Homeಮುಖಪುಟಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

ಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

- Advertisement -
- Advertisement -

ದೆಹಲಿ ಚುನಾವಣೆಯ ಅಭ್ಯರ್ಥಿಯಾಗಿರುವ ಬಿಜೆಪಿಯ ಕಪಿಲ್ ಮಿಶ್ರಾ ಅವರು ತಮ್ಮ ಟ್ವೀಟ್ ಮೂಲಕ ಮತದಾನವನ್ನು ಭಾರತ ವಿರುದ್ಧ ಪಾಕಿಸ್ತಾನದ ಯುದ್ದಕ್ಕೆ ಹೋಲಿಸಿದನ್ನು ಚುನಾವಣಾ ಸಂಸ್ಥೆಯು ಕಟು ಶಬ್ದಗಳಲ್ಲಿ ಖಂಡಿಸಿದೆ.

ಕಪಿಲ್ ಮಿಶ್ರಾ ಅವರ ಕೋಮುವಾದಿ ಟ್ವೀಟ್ ಅನ್ನು ಡಿಲೀಟ್‌ ಮಾಡಿ ಎಂದು ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಮನವಿ ಮಾಡಿದೆ.

 

ಇತ್ತೀಚಿಗೆ ಹಲವು ಕೋಮು ಮತ್ತು ಪ್ರಚೋದನಾಕಾರಿ ಟ್ವೀಟ್‌ಗಳನ್ನು ಮಾಡುತ್ತಿರುವ ಕಪಿಲ್ ಮಿಶ್ರಾ ಅವರು ನಿನ್ನೆ “ಭಾರತ ವಿರುದ್ಧ ಪಾಕಿಸ್ತಾನ, ಫೆಬ್ರವರಿ 8, ದೆಹಲಿ. ಭಾರತ ಮತ್ತು ಪಾಕಿಸ್ತಾನ ದೆಹಲಿಯ ಬೀದಿಗಳಲ್ಲಿ ಸ್ಪರ್ಧಿಸಲಿವೆ.” ಎಂದು ಪೋಸ್ಟ್ ಮಾಡಿದ್ದರು

ಮಿಶ್ರಾ ಅವರ ಟ್ವೀಟ್ ಅನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟ್ಟರ್ ಗೆ ಪತ್ರ ಬರೆದಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಅದು ಹೇಳಿದೆ.

ಕಪಿಲ್ ಮಿಶ್ರಾ ಅವರ ಟೀಕೆಗಳು “ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸುವುದು ಅಥವಾ ಪರಸ್ಪರ ದ್ವೇಷವನ್ನು ಉಂಟುಮಾಡುವುದು ಅಥವಾ ವಿವಿಧ ಸಮುದಾಯಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡುತ್ತವೆ” ಇದು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಟ್ವೀಟ್ ಕುರಿತು ವರದಿಯನ್ನು 24 ಗಂಟೆಗಳ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ದೆಹಲಿ ಚುನಾವಣಾ ಕಚೇರಿಗೆ ಸೂಚಿಸಲಾಗಿದೆ.

ಟ್ವೀಟ್ ಬಗ್ಗೆ ಕಪಿಲ್‌ ಮಿಶ್ರಾ “ದೆಹಲಿಯ ಅನೇಕ ಸ್ಥಳಗಳಲ್ಲಿ ಮಿನಿ ಪಾಕಿಸ್ತಾನಿಗಳನ್ನು ರಚಿಸಲಾಗಿದೆ. ಶಾಹೀನ್ ಬಾಗ್ ಅನ್ನು ವಿವಿಧ ಸ್ಥಳಗಳಲ್ಲಿ ಪುನರಾವರ್ತಿಸಲಾಗುತ್ತಿದೆ. ಇಂದರ್ ಲೋಕ್, ಚಂದ್ ಬಾಗ್ ಮುಂತಾದ ಇತರ ಸ್ಥಳಗಳು ಸಹ ಮಿನಿ ಪಾಕಿಸ್ತಾನ ಆಗಿವೆ. ರಸ್ತೆ ತಡೆ ಮಾಡುವ ಮೂಲಕ ಹಲವು ಪ್ರದೇಶಗಳು ಮತ್ತು ಶಾಲೆಗಳು ಇತ್ಯಾದಿಗಳನ್ನು ನಿರ್ಬಂಧಿಸುವ ಮೂಲಕ ಪ್ರತಿಭಟನಾಕಾರರು ಸಾಮಾನ್ಯ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಎಂದು ಹೇಳಿದ್ದಾರೆ.

ತಮಗೆ ಬಂದ ನೋಟಿಸ್ ಕುರಿತು ಮಾತನಾಡಿದ ಕಪಿಲ್‌ ಮಿಶ್ರಾ “ನಾನು ಇಂದು ನನ್ನ ಉತ್ತರವನ್ನು ನೀಡುತ್ತೇನೆ. ನಾನು ಏನೂ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ಸತ್ಯವನ್ನು ಮಾತನಾಡುವುದು ಈ ದೇಶದಲ್ಲಿ ಅಪರಾಧವಲ್ಲ. ನಾನು ಸತ್ಯವನ್ನು ಮಾತನಾಡಿದ್ದೇನೆ. ನನ್ನ ಹೇಳಿಕೆಗೆ ನಾನು ನಿಲ್ಲುತ್ತೇನೆ” ಎಂದಿದ್ದಾರೆ.

ಮಿಶ್ರಾ ಅವರ ನಾಮಪತ್ರವನ್ನು ರದ್ದುಗೊಳಿಸುವಂತೆ ಎಎಪಿ ಮುಖ್ಯ ಚುನಾವಣಾ ಅಧಿಕಾರಿಗೆ ಕೇಳಿದೆ. ಸರ್ಕಾರಿ ವಸತಿ ಸೌಕರ್ಯವನ್ನು ಬಳಸುವವರಿಗೆ ನೀರು, ವಿದ್ಯುತ್ ಮತ್ತು ದೂರವಾಣಿ ವೆಚ್ಚಗಳ ಬಗ್ಗೆ ಯಾವುದೇ ಬಾಕಿ ಪ್ರಮಾಣಪತ್ರವನ್ನು ನೀಡುವ ನಿಯಮಗಳನ್ನು ಕಡ್ಡಾಯಗೊಳಿಸಿದೆ. ಆದರೆ ಮಿಶ್ರಾ ಅವರು ತಮ್ಮ ನಾಮಪತ್ರಗಳಲ್ಲಿ ಇದನ್ನು ಉಲ್ಲೇಖಿಸಿಲ್ಲ ಎಂದು ಆಪ್‌ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...