Homeಮುಖಪುಟಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

ಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

- Advertisement -
- Advertisement -

ದೆಹಲಿ ಚುನಾವಣೆಯ ಅಭ್ಯರ್ಥಿಯಾಗಿರುವ ಬಿಜೆಪಿಯ ಕಪಿಲ್ ಮಿಶ್ರಾ ಅವರು ತಮ್ಮ ಟ್ವೀಟ್ ಮೂಲಕ ಮತದಾನವನ್ನು ಭಾರತ ವಿರುದ್ಧ ಪಾಕಿಸ್ತಾನದ ಯುದ್ದಕ್ಕೆ ಹೋಲಿಸಿದನ್ನು ಚುನಾವಣಾ ಸಂಸ್ಥೆಯು ಕಟು ಶಬ್ದಗಳಲ್ಲಿ ಖಂಡಿಸಿದೆ.

ಕಪಿಲ್ ಮಿಶ್ರಾ ಅವರ ಕೋಮುವಾದಿ ಟ್ವೀಟ್ ಅನ್ನು ಡಿಲೀಟ್‌ ಮಾಡಿ ಎಂದು ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಮನವಿ ಮಾಡಿದೆ.

 

ಇತ್ತೀಚಿಗೆ ಹಲವು ಕೋಮು ಮತ್ತು ಪ್ರಚೋದನಾಕಾರಿ ಟ್ವೀಟ್‌ಗಳನ್ನು ಮಾಡುತ್ತಿರುವ ಕಪಿಲ್ ಮಿಶ್ರಾ ಅವರು ನಿನ್ನೆ “ಭಾರತ ವಿರುದ್ಧ ಪಾಕಿಸ್ತಾನ, ಫೆಬ್ರವರಿ 8, ದೆಹಲಿ. ಭಾರತ ಮತ್ತು ಪಾಕಿಸ್ತಾನ ದೆಹಲಿಯ ಬೀದಿಗಳಲ್ಲಿ ಸ್ಪರ್ಧಿಸಲಿವೆ.” ಎಂದು ಪೋಸ್ಟ್ ಮಾಡಿದ್ದರು

ಮಿಶ್ರಾ ಅವರ ಟ್ವೀಟ್ ಅನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟ್ಟರ್ ಗೆ ಪತ್ರ ಬರೆದಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಅದು ಹೇಳಿದೆ.

ಕಪಿಲ್ ಮಿಶ್ರಾ ಅವರ ಟೀಕೆಗಳು “ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸುವುದು ಅಥವಾ ಪರಸ್ಪರ ದ್ವೇಷವನ್ನು ಉಂಟುಮಾಡುವುದು ಅಥವಾ ವಿವಿಧ ಸಮುದಾಯಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡುತ್ತವೆ” ಇದು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಟ್ವೀಟ್ ಕುರಿತು ವರದಿಯನ್ನು 24 ಗಂಟೆಗಳ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ದೆಹಲಿ ಚುನಾವಣಾ ಕಚೇರಿಗೆ ಸೂಚಿಸಲಾಗಿದೆ.

ಟ್ವೀಟ್ ಬಗ್ಗೆ ಕಪಿಲ್‌ ಮಿಶ್ರಾ “ದೆಹಲಿಯ ಅನೇಕ ಸ್ಥಳಗಳಲ್ಲಿ ಮಿನಿ ಪಾಕಿಸ್ತಾನಿಗಳನ್ನು ರಚಿಸಲಾಗಿದೆ. ಶಾಹೀನ್ ಬಾಗ್ ಅನ್ನು ವಿವಿಧ ಸ್ಥಳಗಳಲ್ಲಿ ಪುನರಾವರ್ತಿಸಲಾಗುತ್ತಿದೆ. ಇಂದರ್ ಲೋಕ್, ಚಂದ್ ಬಾಗ್ ಮುಂತಾದ ಇತರ ಸ್ಥಳಗಳು ಸಹ ಮಿನಿ ಪಾಕಿಸ್ತಾನ ಆಗಿವೆ. ರಸ್ತೆ ತಡೆ ಮಾಡುವ ಮೂಲಕ ಹಲವು ಪ್ರದೇಶಗಳು ಮತ್ತು ಶಾಲೆಗಳು ಇತ್ಯಾದಿಗಳನ್ನು ನಿರ್ಬಂಧಿಸುವ ಮೂಲಕ ಪ್ರತಿಭಟನಾಕಾರರು ಸಾಮಾನ್ಯ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಎಂದು ಹೇಳಿದ್ದಾರೆ.

ತಮಗೆ ಬಂದ ನೋಟಿಸ್ ಕುರಿತು ಮಾತನಾಡಿದ ಕಪಿಲ್‌ ಮಿಶ್ರಾ “ನಾನು ಇಂದು ನನ್ನ ಉತ್ತರವನ್ನು ನೀಡುತ್ತೇನೆ. ನಾನು ಏನೂ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ಸತ್ಯವನ್ನು ಮಾತನಾಡುವುದು ಈ ದೇಶದಲ್ಲಿ ಅಪರಾಧವಲ್ಲ. ನಾನು ಸತ್ಯವನ್ನು ಮಾತನಾಡಿದ್ದೇನೆ. ನನ್ನ ಹೇಳಿಕೆಗೆ ನಾನು ನಿಲ್ಲುತ್ತೇನೆ” ಎಂದಿದ್ದಾರೆ.

ಮಿಶ್ರಾ ಅವರ ನಾಮಪತ್ರವನ್ನು ರದ್ದುಗೊಳಿಸುವಂತೆ ಎಎಪಿ ಮುಖ್ಯ ಚುನಾವಣಾ ಅಧಿಕಾರಿಗೆ ಕೇಳಿದೆ. ಸರ್ಕಾರಿ ವಸತಿ ಸೌಕರ್ಯವನ್ನು ಬಳಸುವವರಿಗೆ ನೀರು, ವಿದ್ಯುತ್ ಮತ್ತು ದೂರವಾಣಿ ವೆಚ್ಚಗಳ ಬಗ್ಗೆ ಯಾವುದೇ ಬಾಕಿ ಪ್ರಮಾಣಪತ್ರವನ್ನು ನೀಡುವ ನಿಯಮಗಳನ್ನು ಕಡ್ಡಾಯಗೊಳಿಸಿದೆ. ಆದರೆ ಮಿಶ್ರಾ ಅವರು ತಮ್ಮ ನಾಮಪತ್ರಗಳಲ್ಲಿ ಇದನ್ನು ಉಲ್ಲೇಖಿಸಿಲ್ಲ ಎಂದು ಆಪ್‌ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...