Homeಕರ್ನಾಟಕವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

- Advertisement -
- Advertisement -

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು, ಇದು ವ್ಯಾಪಾರಸ್ಥರಿಗೆ ಹೊರೆಯಾಗಿದೆ. ಹಾಗಾಗಿ ಈ ದರ ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು (ಜೂ.22)  ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿತ್ತು. ಅದರಂತೆ ಎಲ್ಲಾ ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳಿಗೆ ಗುರುವಾರ ಕರ್ನಾಟಕ ಬಂದ್ ​ಗೆ ಕರೆ ಕೊಡಲಾಗಿದೆ. ಈ ಕರ್ನಾಟಕ ಬಂದ್‌ಗೆ ಸಿಪಿಎಂ ಕೂಡ ಬೆಂಬಲ ನೀಡಿದೆ.

ಕರ್ನಾಟಕ ಬಂದ್​ ಕುರಿತು ಕೆಸಿಸಿಐ ಅಧ್ಯಕ್ಷ ವಿನಯ್ ಜವಳಿ ಮಾತನಾಡಿ, ”ಬಂದ್ ಕರೆ ಕೇವಲ ವ್ಯಾಪಾರ ಸಂಸ್ಥೆಗಳಿಗೆ ಮತ್ತು ಸ್ವಯಂಪ್ರೇರಿತವಾಗಿದೆ. ಅಗತ್ಯ ಸೇವೆಗಳಿಗೆ, ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಒಂದು ದಿನದ ಬಂದ್‌ನಿಂದ ವ್ಯಾಪಾರ ಸಂಸ್ಥೆಗಳು ನಷ್ಟವನ್ನು ಅನುಭವಿಸುತ್ತವೆ. ಆದರೆ, ವಿದ್ಯುತ್ ದರದ ಹೆಚ್ಚಳದಿಂದ ಮುಂದೆ ಕೈಗಾರಿಕೆಗಳು ಉಳಿಯುವುದಿಲ್ಲ” ಎಂದು ಹೇಳಿದರು.

”ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆಯನ್ನು ಖಂಡಿಸಿ, ಇಂದು ಎಲ್ಲಾ ವ್ಯಾಪಾರ ಮತ್ತು ಕೈಗಾರಿಕೆಗಳು ಮುಚ್ಚಲು ನಾವು ವಿನಂತಿಸಿದ್ದೇವೆ. ಕಳೆದ ಎಂಟು ದಿನಗಳಿಂದ ನಾವು ಇದರ ಅನಾನುಕೂಲತೆಯ ಗಂಭೀರತೆಯನ್ನು ತಿಳಿಸಲು ಪ್ರಯತ್ನಿಸಿದ್ದೇವೆ. ಇನ್ನು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳ ಆದರೂ ಅಧಿಕಾರಿಗಳು ಅಥವಾ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಪರಿಹಾರ ದೊರೆಯುತ್ತಿಲ್ಲ” ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಶನಿವಾರ ಹೇಳಿದೆ.

ಇಂದು ರಾಜ್ಯದ ಗದಗ, ಬಿಜಾಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಂಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ್ ಕಾಮತಕ, ಹಾವೇರಿ, ಕಾಮತಕ ಜಿಲ್ಲಾ ಚೇಂಬರ್‌ಗಳು ಮತ್ತು ಇತರೆ ಉದ್ಯಮ ಸಂಘಗಳು ಬಂದ್‌ನಲ್ಲಿ ಪಾಲ್ಗೊಳ್ಳಲಿವೆ.

ಇದನ್ನೂ ಓದಿ: ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ಏನಿದು ಸಮಸ್ಯೆ?

ಮೇ 12 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ತನ್ನ ಸುಂಕದ ಆದೇಶದಲ್ಲಿ ಶುಲ್ಕವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳಕ್ಕೆ ಅನುಮೋದಿಸಿದೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ತಮ್ಮ ಚುನಾವಣಾ ಭರವಸೆಯನ್ನು ಈಡೇರಿಸಲು, ಕಾಂಗ್ರೆಸ್ ಸರ್ಕಾರ ಹೊಸ ದರವನ್ನು ಹೆಚ್ಚಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದು ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ.

