Homeಕರ್ನಾಟಕವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

- Advertisement -
- Advertisement -

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು, ಇದು ವ್ಯಾಪಾರಸ್ಥರಿಗೆ ಹೊರೆಯಾಗಿದೆ. ಹಾಗಾಗಿ ಈ ದರ ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು (ಜೂ.22)  ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿತ್ತು. ಅದರಂತೆ ಎಲ್ಲಾ ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳಿಗೆ ಗುರುವಾರ ಕರ್ನಾಟಕ ಬಂದ್ ​ಗೆ ಕರೆ ಕೊಡಲಾಗಿದೆ. ಈ ಕರ್ನಾಟಕ ಬಂದ್‌ಗೆ ಸಿಪಿಎಂ ಕೂಡ ಬೆಂಬಲ ನೀಡಿದೆ.

ಕರ್ನಾಟಕ ಬಂದ್​ ಕುರಿತು ಕೆಸಿಸಿಐ ಅಧ್ಯಕ್ಷ ವಿನಯ್ ಜವಳಿ ಮಾತನಾಡಿ, ”ಬಂದ್ ಕರೆ ಕೇವಲ ವ್ಯಾಪಾರ ಸಂಸ್ಥೆಗಳಿಗೆ ಮತ್ತು ಸ್ವಯಂಪ್ರೇರಿತವಾಗಿದೆ. ಅಗತ್ಯ ಸೇವೆಗಳಿಗೆ, ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಒಂದು ದಿನದ ಬಂದ್‌ನಿಂದ ವ್ಯಾಪಾರ ಸಂಸ್ಥೆಗಳು ನಷ್ಟವನ್ನು ಅನುಭವಿಸುತ್ತವೆ. ಆದರೆ, ವಿದ್ಯುತ್ ದರದ ಹೆಚ್ಚಳದಿಂದ ಮುಂದೆ ಕೈಗಾರಿಕೆಗಳು ಉಳಿಯುವುದಿಲ್ಲ” ಎಂದು ಹೇಳಿದರು.

”ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆಯನ್ನು ಖಂಡಿಸಿ, ಇಂದು ಎಲ್ಲಾ ವ್ಯಾಪಾರ ಮತ್ತು ಕೈಗಾರಿಕೆಗಳು ಮುಚ್ಚಲು ನಾವು ವಿನಂತಿಸಿದ್ದೇವೆ. ಕಳೆದ ಎಂಟು ದಿನಗಳಿಂದ ನಾವು ಇದರ ಅನಾನುಕೂಲತೆಯ ಗಂಭೀರತೆಯನ್ನು ತಿಳಿಸಲು ಪ್ರಯತ್ನಿಸಿದ್ದೇವೆ. ಇನ್ನು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳ ಆದರೂ ಅಧಿಕಾರಿಗಳು ಅಥವಾ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಪರಿಹಾರ ದೊರೆಯುತ್ತಿಲ್ಲ” ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಶನಿವಾರ ಹೇಳಿದೆ.

ಇಂದು ರಾಜ್ಯದ ಗದಗ, ಬಿಜಾಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಂಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ್ ಕಾಮತಕ, ಹಾವೇರಿ, ಕಾಮತಕ ಜಿಲ್ಲಾ ಚೇಂಬರ್‌ಗಳು ಮತ್ತು ಇತರೆ ಉದ್ಯಮ ಸಂಘಗಳು ಬಂದ್‌ನಲ್ಲಿ ಪಾಲ್ಗೊಳ್ಳಲಿವೆ.

ಇದನ್ನೂ ಓದಿ: ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ಏನಿದು ಸಮಸ್ಯೆ?

ಮೇ 12 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ತನ್ನ ಸುಂಕದ ಆದೇಶದಲ್ಲಿ ಶುಲ್ಕವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳಕ್ಕೆ ಅನುಮೋದಿಸಿದೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ತಮ್ಮ ಚುನಾವಣಾ ಭರವಸೆಯನ್ನು ಈಡೇರಿಸಲು, ಕಾಂಗ್ರೆಸ್ ಸರ್ಕಾರ ಹೊಸ ದರವನ್ನು ಹೆಚ್ಚಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದು ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ.

