Homeಮುಖಪುಟ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

- Advertisement -
- Advertisement -

ರೈತರ ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿದಂತೆ ಹಲವು ವಿವಾದಿತ ನಿಯಮವನ್ನು ಒಳಗೊಂಡ ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’ ಯನ್ನು ಮಂಡಿಸಲು ಒಕ್ಕೂಟ ಸರ್ಕಾರ ತಯಾರಾಗಿದೆ. ಆದರೆ ಇದರ ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ.

ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್‌ ಮಸೂದೆ-2021 ಪ್ರಕಾರ, ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್‌ಪಿ ಪಂಪ್‌ಸೆಟ್‌ವರೆಗೆ ಉಚಿತ ವಿದ್ಯುತ್‌ ಪಡೆಯುತ್ತಿದ್ದ ರೈತರೂ ಸೇರಿದಂತೆ ಎಲ್ಲರೂ ವಿದ್ಯುತ್‌ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಯ ನಂತರ ಸರ್ಕಾರದಿಂದ ಸಬ್ಸಿಡಿ ಪಡೆಯಬಹುದು.

ಇದನ್ನೂ ಓದಿ: ರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ಮಸೂದೆಯ ಕರಡು ನಿಯಮಗಳಲ್ಲಿರುವ ಈ ಪ್ರಸ್ತಾಪವು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮಸೂದೆ ಜಾರಿಯಾದರೆ ವಿದ್ಯುತ್‌ ಸರಬರಾಜು ನಿಗಮಗಳು ಖಾಸಗಿ ಕಂಪನಿಗಳ ಕೈ ಸೇರಲಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಖಾಸಗಿ ಕಂಪನಿಗಳು ರೈತರ ಶೋಷಣೆ ಮಾಡಲಿವೆ. ಇದರಿಂದ ಕೃಷಿ ಚಟುವಟಿಕೆಗಳನ್ನೇ ಮಾಡಲಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ವಿದ್ಯುತ್‌ ಪೂರೈಕೆ ಖಾಸಗೀಕರಣಕ್ಕೆ ಅಂಕಿತ ದೊರೆತರೆ ಬಡ ರೈತರು, ಕೂಲಿ ಕಾರ್ಮಿಕರಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್‌ಸೆಟ್‌, ಬೀದಿ ದೀಪ, ನೀರು ಸರಬರಾಜಿಗೆ ನೇರವಾಗಿ ನೀಡುತ್ತಿರುವ ಉಚಿತ ವಿದ್ಯುತ್‌ ಬಂದ್‌ ಆಗಲಿದೆ. ಗ್ರಾಹಕರು ಮೊದಲು ವಿದ್ಯುತ್‌ ಶುಲ್ಕ ಪಾವತಿಸಿ ಬಳಿಕ ಸರ್ಕಾರ ಸಬ್ಸಿಡಿ ಕಾರ್ಯಕ್ರಮದಡಿ ಪರಿಹಾರ ನೀಡಿದರೆ ಪಡೆಯಬೇಕಾಗುತ್ತದೆ. ಪ್ರಿಪೇಯ್ಡ್‌ ಮೀಟರ್‌ ಅಳವಡಿಕೆ ಮಾಡಿದರಂತೂ ಕೃಷಿಕರೂ ಸಹ ಮೊದಲು ಹಣ ಪಾವತಿಸಿ ಬಳಿಕ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್‌ ಬಳಕೆ ಮಾಡಿಕೊಳ್ಳುವಂತಹ ಅನಿವಾರ್ಯತೆ ಎದುರಾಗಲಿದೆ.

ಇದನ್ನೂ ಓದಿ: ರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

ಹೋರಾಟಕ್ಕೆ ರೈತ ಸಂಘಗಳ ನಿರ್ಧಾರ

ಹೊಸ ಮಸೂದೆಯ ನಿಯಮಗಳಿಂದಾಗಿ ಮಸೂದೆಯು ಕೃಷಿಕರಿಗೆ ಮರಣಶಾಸನವಾಗಲಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಹೋರಾಟ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿವೆ. ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಆಗಸ್ಟ್‌ 10 ರಂದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಜತೆ ಈಗಾಗಲೇ ಮಾತುಕತೆ ನಡೆಸಿದೆ. ಖಾಸಗೀಕರಣ ಪ್ರಸ್ತಾವನೆಯಿಂದ ಕೇಂದ್ರವು ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್‌, “ಹಿಂದೆ ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಮೀಟರ್‌ ಅಳವಡಿಕೆ ಮಾಡಿ ಖಾಸಗಿಯವರಿಗೆ ಹಸ್ತಾಂತರಿಸಲು ಯತ್ನಿಸಿದ್ದರು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರ ಸರ್ಕಾರವು 2019 ರಿಂದಲೂ ವಿದ್ಯುತ್‌ ಪೂರೈಕೆಯನ್ನು ಖಾಸಗಿಯವರಿಗೆ ವಹಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಒಂದೂವರೆ ವರ್ಷಗಳ ಕಾಲ ರೈತರಿಗೆ ಸಂಬಂಧಿಸಿದ ಯಾವುದೇ ಕಾಯಿದೆ ತಿದ್ದುಪಡಿ ತರದಂತೆ ತಡೆಯಾಜ್ಞೆ ನೀಡಿದೆ.

ಇದೀಗ ಕೇಂದ್ರವು ನ್ಯಾಯಾಲಯದ ಗಡುವು ಮುಗಿದ ತಕ್ಷಣವೇ ರೈತರ ಮೇಲೆ ಗದಾಪ್ರಹಾರಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು 2020ರ ವಿದ್ಯುತ್‌ ಕಾಯಿದೆಯನ್ನು ಅನುಷ್ಠಾನಗೊಳಿಸಲು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ. ಈ ಕುರಿತು ವಿದ್ಯುತ್‌ ಪ್ರಸರಣ ನಿಗಮಗಳ ಸಂಘಗಳೂ ನಮ್ಮನ್ನು ಸಂಪರ್ಕಿಸಿವೆ. ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಅಧ್ಯಕ್ಷ ಟಿ.ಆರ್‌. ರಾಮಕೃಷ್ಣಯ್ಯ ಪ್ರತಿಕ್ರಿಯಿಸಿ, ತಿದ್ದುಪಡಿಯಲ್ಲಿ ವಿದ್ಯುತ್‌ ಪೂರೈಕೆ, ಉಪ ಗುತ್ತಿಗೆ ಹಾಗೂ ಫ್ರಾಂಚೈಸಿಗೆ ಅವಕಾಶವಿದೆ. ಈ ಮೂಲಕ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವುದೇ ತಿದ್ದುಪಡಿ ಉದ್ದೇಶ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಮೊದಲು ಕೃಷಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುವ ವ್ಯವಸ್ಥೆಗೆ ಬದಲಾಗಿ ರೈತರಿಗೆ ನೇರವಾಗಿ ಸಹಾಯಧನ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಇದರ ಬಳಿಕ 50 ಕೆ.ಜಿ. ಯೂರಿಯಾ ಬೆಲೆ 75 ರಿಂದ 600 ರು., ಡಿಎಪಿ 175 ರಿಂದ 2 ಸಾವಿರ ರು.ಗಳಿಗೆ ಏರಿಕೆಯಾಗಿದೆ. ಇದೀಗ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಕೃಷಿ ಕ್ಷೇತ್ರವೇ ಅಪಾಯಕ್ಕೆ ಸಿಲುಕಲಿದೆ ಎಂದು ಹೇಳಿದರು.

ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರವು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದರು.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...