ಈ ತಿಂಗಳಿನಲ್ಲಿ ರಾಜ್ಯದ ಸಾಕಷ್ಟು ಜನರಿಗೆ ವಿಪರೀತ ಬಿಲ್ ಬಂದಿದೆ. ಈ ಕುರಿತು ಅದು ಕೆಲವು ದೋಷದಿಂದಾಗಿದೆ ಎಂದು ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ತಿಳಿಸಿತ್ತು.

”ಸರಾಸರಿ ವಿದ್ಯುತ್ ಬಳಕೆ ಮತ್ತು ಶೇಕಡ10 ರಷ್ಟು 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ, ಅದಕ್ಕೆ ಸಬ್ಸಿಡಿ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನದನ್ನು ಪಾವತಿಸಬೇಕಾಗುತ್ತದೆ. ನಿಗದಿಪಡಿಸಿದ ಘಟಕಗಳಿಗಿಂತ ಹೆಚ್ಚು ಬಳಸುವ ಗ್ರಾಹಕರು ಬಳಸಿದ ಹೆಚ್ಚುವರಿ ಘಟಕಗಳಿಗೆ ಪಾವತಿಸಬೇಕಾಗುತ್ತದೆ. 9 ಶೇಕಡ ತೆರಿಗೆಯನ್ನು ಇದರಲ್ಲಿ ಸೇರಿಸಲಾಗುವುದು ಎಂದು ಕರ್ನಾಟಕ ವಿದ್ಯುತ್ ಸಚಿವ ಕೆಜೆ ಜಾರ್ಜ್ ಹೇಳಿದ್ದರು.

ವಿದ್ಯುತ್‌ ದರ ಹೆಚ್ಚಳದಿಂದ ಬಿಲ್ ವಿಳಂಬ: ಬೆಸ್ಕಾಂ ಅಧಿಕಾರಿಗಳ ಸ್ಪಷ್ಟನೆ

ಕಳೆದ ತಿಂಗಳ ವಿದ್ಯುತ್ ಬಿಲ್ 1-15ನೇ ತಾರೀಖಿನೊಳಗೆ ಗ್ರಾಹಕರ ಕೈ ಸೇರಬೇಕಿತ್ತು. ಆದರೆ ಈ ವರೆಗೂ ವಿದ್ಯುತ್ ಬಿಲ್ ನೀಡಲಾಗಿಲ್ಲ. ಈ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಮೂಡಿತ್ತು. ಇದೀಗ ಬೆಸ್ಕಾಂ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

”ವಿದ್ಯುತ್‌ ದರ ಹೆಚ್ಚಳ, ಗೃಹ ಜ್ಯೋತಿ ಯೋಜನೆ ಅನುಷ್ಠಾನ ಪ್ರಕ್ರಿಯೆಯಿಂದ ಮೀಟರ್ ರೀಡಿಂಗ್ ಐದು ದಿನ ತಡವಾಗಿದೆ. ಫ್ಲ್ಯಾಬ್‌ಗಳ ಬದಲಾವಣೆ, ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ (ಎಫ್‌ಪಿಪಿಸಿಎ) ಶುಲ್ಕ ಹೆಚ್ಚಳದಿಂದ ಜೂನ್ ತಿಂಗಳ ಬಿಲ್‌ನಲ್ಲಿ ವ್ಯತ್ಯಾಸವಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಬುಧವಾರ ಸಂಜೆಯೊಳಗೆ ಎಲ್ಲ ತಾಂತ್ರಿಕ ಸಮಸ್ಯೆ ಬಗೆಹರಿದಿದೆ. ಇನ್ನು ಮುಂದೆ ಮುದ್ರಣ ಮತ್ತು ಆನ್‌ಲೈನ್ ಬಿಲ್‌ನಲ್ಲಿ ವ್ಯತ್ಯಾಸ ಕಾಣಿಸುವುದಿಲ್ಲ. ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲಾಗಿದ್ದು, ಎರಡೂ ಒಂದೇ ರೀತಿಯಲ್ಲಿರುತ್ತವೆ” ಎಂದು ಅವರು ಹೇಳಿದರು.