ಈ ತಿಂಗಳಿನಲ್ಲಿ ರಾಜ್ಯದ ಸಾಕಷ್ಟು ಜನರಿಗೆ ವಿಪರೀತ ಬಿಲ್ ಬಂದಿದೆ. ಈ ಕುರಿತು ಅದು ಕೆಲವು ದೋಷದಿಂದಾಗಿದೆ ಎಂದು ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ತಿಳಿಸಿತ್ತು.

”ಸರಾಸರಿ ವಿದ್ಯುತ್ ಬಳಕೆ ಮತ್ತು ಶೇಕಡ10 ರಷ್ಟು 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ, ಅದಕ್ಕೆ ಸಬ್ಸಿಡಿ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನದನ್ನು ಪಾವತಿಸಬೇಕಾಗುತ್ತದೆ. ನಿಗದಿಪಡಿಸಿದ ಘಟಕಗಳಿಗಿಂತ ಹೆಚ್ಚು ಬಳಸುವ ಗ್ರಾಹಕರು ಬಳಸಿದ ಹೆಚ್ಚುವರಿ ಘಟಕಗಳಿಗೆ ಪಾವತಿಸಬೇಕಾಗುತ್ತದೆ. 9 ಶೇಕಡ ತೆರಿಗೆಯನ್ನು ಇದರಲ್ಲಿ ಸೇರಿಸಲಾಗುವುದು ಎಂದು ಕರ್ನಾಟಕ ವಿದ್ಯುತ್ ಸಚಿವ ಕೆಜೆ ಜಾರ್ಜ್ ಹೇಳಿದ್ದರು.

ವಿದ್ಯುತ್‌ ದರ ಹೆಚ್ಚಳದಿಂದ ಬಿಲ್ ವಿಳಂಬ: ಬೆಸ್ಕಾಂ ಅಧಿಕಾರಿಗಳ ಸ್ಪಷ್ಟನೆ

ಕಳೆದ ತಿಂಗಳ ವಿದ್ಯುತ್ ಬಿಲ್ 1-15ನೇ ತಾರೀಖಿನೊಳಗೆ ಗ್ರಾಹಕರ ಕೈ ಸೇರಬೇಕಿತ್ತು. ಆದರೆ ಈ ವರೆಗೂ ವಿದ್ಯುತ್ ಬಿಲ್ ನೀಡಲಾಗಿಲ್ಲ. ಈ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಮೂಡಿತ್ತು. ಇದೀಗ ಬೆಸ್ಕಾಂ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

”ವಿದ್ಯುತ್‌ ದರ ಹೆಚ್ಚಳ, ಗೃಹ ಜ್ಯೋತಿ ಯೋಜನೆ ಅನುಷ್ಠಾನ ಪ್ರಕ್ರಿಯೆಯಿಂದ ಮೀಟರ್ ರೀಡಿಂಗ್ ಐದು ದಿನ ತಡವಾಗಿದೆ. ಫ್ಲ್ಯಾಬ್‌ಗಳ ಬದಲಾವಣೆ, ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ (ಎಫ್‌ಪಿಪಿಸಿಎ) ಶುಲ್ಕ ಹೆಚ್ಚಳದಿಂದ ಜೂನ್ ತಿಂಗಳ ಬಿಲ್‌ನಲ್ಲಿ ವ್ಯತ್ಯಾಸವಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಬುಧವಾರ ಸಂಜೆಯೊಳಗೆ ಎಲ್ಲ ತಾಂತ್ರಿಕ ಸಮಸ್ಯೆ ಬಗೆಹರಿದಿದೆ. ಇನ್ನು ಮುಂದೆ ಮುದ್ರಣ ಮತ್ತು ಆನ್‌ಲೈನ್ ಬಿಲ್‌ನಲ್ಲಿ ವ್ಯತ್ಯಾಸ ಕಾಣಿಸುವುದಿಲ್ಲ. ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲಾಗಿದ್ದು, ಎರಡೂ ಒಂದೇ ರೀತಿಯಲ್ಲಿರುತ್ತವೆ” ಎಂದು ಅವರು ಹೇಳಿದರು.

