Homeಮುಖಪುಟಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ದೆಹಲಿ ಸರಕಾರವು ಖಾಸಗಿಯಿಂದ ವಿದ್ಯುತ್ತನ್ನು ಖರೀದಿಸುತ್ತಿದ್ದರೂ 200 ಯೂನಿಟ್ ವಿದ್ಯುತ್ತನ್ನು ದೆಹಲಿಯ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಆದರೆ ಸ್ವತಃ ವಿದ್ಯುತ್‌ ಉತ್ಪಾದಿಸುವ ಕರ್ನಾಟದಲ್ಲಿ 200 ಯೂನಿಟ್‌ಗೆ 1560 ರೂ ನಿಗಧಿ ಮಾಡಿದೆ.

- Advertisement -
- Advertisement -

ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ! ಹಾಗಾಗಿ ರಾಜ್ಯದಲ್ಲಿಯೂ ಸಹ ಕನಿಷ್ಟ ಮೂರು ತಿಂಗಳು 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ ನೀಡಬೇಕೆಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸುತ್ತದೆ.

ಈ ರೀತಿಯ ಪೋಸ್ಟರ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದೇ ಸಮಯದಲ್ಲಿ ಕರ್ನಾಟಕ ಆಮ್‌ ಆದ್ಮಿ ಪಕ್ಷವು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಲಾಕ್‌ಡೌನ್‌ನಿಂದ ಜನರು ಪಡಬಾರದ ಕಷ್ಟ ಪಡುತ್ತಿರುವಾಗ ಸರಕಾರ ಮಾತ್ರ ವಿದ್ಯುತ್ ದರವನ್ನು ಹೆಚ್ಚಿಸಿ ಜನರನ್ನು ಸಮಸ್ಯೆಗಳ ಕೂಪಕ್ಕೆ ತಳ್ಳುತ್ತಿದೆ. ಸರಕಾರಕ್ಕೆ ಜನರ ಕಷ್ಟಕ್ಕೆ ಸ್ಪಂದಿಸುವ ಅಂತಃಕರಣವಿಲ್ಲವೇ? ಜನರಿಗಲ್ಲದ ಸರಕಾರ ಮತ್ತೆ ಯಾರಿಗೆ? ಎಂದು ಪ್ರಶ್ನೆ ಮಾಡಿದೆ.

ದೆಹಲಿ ಸರಕಾರವು ಖಾಸಗಿಯಿಂದ ವಿದ್ಯುತ್ತನ್ನು ಖರೀದಿಸುತ್ತಿದ್ದರೂ 200 ಯೂನಿಟ್ ವಿದ್ಯುತ್ತನ್ನು ದೆಹಲಿಯ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಆದರೆ ಕರ್ನಾಟದಲ್ಲಿ 200 ಯೂನಿಟ್‌ಗೆ 1560 ರೂ ನಿಗಧಿ ಮಾಡಿದೆ. ಅಂತೆಯೇ ದೆಹಲಿಯಲ್ಲಿ 201 ರಿಂದ 400 ಯೂನಿಟ್ ವಿದ್ಯುತ್ ಬಳಸಿದಲ್ಲಿ 50% ಸಬ್ಸಿಡಿಯನ್ನು ಅಲ್ಲಿನ ಸರಕಾರ ನೀಡಿ 1075ರೂ ನಿಗಧಿಪಡಿಸಿದರೆ ಕರ್ನಾಟಕದಲ್ಲಿ ಮಾತ್ರ 3120 ರೂ ಆಗಿರುತ್ತದೆ. ಇಷ್ಟೊಂದು ಪ್ರಮಾಣದ ವ್ಯತ್ಯಾಸ ಮೋಸವಲ್ಲವೇ ಎಂದು ಆಮ್‌ ಆದ್ಮಿ ಪಕ್ಷ ಪ್ರಶ್ನಿಸಿದೆ.

ಸ್ವತಃ ವಿದ್ಯುತ್ ಉತ್ಪತ್ತಿ ಮಾಡುತ್ತಿರುವ ಕರ್ನಾಟಕದಲ್ಲಿ ಮಾತ್ರ ಜನರಿಗೆ ಅಳತೆ ಮೀರಿದ ದರವನ್ನು ವಿಧಿಸಲಾಗುತ್ತಿದೆ. ಸರಕಾರ ತಕ್ಷಣ 200 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಬೇಕು. ಇದರಿಂದ ಸರಕಾರದ ಬೊಕ್ಕಸಕ್ಕೆ ಅಂತಹ ನಷ್ಟವೇನೂ ಇಲ್ಲ. ಇದನ್ನು ಶಾಶ್ವತವಾಗಿ ಮಾಡಲು ಸಾಧ್ಯವಾಗದಿದ್ದರೆ ಕನಿಷ್ಟ ಆರು ತಿಂಗಳ ತನಕ ಇದನ್ನು ಜಾರಿಗೊಳಿಸಬೇಕು ಎಂದು ಆಪ್‌ ಒತ್ತಾಯಿಸಿದೆ.

2015ರ ಚುನಾವಣೆಗೂ ಮುನ್ನವೇ ಅಲ್ಲಿನ ಆಪ್‌ ಪಕ್ಷವು ಬಿಜಿಲಿ ಆಫ್‌, ಪಾನೀ ಮಾಫ್ (ವಿದ್ಯುತ್‌ ದರ ಅರ್ಧ, ನೀರಿನ ದರ ಉಚಿತ)‌ ಎಂಬ ಘೊಷಣೆಯನ್ನು ಪ್ರಣಾಳಿಕೆಯಲ್ಲಿ ನೀಡಿತ್ತು. ಆನಂತರ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದುಬಂದ ನಂತರ ಆ ಆಶ್ವಾಸನೆಯನ್ನು ಸಂಪೂರ್ಣವಾಗಿ ವಿಸ್ತರಿಸಿತ್ತು. ಅದಲ್ಲದೆ ಶಿಕ್ಷಣ, ಆರೋಗ್ಯ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಆಪ್‌ ಸರ್ಕಾರ ಮಾಡಿದ ಸಕಾರಾತ್ಮಕ ಕೆಲಸಗಳು ಅವರು ಮತ್ತೆ 2020ರಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಹಕಾರಿಯಾಗಿವೆ.

ರಾಜ್ಯ ನಡೆಸುವುದು ಹವಾನಿಯಂತ್ರಿತ ಕೋಣೆಗಳ ಒಳಗಡೆಯಲ್ಲ, ಬಡ ಜನರ ಸಮಸ್ಯೆಗಳ ಮಧ್ಯೆ ಕೂಡ. ಸರಕಾರಕ್ಕೆ ಅವರ ಕಷ್ಟಗಳನ್ನು ಅರಿಯವ ಅಂತಃಕರಣ ಬೇಕು. ಇದಕ್ಕಾಗಿ ತಕ್ಷಣ 200 ಯೂನಿಟ್ ತನಕ ಉಚಿತ 24 ಗಂಟೆಗಳ ಕಾಲ ವಿದ್ಯುತ್ತನ್ನು ರಾಜ್ಯದಲ್ಲಿ ಪೂರೈಸಬೇಕು ಎಂದು ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದೆ ಎಂದು ರಾಜ್ಯ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You know the current situations going around in the world. People are not able to have there required day meals. So the government have to understand the situations and have to help the needy one with the essentials bills like electricity water and so on. I hope the government will help the needy and come with a good idea so that the people can leave peacefully in this current situations. Thanking you!!!
    Khalid Khan

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....