Homeಮುಖಪುಟ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

- Advertisement -
- Advertisement -

ರೈತರ ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿದಂತೆ ಹಲವು ವಿವಾದಿತ ನಿಯಮವನ್ನು ಒಳಗೊಂಡ ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’ ಯನ್ನು ಮಂಡಿಸಲು ಒಕ್ಕೂಟ ಸರ್ಕಾರ ತಯಾರಾಗಿದೆ. ಆದರೆ ಇದರ ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ.

ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್‌ ಮಸೂದೆ-2021 ಪ್ರಕಾರ, ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್‌ಪಿ ಪಂಪ್‌ಸೆಟ್‌ವರೆಗೆ ಉಚಿತ ವಿದ್ಯುತ್‌ ಪಡೆಯುತ್ತಿದ್ದ ರೈತರೂ ಸೇರಿದಂತೆ ಎಲ್ಲರೂ ವಿದ್ಯುತ್‌ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಯ ನಂತರ ಸರ್ಕಾರದಿಂದ ಸಬ್ಸಿಡಿ ಪಡೆಯಬಹುದು.

ಇದನ್ನೂ ಓದಿ: ರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ಮಸೂದೆಯ ಕರಡು ನಿಯಮಗಳಲ್ಲಿರುವ ಈ ಪ್ರಸ್ತಾಪವು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮಸೂದೆ ಜಾರಿಯಾದರೆ ವಿದ್ಯುತ್‌ ಸರಬರಾಜು ನಿಗಮಗಳು ಖಾಸಗಿ ಕಂಪನಿಗಳ ಕೈ ಸೇರಲಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಖಾಸಗಿ ಕಂಪನಿಗಳು ರೈತರ ಶೋಷಣೆ ಮಾಡಲಿವೆ. ಇದರಿಂದ ಕೃಷಿ ಚಟುವಟಿಕೆಗಳನ್ನೇ ಮಾಡಲಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ವಿದ್ಯುತ್‌ ಪೂರೈಕೆ ಖಾಸಗೀಕರಣಕ್ಕೆ ಅಂಕಿತ ದೊರೆತರೆ ಬಡ ರೈತರು, ಕೂಲಿ ಕಾರ್ಮಿಕರಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್‌ಸೆಟ್‌, ಬೀದಿ ದೀಪ, ನೀರು ಸರಬರಾಜಿಗೆ ನೇರವಾಗಿ ನೀಡುತ್ತಿರುವ ಉಚಿತ ವಿದ್ಯುತ್‌ ಬಂದ್‌ ಆಗಲಿದೆ. ಗ್ರಾಹಕರು ಮೊದಲು ವಿದ್ಯುತ್‌ ಶುಲ್ಕ ಪಾವತಿಸಿ ಬಳಿಕ ಸರ್ಕಾರ ಸಬ್ಸಿಡಿ ಕಾರ್ಯಕ್ರಮದಡಿ ಪರಿಹಾರ ನೀಡಿದರೆ ಪಡೆಯಬೇಕಾಗುತ್ತದೆ. ಪ್ರಿಪೇಯ್ಡ್‌ ಮೀಟರ್‌ ಅಳವಡಿಕೆ ಮಾಡಿದರಂತೂ ಕೃಷಿಕರೂ ಸಹ ಮೊದಲು ಹಣ ಪಾವತಿಸಿ ಬಳಿಕ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್‌ ಬಳಕೆ ಮಾಡಿಕೊಳ್ಳುವಂತಹ ಅನಿವಾರ್ಯತೆ ಎದುರಾಗಲಿದೆ.

ಇದನ್ನೂ ಓದಿ: ರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

ಹೋರಾಟಕ್ಕೆ ರೈತ ಸಂಘಗಳ ನಿರ್ಧಾರ

ಹೊಸ ಮಸೂದೆಯ ನಿಯಮಗಳಿಂದಾಗಿ ಮಸೂದೆಯು ಕೃಷಿಕರಿಗೆ ಮರಣಶಾಸನವಾಗಲಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಹೋರಾಟ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿವೆ. ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಆಗಸ್ಟ್‌ 10 ರಂದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಜತೆ ಈಗಾಗಲೇ ಮಾತುಕತೆ ನಡೆಸಿದೆ. ಖಾಸಗೀಕರಣ ಪ್ರಸ್ತಾವನೆಯಿಂದ ಕೇಂದ್ರವು ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್‌, “ಹಿಂದೆ ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಮೀಟರ್‌ ಅಳವಡಿಕೆ ಮಾಡಿ ಖಾಸಗಿಯವರಿಗೆ ಹಸ್ತಾಂತರಿಸಲು ಯತ್ನಿಸಿದ್ದರು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರ ಸರ್ಕಾರವು 2019 ರಿಂದಲೂ ವಿದ್ಯುತ್‌ ಪೂರೈಕೆಯನ್ನು ಖಾಸಗಿಯವರಿಗೆ ವಹಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಒಂದೂವರೆ ವರ್ಷಗಳ ಕಾಲ ರೈತರಿಗೆ ಸಂಬಂಧಿಸಿದ ಯಾವುದೇ ಕಾಯಿದೆ ತಿದ್ದುಪಡಿ ತರದಂತೆ ತಡೆಯಾಜ್ಞೆ ನೀಡಿದೆ.

ಇದೀಗ ಕೇಂದ್ರವು ನ್ಯಾಯಾಲಯದ ಗಡುವು ಮುಗಿದ ತಕ್ಷಣವೇ ರೈತರ ಮೇಲೆ ಗದಾಪ್ರಹಾರಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು 2020ರ ವಿದ್ಯುತ್‌ ಕಾಯಿದೆಯನ್ನು ಅನುಷ್ಠಾನಗೊಳಿಸಲು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ. ಈ ಕುರಿತು ವಿದ್ಯುತ್‌ ಪ್ರಸರಣ ನಿಗಮಗಳ ಸಂಘಗಳೂ ನಮ್ಮನ್ನು ಸಂಪರ್ಕಿಸಿವೆ. ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಅಧ್ಯಕ್ಷ ಟಿ.ಆರ್‌. ರಾಮಕೃಷ್ಣಯ್ಯ ಪ್ರತಿಕ್ರಿಯಿಸಿ, ತಿದ್ದುಪಡಿಯಲ್ಲಿ ವಿದ್ಯುತ್‌ ಪೂರೈಕೆ, ಉಪ ಗುತ್ತಿಗೆ ಹಾಗೂ ಫ್ರಾಂಚೈಸಿಗೆ ಅವಕಾಶವಿದೆ. ಈ ಮೂಲಕ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವುದೇ ತಿದ್ದುಪಡಿ ಉದ್ದೇಶ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಮೊದಲು ಕೃಷಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುವ ವ್ಯವಸ್ಥೆಗೆ ಬದಲಾಗಿ ರೈತರಿಗೆ ನೇರವಾಗಿ ಸಹಾಯಧನ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಇದರ ಬಳಿಕ 50 ಕೆ.ಜಿ. ಯೂರಿಯಾ ಬೆಲೆ 75 ರಿಂದ 600 ರು., ಡಿಎಪಿ 175 ರಿಂದ 2 ಸಾವಿರ ರು.ಗಳಿಗೆ ಏರಿಕೆಯಾಗಿದೆ. ಇದೀಗ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಕೃಷಿ ಕ್ಷೇತ್ರವೇ ಅಪಾಯಕ್ಕೆ ಸಿಲುಕಲಿದೆ ಎಂದು ಹೇಳಿದರು.

ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರವು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದರು.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...