”ಸಾಮಾನ್ಯವಾಗಿ ಪ್ರತಿ ತಿಂಗಳು 1ರಿಂದ 15ರವರೆಗೆ ಮೀಟರ್ ರೀಡಿಂಗ್ ಮಾಡಲಾಗುತ್ತದೆ. ಆದರೆ, ಗೃಹ ಜ್ಯೋತಿ ಯೋಜನೆ ಕುರಿತು ಈ ತಿಂಗಳ 5ರಂದು ಸರ್ಕಾರ ಆದೇಶ ಹೊರಡಿಸಿದ ಬಳಿಕ 6ನೇ ತಾರೀಕಿನಿಂದ ಮೀಟ‌ರ್ ರೀಡಿಂಗ್ ಕೈಗೊಳ್ಳಲಾಯಿತು. ಹೀಗಾಗಿ, ವಿಳಂಬವಾಗಿದೆ. ಈ ಐದು ದಿನಗಳ ಮೀಟರ್ ರೀಡಿಂಗ್ ಸಹ ಪಡೆದುಕೊಂಡಿದ್ದರಿಂದ ಬಿಲ್ ಮೊತ್ತದಲ್ಲಿ ಹೆಚ್ಚಳವಾಯಿತು. ಮುಂದಿನ ತಿಂಗಳ ಬಿಲ್‌ನಲ್ಲಿ ಐದು ದಿನಗಳ ಇಂಧನ ಬಳಕೆ ಶುಲ್ಕ ಕಡಿಮೆಯಾಗಲಿದೆ” ಎಂದು ಅಧಿಕಾರಿಗಳು ವಿವರಿಸಿದ್ದಾರೆ.

”ಮೇ 12ರಂದು ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ವಿದ್ಯುತ್ ದರ ಹೆಚ್ಚಿಸಿ ಆದೇಶ ನೀಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಏಪ್ರಿಲ್‌ನಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲು ಸೂಚಿಸಿತು. ಕೆಇಆರ್‌ಸಿ ನಿರ್ದೇಶನದಂತೆ ಇದೇ ಸಂದರ್ಭದಲ್ಲಿ 4 ಸ್ಪ್ಯಾಬ್‌ಗಳ ಬದಲಾಗಿ ಕೇವಲ ಎರಡು ಸ್ಪ್ಯಾಬ್‌ಗಳನ್ನು ಮಾತ್ರ ಉಳಿಸಿಕೊಳ್ಳಲಾಯಿತು. ನಂತರ ಇಂಧನ ಹೊಂದಾಣಿಕೆ ದರ ಹೆಚ್ಚಿಸಲಾಯಿತು. ಇದರಿಂದಾಗಿ, ದರ ಹೆಚ್ಚಳದ ಬಾಕಿಯನ್ನು ಏಪ್ರಿಲ್, ಮೇ ತಿಂಗಳಿಂದಲೇ ಗ್ರಾಹಕರಿಂದ ವಸೂಲಿ ಮಾಡಿದ್ದರಿಂದ ಬಿಲ್ ಮೊತ್ತದಲ್ಲಿ ಹೆಚ್ಚಳವಾಯಿತು. ಜತೆಗೆ, ಈ ಎಲ್ಲ ಹೊಸ ಬದಲಾವಣೆಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಕಾಲಾವಕಾಶ ಬೇಕಾಗಿದ್ದರಿಂದ ಬಿಲ್‌ ನೀಡುವುದು ವಿಳಂಬವಾಯಿತು” ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...