Homeಮುಖಪುಟ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

- Advertisement -
- Advertisement -

ರೈತರ ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿದಂತೆ ಹಲವು ವಿವಾದಿತ ನಿಯಮವನ್ನು ಒಳಗೊಂಡ ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’ ಯನ್ನು ಮಂಡಿಸಲು ಒಕ್ಕೂಟ ಸರ್ಕಾರ ತಯಾರಾಗಿದೆ. ಆದರೆ ಇದರ ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ.

ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್‌ ಮಸೂದೆ-2021 ಪ್ರಕಾರ, ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್‌ಪಿ ಪಂಪ್‌ಸೆಟ್‌ವರೆಗೆ ಉಚಿತ ವಿದ್ಯುತ್‌ ಪಡೆಯುತ್ತಿದ್ದ ರೈತರೂ ಸೇರಿದಂತೆ ಎಲ್ಲರೂ ವಿದ್ಯುತ್‌ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಯ ನಂತರ ಸರ್ಕಾರದಿಂದ ಸಬ್ಸಿಡಿ ಪಡೆಯಬಹುದು.

ಇದನ್ನೂ ಓದಿ: ರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ಮಸೂದೆಯ ಕರಡು ನಿಯಮಗಳಲ್ಲಿರುವ ಈ ಪ್ರಸ್ತಾಪವು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮಸೂದೆ ಜಾರಿಯಾದರೆ ವಿದ್ಯುತ್‌ ಸರಬರಾಜು ನಿಗಮಗಳು ಖಾಸಗಿ ಕಂಪನಿಗಳ ಕೈ ಸೇರಲಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಖಾಸಗಿ ಕಂಪನಿಗಳು ರೈತರ ಶೋಷಣೆ ಮಾಡಲಿವೆ. ಇದರಿಂದ ಕೃಷಿ ಚಟುವಟಿಕೆಗಳನ್ನೇ ಮಾಡಲಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ವಿದ್ಯುತ್‌ ಪೂರೈಕೆ ಖಾಸಗೀಕರಣಕ್ಕೆ ಅಂಕಿತ ದೊರೆತರೆ ಬಡ ರೈತರು, ಕೂಲಿ ಕಾರ್ಮಿಕರಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್‌ಸೆಟ್‌, ಬೀದಿ ದೀಪ, ನೀರು ಸರಬರಾಜಿಗೆ ನೇರವಾಗಿ ನೀಡುತ್ತಿರುವ ಉಚಿತ ವಿದ್ಯುತ್‌ ಬಂದ್‌ ಆಗಲಿದೆ. ಗ್ರಾಹಕರು ಮೊದಲು ವಿದ್ಯುತ್‌ ಶುಲ್ಕ ಪಾವತಿಸಿ ಬಳಿಕ ಸರ್ಕಾರ ಸಬ್ಸಿಡಿ ಕಾರ್ಯಕ್ರಮದಡಿ ಪರಿಹಾರ ನೀಡಿದರೆ ಪಡೆಯಬೇಕಾಗುತ್ತದೆ. ಪ್ರಿಪೇಯ್ಡ್‌ ಮೀಟರ್‌ ಅಳವಡಿಕೆ ಮಾಡಿದರಂತೂ ಕೃಷಿಕರೂ ಸಹ ಮೊದಲು ಹಣ ಪಾವತಿಸಿ ಬಳಿಕ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್‌ ಬಳಕೆ ಮಾಡಿಕೊಳ್ಳುವಂತಹ ಅನಿವಾರ್ಯತೆ ಎದುರಾಗಲಿದೆ.

ಇದನ್ನೂ ಓದಿ: ರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

ಹೋರಾಟಕ್ಕೆ ರೈತ ಸಂಘಗಳ ನಿರ್ಧಾರ

ಹೊಸ ಮಸೂದೆಯ ನಿಯಮಗಳಿಂದಾಗಿ ಮಸೂದೆಯು ಕೃಷಿಕರಿಗೆ ಮರಣಶಾಸನವಾಗಲಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಹೋರಾಟ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿವೆ. ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಆಗಸ್ಟ್‌ 10 ರಂದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಜತೆ ಈಗಾಗಲೇ ಮಾತುಕತೆ ನಡೆಸಿದೆ. ಖಾಸಗೀಕರಣ ಪ್ರಸ್ತಾವನೆಯಿಂದ ಕೇಂದ್ರವು ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್‌, “ಹಿಂದೆ ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಮೀಟರ್‌ ಅಳವಡಿಕೆ ಮಾಡಿ ಖಾಸಗಿಯವರಿಗೆ ಹಸ್ತಾಂತರಿಸಲು ಯತ್ನಿಸಿದ್ದರು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರ ಸರ್ಕಾರವು 2019 ರಿಂದಲೂ ವಿದ್ಯುತ್‌ ಪೂರೈಕೆಯನ್ನು ಖಾಸಗಿಯವರಿಗೆ ವಹಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಒಂದೂವರೆ ವರ್ಷಗಳ ಕಾಲ ರೈತರಿಗೆ ಸಂಬಂಧಿಸಿದ ಯಾವುದೇ ಕಾಯಿದೆ ತಿದ್ದುಪಡಿ ತರದಂತೆ ತಡೆಯಾಜ್ಞೆ ನೀಡಿದೆ.

ಇದೀಗ ಕೇಂದ್ರವು ನ್ಯಾಯಾಲಯದ ಗಡುವು ಮುಗಿದ ತಕ್ಷಣವೇ ರೈತರ ಮೇಲೆ ಗದಾಪ್ರಹಾರಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು 2020ರ ವಿದ್ಯುತ್‌ ಕಾಯಿದೆಯನ್ನು ಅನುಷ್ಠಾನಗೊಳಿಸಲು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ. ಈ ಕುರಿತು ವಿದ್ಯುತ್‌ ಪ್ರಸರಣ ನಿಗಮಗಳ ಸಂಘಗಳೂ ನಮ್ಮನ್ನು ಸಂಪರ್ಕಿಸಿವೆ. ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಅಧ್ಯಕ್ಷ ಟಿ.ಆರ್‌. ರಾಮಕೃಷ್ಣಯ್ಯ ಪ್ರತಿಕ್ರಿಯಿಸಿ, ತಿದ್ದುಪಡಿಯಲ್ಲಿ ವಿದ್ಯುತ್‌ ಪೂರೈಕೆ, ಉಪ ಗುತ್ತಿಗೆ ಹಾಗೂ ಫ್ರಾಂಚೈಸಿಗೆ ಅವಕಾಶವಿದೆ. ಈ ಮೂಲಕ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವುದೇ ತಿದ್ದುಪಡಿ ಉದ್ದೇಶ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಮೊದಲು ಕೃಷಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುವ ವ್ಯವಸ್ಥೆಗೆ ಬದಲಾಗಿ ರೈತರಿಗೆ ನೇರವಾಗಿ ಸಹಾಯಧನ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಇದರ ಬಳಿಕ 50 ಕೆ.ಜಿ. ಯೂರಿಯಾ ಬೆಲೆ 75 ರಿಂದ 600 ರು., ಡಿಎಪಿ 175 ರಿಂದ 2 ಸಾವಿರ ರು.ಗಳಿಗೆ ಏರಿಕೆಯಾಗಿದೆ. ಇದೀಗ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಕೃಷಿ ಕ್ಷೇತ್ರವೇ ಅಪಾಯಕ್ಕೆ ಸಿಲುಕಲಿದೆ ಎಂದು ಹೇಳಿದರು.

ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರವು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದರು.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...