Homeಮುಖಪುಟಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ದೆಹಲಿ ಸರಕಾರವು ಖಾಸಗಿಯಿಂದ ವಿದ್ಯುತ್ತನ್ನು ಖರೀದಿಸುತ್ತಿದ್ದರೂ 200 ಯೂನಿಟ್ ವಿದ್ಯುತ್ತನ್ನು ದೆಹಲಿಯ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಆದರೆ ಸ್ವತಃ ವಿದ್ಯುತ್‌ ಉತ್ಪಾದಿಸುವ ಕರ್ನಾಟದಲ್ಲಿ 200 ಯೂನಿಟ್‌ಗೆ 1560 ರೂ ನಿಗಧಿ ಮಾಡಿದೆ.

- Advertisement -
- Advertisement -

ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ! ಹಾಗಾಗಿ ರಾಜ್ಯದಲ್ಲಿಯೂ ಸಹ ಕನಿಷ್ಟ ಮೂರು ತಿಂಗಳು 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ ನೀಡಬೇಕೆಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸುತ್ತದೆ.

ಈ ರೀತಿಯ ಪೋಸ್ಟರ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದೇ ಸಮಯದಲ್ಲಿ ಕರ್ನಾಟಕ ಆಮ್‌ ಆದ್ಮಿ ಪಕ್ಷವು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಲಾಕ್‌ಡೌನ್‌ನಿಂದ ಜನರು ಪಡಬಾರದ ಕಷ್ಟ ಪಡುತ್ತಿರುವಾಗ ಸರಕಾರ ಮಾತ್ರ ವಿದ್ಯುತ್ ದರವನ್ನು ಹೆಚ್ಚಿಸಿ ಜನರನ್ನು ಸಮಸ್ಯೆಗಳ ಕೂಪಕ್ಕೆ ತಳ್ಳುತ್ತಿದೆ. ಸರಕಾರಕ್ಕೆ ಜನರ ಕಷ್ಟಕ್ಕೆ ಸ್ಪಂದಿಸುವ ಅಂತಃಕರಣವಿಲ್ಲವೇ? ಜನರಿಗಲ್ಲದ ಸರಕಾರ ಮತ್ತೆ ಯಾರಿಗೆ? ಎಂದು ಪ್ರಶ್ನೆ ಮಾಡಿದೆ.

ದೆಹಲಿ ಸರಕಾರವು ಖಾಸಗಿಯಿಂದ ವಿದ್ಯುತ್ತನ್ನು ಖರೀದಿಸುತ್ತಿದ್ದರೂ 200 ಯೂನಿಟ್ ವಿದ್ಯುತ್ತನ್ನು ದೆಹಲಿಯ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಆದರೆ ಕರ್ನಾಟದಲ್ಲಿ 200 ಯೂನಿಟ್‌ಗೆ 1560 ರೂ ನಿಗಧಿ ಮಾಡಿದೆ. ಅಂತೆಯೇ ದೆಹಲಿಯಲ್ಲಿ 201 ರಿಂದ 400 ಯೂನಿಟ್ ವಿದ್ಯುತ್ ಬಳಸಿದಲ್ಲಿ 50% ಸಬ್ಸಿಡಿಯನ್ನು ಅಲ್ಲಿನ ಸರಕಾರ ನೀಡಿ 1075ರೂ ನಿಗಧಿಪಡಿಸಿದರೆ ಕರ್ನಾಟಕದಲ್ಲಿ ಮಾತ್ರ 3120 ರೂ ಆಗಿರುತ್ತದೆ. ಇಷ್ಟೊಂದು ಪ್ರಮಾಣದ ವ್ಯತ್ಯಾಸ ಮೋಸವಲ್ಲವೇ ಎಂದು ಆಮ್‌ ಆದ್ಮಿ ಪಕ್ಷ ಪ್ರಶ್ನಿಸಿದೆ.

ಸ್ವತಃ ವಿದ್ಯುತ್ ಉತ್ಪತ್ತಿ ಮಾಡುತ್ತಿರುವ ಕರ್ನಾಟಕದಲ್ಲಿ ಮಾತ್ರ ಜನರಿಗೆ ಅಳತೆ ಮೀರಿದ ದರವನ್ನು ವಿಧಿಸಲಾಗುತ್ತಿದೆ. ಸರಕಾರ ತಕ್ಷಣ 200 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಬೇಕು. ಇದರಿಂದ ಸರಕಾರದ ಬೊಕ್ಕಸಕ್ಕೆ ಅಂತಹ ನಷ್ಟವೇನೂ ಇಲ್ಲ. ಇದನ್ನು ಶಾಶ್ವತವಾಗಿ ಮಾಡಲು ಸಾಧ್ಯವಾಗದಿದ್ದರೆ ಕನಿಷ್ಟ ಆರು ತಿಂಗಳ ತನಕ ಇದನ್ನು ಜಾರಿಗೊಳಿಸಬೇಕು ಎಂದು ಆಪ್‌ ಒತ್ತಾಯಿಸಿದೆ.

2015ರ ಚುನಾವಣೆಗೂ ಮುನ್ನವೇ ಅಲ್ಲಿನ ಆಪ್‌ ಪಕ್ಷವು ಬಿಜಿಲಿ ಆಫ್‌, ಪಾನೀ ಮಾಫ್ (ವಿದ್ಯುತ್‌ ದರ ಅರ್ಧ, ನೀರಿನ ದರ ಉಚಿತ)‌ ಎಂಬ ಘೊಷಣೆಯನ್ನು ಪ್ರಣಾಳಿಕೆಯಲ್ಲಿ ನೀಡಿತ್ತು. ಆನಂತರ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದುಬಂದ ನಂತರ ಆ ಆಶ್ವಾಸನೆಯನ್ನು ಸಂಪೂರ್ಣವಾಗಿ ವಿಸ್ತರಿಸಿತ್ತು. ಅದಲ್ಲದೆ ಶಿಕ್ಷಣ, ಆರೋಗ್ಯ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಆಪ್‌ ಸರ್ಕಾರ ಮಾಡಿದ ಸಕಾರಾತ್ಮಕ ಕೆಲಸಗಳು ಅವರು ಮತ್ತೆ 2020ರಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಹಕಾರಿಯಾಗಿವೆ.

ರಾಜ್ಯ ನಡೆಸುವುದು ಹವಾನಿಯಂತ್ರಿತ ಕೋಣೆಗಳ ಒಳಗಡೆಯಲ್ಲ, ಬಡ ಜನರ ಸಮಸ್ಯೆಗಳ ಮಧ್ಯೆ ಕೂಡ. ಸರಕಾರಕ್ಕೆ ಅವರ ಕಷ್ಟಗಳನ್ನು ಅರಿಯವ ಅಂತಃಕರಣ ಬೇಕು. ಇದಕ್ಕಾಗಿ ತಕ್ಷಣ 200 ಯೂನಿಟ್ ತನಕ ಉಚಿತ 24 ಗಂಟೆಗಳ ಕಾಲ ವಿದ್ಯುತ್ತನ್ನು ರಾಜ್ಯದಲ್ಲಿ ಪೂರೈಸಬೇಕು ಎಂದು ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದೆ ಎಂದು ರಾಜ್ಯ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You know the current situations going around in the world. People are not able to have there required day meals. So the government have to understand the situations and have to help the needy one with the essentials bills like electricity water and so on. I hope the government will help the needy and come with a good idea so that the people can leave peacefully in this current situations. Thanking you!!!
    Khalid Khan

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...