Homeಮುಖಪುಟಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

ಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

- Advertisement -
- Advertisement -

ದೆಹಲಿ ಚುನಾವಣೆಯ ಅಭ್ಯರ್ಥಿಯಾಗಿರುವ ಬಿಜೆಪಿಯ ಕಪಿಲ್ ಮಿಶ್ರಾ ಅವರು ತಮ್ಮ ಟ್ವೀಟ್ ಮೂಲಕ ಮತದಾನವನ್ನು ಭಾರತ ವಿರುದ್ಧ ಪಾಕಿಸ್ತಾನದ ಯುದ್ದಕ್ಕೆ ಹೋಲಿಸಿದನ್ನು ಚುನಾವಣಾ ಸಂಸ್ಥೆಯು ಕಟು ಶಬ್ದಗಳಲ್ಲಿ ಖಂಡಿಸಿದೆ.

ಕಪಿಲ್ ಮಿಶ್ರಾ ಅವರ ಕೋಮುವಾದಿ ಟ್ವೀಟ್ ಅನ್ನು ಡಿಲೀಟ್‌ ಮಾಡಿ ಎಂದು ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಮನವಿ ಮಾಡಿದೆ.

 

ಇತ್ತೀಚಿಗೆ ಹಲವು ಕೋಮು ಮತ್ತು ಪ್ರಚೋದನಾಕಾರಿ ಟ್ವೀಟ್‌ಗಳನ್ನು ಮಾಡುತ್ತಿರುವ ಕಪಿಲ್ ಮಿಶ್ರಾ ಅವರು ನಿನ್ನೆ “ಭಾರತ ವಿರುದ್ಧ ಪಾಕಿಸ್ತಾನ, ಫೆಬ್ರವರಿ 8, ದೆಹಲಿ. ಭಾರತ ಮತ್ತು ಪಾಕಿಸ್ತಾನ ದೆಹಲಿಯ ಬೀದಿಗಳಲ್ಲಿ ಸ್ಪರ್ಧಿಸಲಿವೆ.” ಎಂದು ಪೋಸ್ಟ್ ಮಾಡಿದ್ದರು

ಮಿಶ್ರಾ ಅವರ ಟ್ವೀಟ್ ಅನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟ್ಟರ್ ಗೆ ಪತ್ರ ಬರೆದಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಅದು ಹೇಳಿದೆ.

ಕಪಿಲ್ ಮಿಶ್ರಾ ಅವರ ಟೀಕೆಗಳು “ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸುವುದು ಅಥವಾ ಪರಸ್ಪರ ದ್ವೇಷವನ್ನು ಉಂಟುಮಾಡುವುದು ಅಥವಾ ವಿವಿಧ ಸಮುದಾಯಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡುತ್ತವೆ” ಇದು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಟ್ವೀಟ್ ಕುರಿತು ವರದಿಯನ್ನು 24 ಗಂಟೆಗಳ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ದೆಹಲಿ ಚುನಾವಣಾ ಕಚೇರಿಗೆ ಸೂಚಿಸಲಾಗಿದೆ.

ಟ್ವೀಟ್ ಬಗ್ಗೆ ಕಪಿಲ್‌ ಮಿಶ್ರಾ “ದೆಹಲಿಯ ಅನೇಕ ಸ್ಥಳಗಳಲ್ಲಿ ಮಿನಿ ಪಾಕಿಸ್ತಾನಿಗಳನ್ನು ರಚಿಸಲಾಗಿದೆ. ಶಾಹೀನ್ ಬಾಗ್ ಅನ್ನು ವಿವಿಧ ಸ್ಥಳಗಳಲ್ಲಿ ಪುನರಾವರ್ತಿಸಲಾಗುತ್ತಿದೆ. ಇಂದರ್ ಲೋಕ್, ಚಂದ್ ಬಾಗ್ ಮುಂತಾದ ಇತರ ಸ್ಥಳಗಳು ಸಹ ಮಿನಿ ಪಾಕಿಸ್ತಾನ ಆಗಿವೆ. ರಸ್ತೆ ತಡೆ ಮಾಡುವ ಮೂಲಕ ಹಲವು ಪ್ರದೇಶಗಳು ಮತ್ತು ಶಾಲೆಗಳು ಇತ್ಯಾದಿಗಳನ್ನು ನಿರ್ಬಂಧಿಸುವ ಮೂಲಕ ಪ್ರತಿಭಟನಾಕಾರರು ಸಾಮಾನ್ಯ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಎಂದು ಹೇಳಿದ್ದಾರೆ.

ತಮಗೆ ಬಂದ ನೋಟಿಸ್ ಕುರಿತು ಮಾತನಾಡಿದ ಕಪಿಲ್‌ ಮಿಶ್ರಾ “ನಾನು ಇಂದು ನನ್ನ ಉತ್ತರವನ್ನು ನೀಡುತ್ತೇನೆ. ನಾನು ಏನೂ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ಸತ್ಯವನ್ನು ಮಾತನಾಡುವುದು ಈ ದೇಶದಲ್ಲಿ ಅಪರಾಧವಲ್ಲ. ನಾನು ಸತ್ಯವನ್ನು ಮಾತನಾಡಿದ್ದೇನೆ. ನನ್ನ ಹೇಳಿಕೆಗೆ ನಾನು ನಿಲ್ಲುತ್ತೇನೆ” ಎಂದಿದ್ದಾರೆ.

ಮಿಶ್ರಾ ಅವರ ನಾಮಪತ್ರವನ್ನು ರದ್ದುಗೊಳಿಸುವಂತೆ ಎಎಪಿ ಮುಖ್ಯ ಚುನಾವಣಾ ಅಧಿಕಾರಿಗೆ ಕೇಳಿದೆ. ಸರ್ಕಾರಿ ವಸತಿ ಸೌಕರ್ಯವನ್ನು ಬಳಸುವವರಿಗೆ ನೀರು, ವಿದ್ಯುತ್ ಮತ್ತು ದೂರವಾಣಿ ವೆಚ್ಚಗಳ ಬಗ್ಗೆ ಯಾವುದೇ ಬಾಕಿ ಪ್ರಮಾಣಪತ್ರವನ್ನು ನೀಡುವ ನಿಯಮಗಳನ್ನು ಕಡ್ಡಾಯಗೊಳಿಸಿದೆ. ಆದರೆ ಮಿಶ್ರಾ ಅವರು ತಮ್ಮ ನಾಮಪತ್ರಗಳಲ್ಲಿ ಇದನ್ನು ಉಲ್ಲೇಖಿಸಿಲ್ಲ ಎಂದು ಆಪ್‌ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...