Homeಮುಖಪುಟ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

- Advertisement -
- Advertisement -

ರೈತರ ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿದಂತೆ ಹಲವು ವಿವಾದಿತ ನಿಯಮವನ್ನು ಒಳಗೊಂಡ ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’ ಯನ್ನು ಮಂಡಿಸಲು ಒಕ್ಕೂಟ ಸರ್ಕಾರ ತಯಾರಾಗಿದೆ. ಆದರೆ ಇದರ ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ.

ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್‌ ಮಸೂದೆ-2021 ಪ್ರಕಾರ, ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್‌ಪಿ ಪಂಪ್‌ಸೆಟ್‌ವರೆಗೆ ಉಚಿತ ವಿದ್ಯುತ್‌ ಪಡೆಯುತ್ತಿದ್ದ ರೈತರೂ ಸೇರಿದಂತೆ ಎಲ್ಲರೂ ವಿದ್ಯುತ್‌ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಯ ನಂತರ ಸರ್ಕಾರದಿಂದ ಸಬ್ಸಿಡಿ ಪಡೆಯಬಹುದು.

ಇದನ್ನೂ ಓದಿ: ರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ಮಸೂದೆಯ ಕರಡು ನಿಯಮಗಳಲ್ಲಿರುವ ಈ ಪ್ರಸ್ತಾಪವು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮಸೂದೆ ಜಾರಿಯಾದರೆ ವಿದ್ಯುತ್‌ ಸರಬರಾಜು ನಿಗಮಗಳು ಖಾಸಗಿ ಕಂಪನಿಗಳ ಕೈ ಸೇರಲಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಖಾಸಗಿ ಕಂಪನಿಗಳು ರೈತರ ಶೋಷಣೆ ಮಾಡಲಿವೆ. ಇದರಿಂದ ಕೃಷಿ ಚಟುವಟಿಕೆಗಳನ್ನೇ ಮಾಡಲಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ವಿದ್ಯುತ್‌ ಪೂರೈಕೆ ಖಾಸಗೀಕರಣಕ್ಕೆ ಅಂಕಿತ ದೊರೆತರೆ ಬಡ ರೈತರು, ಕೂಲಿ ಕಾರ್ಮಿಕರಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್‌ಸೆಟ್‌, ಬೀದಿ ದೀಪ, ನೀರು ಸರಬರಾಜಿಗೆ ನೇರವಾಗಿ ನೀಡುತ್ತಿರುವ ಉಚಿತ ವಿದ್ಯುತ್‌ ಬಂದ್‌ ಆಗಲಿದೆ. ಗ್ರಾಹಕರು ಮೊದಲು ವಿದ್ಯುತ್‌ ಶುಲ್ಕ ಪಾವತಿಸಿ ಬಳಿಕ ಸರ್ಕಾರ ಸಬ್ಸಿಡಿ ಕಾರ್ಯಕ್ರಮದಡಿ ಪರಿಹಾರ ನೀಡಿದರೆ ಪಡೆಯಬೇಕಾಗುತ್ತದೆ. ಪ್ರಿಪೇಯ್ಡ್‌ ಮೀಟರ್‌ ಅಳವಡಿಕೆ ಮಾಡಿದರಂತೂ ಕೃಷಿಕರೂ ಸಹ ಮೊದಲು ಹಣ ಪಾವತಿಸಿ ಬಳಿಕ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್‌ ಬಳಕೆ ಮಾಡಿಕೊಳ್ಳುವಂತಹ ಅನಿವಾರ್ಯತೆ ಎದುರಾಗಲಿದೆ.

ಇದನ್ನೂ ಓದಿ: ರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

ಹೋರಾಟಕ್ಕೆ ರೈತ ಸಂಘಗಳ ನಿರ್ಧಾರ

ಹೊಸ ಮಸೂದೆಯ ನಿಯಮಗಳಿಂದಾಗಿ ಮಸೂದೆಯು ಕೃಷಿಕರಿಗೆ ಮರಣಶಾಸನವಾಗಲಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಹೋರಾಟ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿವೆ. ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಆಗಸ್ಟ್‌ 10 ರಂದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಜತೆ ಈಗಾಗಲೇ ಮಾತುಕತೆ ನಡೆಸಿದೆ. ಖಾಸಗೀಕರಣ ಪ್ರಸ್ತಾವನೆಯಿಂದ ಕೇಂದ್ರವು ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್‌, “ಹಿಂದೆ ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಮೀಟರ್‌ ಅಳವಡಿಕೆ ಮಾಡಿ ಖಾಸಗಿಯವರಿಗೆ ಹಸ್ತಾಂತರಿಸಲು ಯತ್ನಿಸಿದ್ದರು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರ ಸರ್ಕಾರವು 2019 ರಿಂದಲೂ ವಿದ್ಯುತ್‌ ಪೂರೈಕೆಯನ್ನು ಖಾಸಗಿಯವರಿಗೆ ವಹಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಒಂದೂವರೆ ವರ್ಷಗಳ ಕಾಲ ರೈತರಿಗೆ ಸಂಬಂಧಿಸಿದ ಯಾವುದೇ ಕಾಯಿದೆ ತಿದ್ದುಪಡಿ ತರದಂತೆ ತಡೆಯಾಜ್ಞೆ ನೀಡಿದೆ.

ಇದೀಗ ಕೇಂದ್ರವು ನ್ಯಾಯಾಲಯದ ಗಡುವು ಮುಗಿದ ತಕ್ಷಣವೇ ರೈತರ ಮೇಲೆ ಗದಾಪ್ರಹಾರಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು 2020ರ ವಿದ್ಯುತ್‌ ಕಾಯಿದೆಯನ್ನು ಅನುಷ್ಠಾನಗೊಳಿಸಲು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ. ಈ ಕುರಿತು ವಿದ್ಯುತ್‌ ಪ್ರಸರಣ ನಿಗಮಗಳ ಸಂಘಗಳೂ ನಮ್ಮನ್ನು ಸಂಪರ್ಕಿಸಿವೆ. ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಅಧ್ಯಕ್ಷ ಟಿ.ಆರ್‌. ರಾಮಕೃಷ್ಣಯ್ಯ ಪ್ರತಿಕ್ರಿಯಿಸಿ, ತಿದ್ದುಪಡಿಯಲ್ಲಿ ವಿದ್ಯುತ್‌ ಪೂರೈಕೆ, ಉಪ ಗುತ್ತಿಗೆ ಹಾಗೂ ಫ್ರಾಂಚೈಸಿಗೆ ಅವಕಾಶವಿದೆ. ಈ ಮೂಲಕ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವುದೇ ತಿದ್ದುಪಡಿ ಉದ್ದೇಶ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಮೊದಲು ಕೃಷಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುವ ವ್ಯವಸ್ಥೆಗೆ ಬದಲಾಗಿ ರೈತರಿಗೆ ನೇರವಾಗಿ ಸಹಾಯಧನ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಇದರ ಬಳಿಕ 50 ಕೆ.ಜಿ. ಯೂರಿಯಾ ಬೆಲೆ 75 ರಿಂದ 600 ರು., ಡಿಎಪಿ 175 ರಿಂದ 2 ಸಾವಿರ ರು.ಗಳಿಗೆ ಏರಿಕೆಯಾಗಿದೆ. ಇದೀಗ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಕೃಷಿ ಕ್ಷೇತ್ರವೇ ಅಪಾಯಕ್ಕೆ ಸಿಲುಕಲಿದೆ ಎಂದು ಹೇಳಿದರು.

ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರವು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದರು.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...