Homeಮುಖಪುಟ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

- Advertisement -
- Advertisement -

ರೈತರ ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿದಂತೆ ಹಲವು ವಿವಾದಿತ ನಿಯಮವನ್ನು ಒಳಗೊಂಡ ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’ ಯನ್ನು ಮಂಡಿಸಲು ಒಕ್ಕೂಟ ಸರ್ಕಾರ ತಯಾರಾಗಿದೆ. ಆದರೆ ಇದರ ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ.

ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್‌ ಮಸೂದೆ-2021 ಪ್ರಕಾರ, ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್‌ಪಿ ಪಂಪ್‌ಸೆಟ್‌ವರೆಗೆ ಉಚಿತ ವಿದ್ಯುತ್‌ ಪಡೆಯುತ್ತಿದ್ದ ರೈತರೂ ಸೇರಿದಂತೆ ಎಲ್ಲರೂ ವಿದ್ಯುತ್‌ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಯ ನಂತರ ಸರ್ಕಾರದಿಂದ ಸಬ್ಸಿಡಿ ಪಡೆಯಬಹುದು.

ಇದನ್ನೂ ಓದಿ: ರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ಮಸೂದೆಯ ಕರಡು ನಿಯಮಗಳಲ್ಲಿರುವ ಈ ಪ್ರಸ್ತಾಪವು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮಸೂದೆ ಜಾರಿಯಾದರೆ ವಿದ್ಯುತ್‌ ಸರಬರಾಜು ನಿಗಮಗಳು ಖಾಸಗಿ ಕಂಪನಿಗಳ ಕೈ ಸೇರಲಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಖಾಸಗಿ ಕಂಪನಿಗಳು ರೈತರ ಶೋಷಣೆ ಮಾಡಲಿವೆ. ಇದರಿಂದ ಕೃಷಿ ಚಟುವಟಿಕೆಗಳನ್ನೇ ಮಾಡಲಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ವಿದ್ಯುತ್‌ ಪೂರೈಕೆ ಖಾಸಗೀಕರಣಕ್ಕೆ ಅಂಕಿತ ದೊರೆತರೆ ಬಡ ರೈತರು, ಕೂಲಿ ಕಾರ್ಮಿಕರಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್‌ಸೆಟ್‌, ಬೀದಿ ದೀಪ, ನೀರು ಸರಬರಾಜಿಗೆ ನೇರವಾಗಿ ನೀಡುತ್ತಿರುವ ಉಚಿತ ವಿದ್ಯುತ್‌ ಬಂದ್‌ ಆಗಲಿದೆ. ಗ್ರಾಹಕರು ಮೊದಲು ವಿದ್ಯುತ್‌ ಶುಲ್ಕ ಪಾವತಿಸಿ ಬಳಿಕ ಸರ್ಕಾರ ಸಬ್ಸಿಡಿ ಕಾರ್ಯಕ್ರಮದಡಿ ಪರಿಹಾರ ನೀಡಿದರೆ ಪಡೆಯಬೇಕಾಗುತ್ತದೆ. ಪ್ರಿಪೇಯ್ಡ್‌ ಮೀಟರ್‌ ಅಳವಡಿಕೆ ಮಾಡಿದರಂತೂ ಕೃಷಿಕರೂ ಸಹ ಮೊದಲು ಹಣ ಪಾವತಿಸಿ ಬಳಿಕ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್‌ ಬಳಕೆ ಮಾಡಿಕೊಳ್ಳುವಂತಹ ಅನಿವಾರ್ಯತೆ ಎದುರಾಗಲಿದೆ.

ಇದನ್ನೂ ಓದಿ: ರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

ಹೋರಾಟಕ್ಕೆ ರೈತ ಸಂಘಗಳ ನಿರ್ಧಾರ

ಹೊಸ ಮಸೂದೆಯ ನಿಯಮಗಳಿಂದಾಗಿ ಮಸೂದೆಯು ಕೃಷಿಕರಿಗೆ ಮರಣಶಾಸನವಾಗಲಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಹೋರಾಟ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿವೆ. ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಆಗಸ್ಟ್‌ 10 ರಂದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಜತೆ ಈಗಾಗಲೇ ಮಾತುಕತೆ ನಡೆಸಿದೆ. ಖಾಸಗೀಕರಣ ಪ್ರಸ್ತಾವನೆಯಿಂದ ಕೇಂದ್ರವು ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್‌, “ಹಿಂದೆ ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಮೀಟರ್‌ ಅಳವಡಿಕೆ ಮಾಡಿ ಖಾಸಗಿಯವರಿಗೆ ಹಸ್ತಾಂತರಿಸಲು ಯತ್ನಿಸಿದ್ದರು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರ ಸರ್ಕಾರವು 2019 ರಿಂದಲೂ ವಿದ್ಯುತ್‌ ಪೂರೈಕೆಯನ್ನು ಖಾಸಗಿಯವರಿಗೆ ವಹಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಒಂದೂವರೆ ವರ್ಷಗಳ ಕಾಲ ರೈತರಿಗೆ ಸಂಬಂಧಿಸಿದ ಯಾವುದೇ ಕಾಯಿದೆ ತಿದ್ದುಪಡಿ ತರದಂತೆ ತಡೆಯಾಜ್ಞೆ ನೀಡಿದೆ.

ಇದೀಗ ಕೇಂದ್ರವು ನ್ಯಾಯಾಲಯದ ಗಡುವು ಮುಗಿದ ತಕ್ಷಣವೇ ರೈತರ ಮೇಲೆ ಗದಾಪ್ರಹಾರಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು 2020ರ ವಿದ್ಯುತ್‌ ಕಾಯಿದೆಯನ್ನು ಅನುಷ್ಠಾನಗೊಳಿಸಲು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ. ಈ ಕುರಿತು ವಿದ್ಯುತ್‌ ಪ್ರಸರಣ ನಿಗಮಗಳ ಸಂಘಗಳೂ ನಮ್ಮನ್ನು ಸಂಪರ್ಕಿಸಿವೆ. ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಅಧ್ಯಕ್ಷ ಟಿ.ಆರ್‌. ರಾಮಕೃಷ್ಣಯ್ಯ ಪ್ರತಿಕ್ರಿಯಿಸಿ, ತಿದ್ದುಪಡಿಯಲ್ಲಿ ವಿದ್ಯುತ್‌ ಪೂರೈಕೆ, ಉಪ ಗುತ್ತಿಗೆ ಹಾಗೂ ಫ್ರಾಂಚೈಸಿಗೆ ಅವಕಾಶವಿದೆ. ಈ ಮೂಲಕ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವುದೇ ತಿದ್ದುಪಡಿ ಉದ್ದೇಶ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಮೊದಲು ಕೃಷಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುವ ವ್ಯವಸ್ಥೆಗೆ ಬದಲಾಗಿ ರೈತರಿಗೆ ನೇರವಾಗಿ ಸಹಾಯಧನ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಇದರ ಬಳಿಕ 50 ಕೆ.ಜಿ. ಯೂರಿಯಾ ಬೆಲೆ 75 ರಿಂದ 600 ರು., ಡಿಎಪಿ 175 ರಿಂದ 2 ಸಾವಿರ ರು.ಗಳಿಗೆ ಏರಿಕೆಯಾಗಿದೆ. ಇದೀಗ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಕೃಷಿ ಕ್ಷೇತ್ರವೇ ಅಪಾಯಕ್ಕೆ ಸಿಲುಕಲಿದೆ ಎಂದು ಹೇಳಿದರು.

ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರವು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದರು.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....