”ಸಾಮಾನ್ಯವಾಗಿ ಪ್ರತಿ ತಿಂಗಳು 1ರಿಂದ 15ರವರೆಗೆ ಮೀಟರ್ ರೀಡಿಂಗ್ ಮಾಡಲಾಗುತ್ತದೆ. ಆದರೆ, ಗೃಹ ಜ್ಯೋತಿ ಯೋಜನೆ ಕುರಿತು ಈ ತಿಂಗಳ 5ರಂದು ಸರ್ಕಾರ ಆದೇಶ ಹೊರಡಿಸಿದ ಬಳಿಕ 6ನೇ ತಾರೀಕಿನಿಂದ ಮೀಟ‌ರ್ ರೀಡಿಂಗ್ ಕೈಗೊಳ್ಳಲಾಯಿತು. ಹೀಗಾಗಿ, ವಿಳಂಬವಾಗಿದೆ. ಈ ಐದು ದಿನಗಳ ಮೀಟರ್ ರೀಡಿಂಗ್ ಸಹ ಪಡೆದುಕೊಂಡಿದ್ದರಿಂದ ಬಿಲ್ ಮೊತ್ತದಲ್ಲಿ ಹೆಚ್ಚಳವಾಯಿತು. ಮುಂದಿನ ತಿಂಗಳ ಬಿಲ್‌ನಲ್ಲಿ ಐದು ದಿನಗಳ ಇಂಧನ ಬಳಕೆ ಶುಲ್ಕ ಕಡಿಮೆಯಾಗಲಿದೆ” ಎಂದು ಅಧಿಕಾರಿಗಳು ವಿವರಿಸಿದ್ದಾರೆ.

”ಮೇ 12ರಂದು ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ವಿದ್ಯುತ್ ದರ ಹೆಚ್ಚಿಸಿ ಆದೇಶ ನೀಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಏಪ್ರಿಲ್‌ನಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲು ಸೂಚಿಸಿತು. ಕೆಇಆರ್‌ಸಿ ನಿರ್ದೇಶನದಂತೆ ಇದೇ ಸಂದರ್ಭದಲ್ಲಿ 4 ಸ್ಪ್ಯಾಬ್‌ಗಳ ಬದಲಾಗಿ ಕೇವಲ ಎರಡು ಸ್ಪ್ಯಾಬ್‌ಗಳನ್ನು ಮಾತ್ರ ಉಳಿಸಿಕೊಳ್ಳಲಾಯಿತು. ನಂತರ ಇಂಧನ ಹೊಂದಾಣಿಕೆ ದರ ಹೆಚ್ಚಿಸಲಾಯಿತು. ಇದರಿಂದಾಗಿ, ದರ ಹೆಚ್ಚಳದ ಬಾಕಿಯನ್ನು ಏಪ್ರಿಲ್, ಮೇ ತಿಂಗಳಿಂದಲೇ ಗ್ರಾಹಕರಿಂದ ವಸೂಲಿ ಮಾಡಿದ್ದರಿಂದ ಬಿಲ್ ಮೊತ್ತದಲ್ಲಿ ಹೆಚ್ಚಳವಾಯಿತು. ಜತೆಗೆ, ಈ ಎಲ್ಲ ಹೊಸ ಬದಲಾವಣೆಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಕಾಲಾವಕಾಶ ಬೇಕಾಗಿದ್ದರಿಂದ ಬಿಲ್‌ ನೀಡುವುದು ವಿಳಂಬವಾಯಿತು” ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...