Homeಮುಖಪುಟಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

ಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

- Advertisement -
- Advertisement -

ದೆಹಲಿ ಚುನಾವಣೆಯ ಅಭ್ಯರ್ಥಿಯಾಗಿರುವ ಬಿಜೆಪಿಯ ಕಪಿಲ್ ಮಿಶ್ರಾ ಅವರು ತಮ್ಮ ಟ್ವೀಟ್ ಮೂಲಕ ಮತದಾನವನ್ನು ಭಾರತ ವಿರುದ್ಧ ಪಾಕಿಸ್ತಾನದ ಯುದ್ದಕ್ಕೆ ಹೋಲಿಸಿದನ್ನು ಚುನಾವಣಾ ಸಂಸ್ಥೆಯು ಕಟು ಶಬ್ದಗಳಲ್ಲಿ ಖಂಡಿಸಿದೆ.

ಕಪಿಲ್ ಮಿಶ್ರಾ ಅವರ ಕೋಮುವಾದಿ ಟ್ವೀಟ್ ಅನ್ನು ಡಿಲೀಟ್‌ ಮಾಡಿ ಎಂದು ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಮನವಿ ಮಾಡಿದೆ.

 

ಇತ್ತೀಚಿಗೆ ಹಲವು ಕೋಮು ಮತ್ತು ಪ್ರಚೋದನಾಕಾರಿ ಟ್ವೀಟ್‌ಗಳನ್ನು ಮಾಡುತ್ತಿರುವ ಕಪಿಲ್ ಮಿಶ್ರಾ ಅವರು ನಿನ್ನೆ “ಭಾರತ ವಿರುದ್ಧ ಪಾಕಿಸ್ತಾನ, ಫೆಬ್ರವರಿ 8, ದೆಹಲಿ. ಭಾರತ ಮತ್ತು ಪಾಕಿಸ್ತಾನ ದೆಹಲಿಯ ಬೀದಿಗಳಲ್ಲಿ ಸ್ಪರ್ಧಿಸಲಿವೆ.” ಎಂದು ಪೋಸ್ಟ್ ಮಾಡಿದ್ದರು

ಮಿಶ್ರಾ ಅವರ ಟ್ವೀಟ್ ಅನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟ್ಟರ್ ಗೆ ಪತ್ರ ಬರೆದಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಅದು ಹೇಳಿದೆ.

ಕಪಿಲ್ ಮಿಶ್ರಾ ಅವರ ಟೀಕೆಗಳು “ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸುವುದು ಅಥವಾ ಪರಸ್ಪರ ದ್ವೇಷವನ್ನು ಉಂಟುಮಾಡುವುದು ಅಥವಾ ವಿವಿಧ ಸಮುದಾಯಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡುತ್ತವೆ” ಇದು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಟ್ವೀಟ್ ಕುರಿತು ವರದಿಯನ್ನು 24 ಗಂಟೆಗಳ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ದೆಹಲಿ ಚುನಾವಣಾ ಕಚೇರಿಗೆ ಸೂಚಿಸಲಾಗಿದೆ.

ಟ್ವೀಟ್ ಬಗ್ಗೆ ಕಪಿಲ್‌ ಮಿಶ್ರಾ “ದೆಹಲಿಯ ಅನೇಕ ಸ್ಥಳಗಳಲ್ಲಿ ಮಿನಿ ಪಾಕಿಸ್ತಾನಿಗಳನ್ನು ರಚಿಸಲಾಗಿದೆ. ಶಾಹೀನ್ ಬಾಗ್ ಅನ್ನು ವಿವಿಧ ಸ್ಥಳಗಳಲ್ಲಿ ಪುನರಾವರ್ತಿಸಲಾಗುತ್ತಿದೆ. ಇಂದರ್ ಲೋಕ್, ಚಂದ್ ಬಾಗ್ ಮುಂತಾದ ಇತರ ಸ್ಥಳಗಳು ಸಹ ಮಿನಿ ಪಾಕಿಸ್ತಾನ ಆಗಿವೆ. ರಸ್ತೆ ತಡೆ ಮಾಡುವ ಮೂಲಕ ಹಲವು ಪ್ರದೇಶಗಳು ಮತ್ತು ಶಾಲೆಗಳು ಇತ್ಯಾದಿಗಳನ್ನು ನಿರ್ಬಂಧಿಸುವ ಮೂಲಕ ಪ್ರತಿಭಟನಾಕಾರರು ಸಾಮಾನ್ಯ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಎಂದು ಹೇಳಿದ್ದಾರೆ.

ತಮಗೆ ಬಂದ ನೋಟಿಸ್ ಕುರಿತು ಮಾತನಾಡಿದ ಕಪಿಲ್‌ ಮಿಶ್ರಾ “ನಾನು ಇಂದು ನನ್ನ ಉತ್ತರವನ್ನು ನೀಡುತ್ತೇನೆ. ನಾನು ಏನೂ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ಸತ್ಯವನ್ನು ಮಾತನಾಡುವುದು ಈ ದೇಶದಲ್ಲಿ ಅಪರಾಧವಲ್ಲ. ನಾನು ಸತ್ಯವನ್ನು ಮಾತನಾಡಿದ್ದೇನೆ. ನನ್ನ ಹೇಳಿಕೆಗೆ ನಾನು ನಿಲ್ಲುತ್ತೇನೆ” ಎಂದಿದ್ದಾರೆ.

ಮಿಶ್ರಾ ಅವರ ನಾಮಪತ್ರವನ್ನು ರದ್ದುಗೊಳಿಸುವಂತೆ ಎಎಪಿ ಮುಖ್ಯ ಚುನಾವಣಾ ಅಧಿಕಾರಿಗೆ ಕೇಳಿದೆ. ಸರ್ಕಾರಿ ವಸತಿ ಸೌಕರ್ಯವನ್ನು ಬಳಸುವವರಿಗೆ ನೀರು, ವಿದ್ಯುತ್ ಮತ್ತು ದೂರವಾಣಿ ವೆಚ್ಚಗಳ ಬಗ್ಗೆ ಯಾವುದೇ ಬಾಕಿ ಪ್ರಮಾಣಪತ್ರವನ್ನು ನೀಡುವ ನಿಯಮಗಳನ್ನು ಕಡ್ಡಾಯಗೊಳಿಸಿದೆ. ಆದರೆ ಮಿಶ್ರಾ ಅವರು ತಮ್ಮ ನಾಮಪತ್ರಗಳಲ್ಲಿ ಇದನ್ನು ಉಲ್ಲೇಖಿಸಿಲ್ಲ ಎಂದು ಆಪ್‌ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...