Homeಮುಖಪುಟಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ದೆಹಲಿ ಸರಕಾರವು ಖಾಸಗಿಯಿಂದ ವಿದ್ಯುತ್ತನ್ನು ಖರೀದಿಸುತ್ತಿದ್ದರೂ 200 ಯೂನಿಟ್ ವಿದ್ಯುತ್ತನ್ನು ದೆಹಲಿಯ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಆದರೆ ಸ್ವತಃ ವಿದ್ಯುತ್‌ ಉತ್ಪಾದಿಸುವ ಕರ್ನಾಟದಲ್ಲಿ 200 ಯೂನಿಟ್‌ಗೆ 1560 ರೂ ನಿಗಧಿ ಮಾಡಿದೆ.

- Advertisement -
- Advertisement -

ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ! ಹಾಗಾಗಿ ರಾಜ್ಯದಲ್ಲಿಯೂ ಸಹ ಕನಿಷ್ಟ ಮೂರು ತಿಂಗಳು 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ ನೀಡಬೇಕೆಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸುತ್ತದೆ.

ಈ ರೀತಿಯ ಪೋಸ್ಟರ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದೇ ಸಮಯದಲ್ಲಿ ಕರ್ನಾಟಕ ಆಮ್‌ ಆದ್ಮಿ ಪಕ್ಷವು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಲಾಕ್‌ಡೌನ್‌ನಿಂದ ಜನರು ಪಡಬಾರದ ಕಷ್ಟ ಪಡುತ್ತಿರುವಾಗ ಸರಕಾರ ಮಾತ್ರ ವಿದ್ಯುತ್ ದರವನ್ನು ಹೆಚ್ಚಿಸಿ ಜನರನ್ನು ಸಮಸ್ಯೆಗಳ ಕೂಪಕ್ಕೆ ತಳ್ಳುತ್ತಿದೆ. ಸರಕಾರಕ್ಕೆ ಜನರ ಕಷ್ಟಕ್ಕೆ ಸ್ಪಂದಿಸುವ ಅಂತಃಕರಣವಿಲ್ಲವೇ? ಜನರಿಗಲ್ಲದ ಸರಕಾರ ಮತ್ತೆ ಯಾರಿಗೆ? ಎಂದು ಪ್ರಶ್ನೆ ಮಾಡಿದೆ.

ದೆಹಲಿ ಸರಕಾರವು ಖಾಸಗಿಯಿಂದ ವಿದ್ಯುತ್ತನ್ನು ಖರೀದಿಸುತ್ತಿದ್ದರೂ 200 ಯೂನಿಟ್ ವಿದ್ಯುತ್ತನ್ನು ದೆಹಲಿಯ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಆದರೆ ಕರ್ನಾಟದಲ್ಲಿ 200 ಯೂನಿಟ್‌ಗೆ 1560 ರೂ ನಿಗಧಿ ಮಾಡಿದೆ. ಅಂತೆಯೇ ದೆಹಲಿಯಲ್ಲಿ 201 ರಿಂದ 400 ಯೂನಿಟ್ ವಿದ್ಯುತ್ ಬಳಸಿದಲ್ಲಿ 50% ಸಬ್ಸಿಡಿಯನ್ನು ಅಲ್ಲಿನ ಸರಕಾರ ನೀಡಿ 1075ರೂ ನಿಗಧಿಪಡಿಸಿದರೆ ಕರ್ನಾಟಕದಲ್ಲಿ ಮಾತ್ರ 3120 ರೂ ಆಗಿರುತ್ತದೆ. ಇಷ್ಟೊಂದು ಪ್ರಮಾಣದ ವ್ಯತ್ಯಾಸ ಮೋಸವಲ್ಲವೇ ಎಂದು ಆಮ್‌ ಆದ್ಮಿ ಪಕ್ಷ ಪ್ರಶ್ನಿಸಿದೆ.

ಸ್ವತಃ ವಿದ್ಯುತ್ ಉತ್ಪತ್ತಿ ಮಾಡುತ್ತಿರುವ ಕರ್ನಾಟಕದಲ್ಲಿ ಮಾತ್ರ ಜನರಿಗೆ ಅಳತೆ ಮೀರಿದ ದರವನ್ನು ವಿಧಿಸಲಾಗುತ್ತಿದೆ. ಸರಕಾರ ತಕ್ಷಣ 200 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಬೇಕು. ಇದರಿಂದ ಸರಕಾರದ ಬೊಕ್ಕಸಕ್ಕೆ ಅಂತಹ ನಷ್ಟವೇನೂ ಇಲ್ಲ. ಇದನ್ನು ಶಾಶ್ವತವಾಗಿ ಮಾಡಲು ಸಾಧ್ಯವಾಗದಿದ್ದರೆ ಕನಿಷ್ಟ ಆರು ತಿಂಗಳ ತನಕ ಇದನ್ನು ಜಾರಿಗೊಳಿಸಬೇಕು ಎಂದು ಆಪ್‌ ಒತ್ತಾಯಿಸಿದೆ.

2015ರ ಚುನಾವಣೆಗೂ ಮುನ್ನವೇ ಅಲ್ಲಿನ ಆಪ್‌ ಪಕ್ಷವು ಬಿಜಿಲಿ ಆಫ್‌, ಪಾನೀ ಮಾಫ್ (ವಿದ್ಯುತ್‌ ದರ ಅರ್ಧ, ನೀರಿನ ದರ ಉಚಿತ)‌ ಎಂಬ ಘೊಷಣೆಯನ್ನು ಪ್ರಣಾಳಿಕೆಯಲ್ಲಿ ನೀಡಿತ್ತು. ಆನಂತರ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದುಬಂದ ನಂತರ ಆ ಆಶ್ವಾಸನೆಯನ್ನು ಸಂಪೂರ್ಣವಾಗಿ ವಿಸ್ತರಿಸಿತ್ತು. ಅದಲ್ಲದೆ ಶಿಕ್ಷಣ, ಆರೋಗ್ಯ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಆಪ್‌ ಸರ್ಕಾರ ಮಾಡಿದ ಸಕಾರಾತ್ಮಕ ಕೆಲಸಗಳು ಅವರು ಮತ್ತೆ 2020ರಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಹಕಾರಿಯಾಗಿವೆ.

ರಾಜ್ಯ ನಡೆಸುವುದು ಹವಾನಿಯಂತ್ರಿತ ಕೋಣೆಗಳ ಒಳಗಡೆಯಲ್ಲ, ಬಡ ಜನರ ಸಮಸ್ಯೆಗಳ ಮಧ್ಯೆ ಕೂಡ. ಸರಕಾರಕ್ಕೆ ಅವರ ಕಷ್ಟಗಳನ್ನು ಅರಿಯವ ಅಂತಃಕರಣ ಬೇಕು. ಇದಕ್ಕಾಗಿ ತಕ್ಷಣ 200 ಯೂನಿಟ್ ತನಕ ಉಚಿತ 24 ಗಂಟೆಗಳ ಕಾಲ ವಿದ್ಯುತ್ತನ್ನು ರಾಜ್ಯದಲ್ಲಿ ಪೂರೈಸಬೇಕು ಎಂದು ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದೆ ಎಂದು ರಾಜ್ಯ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You know the current situations going around in the world. People are not able to have there required day meals. So the government have to understand the situations and have to help the needy one with the essentials bills like electricity water and so on. I hope the government will help the needy and come with a good idea so that the people can leave peacefully in this current situations. Thanking you!!!
    Khalid Khan

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...