೀದಿಸಿದ ಬಾಂಡ್‌ಗಳ ಪ್ರತಿಗಳನ್ನು ಸಹ ನಾವು ನೋಡಿದ್ದೇವೆ” ಎಂದು ಕ್ವಿಂಟ್ ಹೇಳಿದೆ.

ಬಿಜೆಪಿ ಅಂಜಾರ್ ನಗರ ಅಧ್ಯಕ್ಷ ಹೇಮಂತ್ ರಜನಿಕಾಂತ್ ಶಾ ಈ ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ಸಾವಕಾರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ, ಕ್ವಿಂಟ್ ಜೊತೆ ಮಾತನಾಡಿರುವ ಶಾ ಅವರು ಈ ಪ್ರಕರಣದ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಹಗರಣದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...