Homeಕರ್ನಾಟಕವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

- Advertisement -
- Advertisement -

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು, ಇದು ವ್ಯಾಪಾರಸ್ಥರಿಗೆ ಹೊರೆಯಾಗಿದೆ. ಹಾಗಾಗಿ ಈ ದರ ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು (ಜೂ.22)  ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿತ್ತು. ಅದರಂತೆ ಎಲ್ಲಾ ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳಿಗೆ ಗುರುವಾರ ಕರ್ನಾಟಕ ಬಂದ್ ​ಗೆ ಕರೆ ಕೊಡಲಾಗಿದೆ. ಈ ಕರ್ನಾಟಕ ಬಂದ್‌ಗೆ ಸಿಪಿಎಂ ಕೂಡ ಬೆಂಬಲ ನೀಡಿದೆ.

ಕರ್ನಾಟಕ ಬಂದ್​ ಕುರಿತು ಕೆಸಿಸಿಐ ಅಧ್ಯಕ್ಷ ವಿನಯ್ ಜವಳಿ ಮಾತನಾಡಿ, ”ಬಂದ್ ಕರೆ ಕೇವಲ ವ್ಯಾಪಾರ ಸಂಸ್ಥೆಗಳಿಗೆ ಮತ್ತು ಸ್ವಯಂಪ್ರೇರಿತವಾಗಿದೆ. ಅಗತ್ಯ ಸೇವೆಗಳಿಗೆ, ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಒಂದು ದಿನದ ಬಂದ್‌ನಿಂದ ವ್ಯಾಪಾರ ಸಂಸ್ಥೆಗಳು ನಷ್ಟವನ್ನು ಅನುಭವಿಸುತ್ತವೆ. ಆದರೆ, ವಿದ್ಯುತ್ ದರದ ಹೆಚ್ಚಳದಿಂದ ಮುಂದೆ ಕೈಗಾರಿಕೆಗಳು ಉಳಿಯುವುದಿಲ್ಲ” ಎಂದು ಹೇಳಿದರು.

”ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆಯನ್ನು ಖಂಡಿಸಿ, ಇಂದು ಎಲ್ಲಾ ವ್ಯಾಪಾರ ಮತ್ತು ಕೈಗಾರಿಕೆಗಳು ಮುಚ್ಚಲು ನಾವು ವಿನಂತಿಸಿದ್ದೇವೆ. ಕಳೆದ ಎಂಟು ದಿನಗಳಿಂದ ನಾವು ಇದರ ಅನಾನುಕೂಲತೆಯ ಗಂಭೀರತೆಯನ್ನು ತಿಳಿಸಲು ಪ್ರಯತ್ನಿಸಿದ್ದೇವೆ. ಇನ್ನು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳ ಆದರೂ ಅಧಿಕಾರಿಗಳು ಅಥವಾ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಪರಿಹಾರ ದೊರೆಯುತ್ತಿಲ್ಲ” ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಶನಿವಾರ ಹೇಳಿದೆ.

ಇಂದು ರಾಜ್ಯದ ಗದಗ, ಬಿಜಾಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಂಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ್ ಕಾಮತಕ, ಹಾವೇರಿ, ಕಾಮತಕ ಜಿಲ್ಲಾ ಚೇಂಬರ್‌ಗಳು ಮತ್ತು ಇತರೆ ಉದ್ಯಮ ಸಂಘಗಳು ಬಂದ್‌ನಲ್ಲಿ ಪಾಲ್ಗೊಳ್ಳಲಿವೆ.

ಇದನ್ನೂ ಓದಿ: ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ಏನಿದು ಸಮಸ್ಯೆ?

ಮೇ 12 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ತನ್ನ ಸುಂಕದ ಆದೇಶದಲ್ಲಿ ಶುಲ್ಕವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳಕ್ಕೆ ಅನುಮೋದಿಸಿದೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ತಮ್ಮ ಚುನಾವಣಾ ಭರವಸೆಯನ್ನು ಈಡೇರಿಸಲು, ಕಾಂಗ್ರೆಸ್ ಸರ್ಕಾರ ಹೊಸ ದರವನ್ನು ಹೆಚ್ಚಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದು ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ.

ಈ ತಿಂಗಳಿನಲ್ಲಿ ರಾಜ್ಯದ ಸಾಕಷ್ಟು ಜನರಿಗೆ ವಿಪರೀತ ಬಿಲ್ ಬಂದಿದೆ. ಈ ಕುರಿತು ಅದು ಕೆಲವು ದೋಷದಿಂದಾಗಿದೆ ಎಂದು ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ತಿಳಿಸಿತ್ತು.

”ಸರಾಸರಿ ವಿದ್ಯುತ್ ಬಳಕೆ ಮತ್ತು ಶೇಕಡ10 ರಷ್ಟು 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ, ಅದಕ್ಕೆ ಸಬ್ಸಿಡಿ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನದನ್ನು ಪಾವತಿಸಬೇಕಾಗುತ್ತದೆ. ನಿಗದಿಪಡಿಸಿದ ಘಟಕಗಳಿಗಿಂತ ಹೆಚ್ಚು ಬಳಸುವ ಗ್ರಾಹಕರು ಬಳಸಿದ ಹೆಚ್ಚುವರಿ ಘಟಕಗಳಿಗೆ ಪಾವತಿಸಬೇಕಾಗುತ್ತದೆ. 9 ಶೇಕಡ ತೆರಿಗೆಯನ್ನು ಇದರಲ್ಲಿ ಸೇರಿಸಲಾಗುವುದು ಎಂದು ಕರ್ನಾಟಕ ವಿದ್ಯುತ್ ಸಚಿವ ಕೆಜೆ ಜಾರ್ಜ್ ಹೇಳಿದ್ದರು.

ವಿದ್ಯುತ್‌ ದರ ಹೆಚ್ಚಳದಿಂದ ಬಿಲ್ ವಿಳಂಬ: ಬೆಸ್ಕಾಂ ಅಧಿಕಾರಿಗಳ ಸ್ಪಷ್ಟನೆ

ಕಳೆದ ತಿಂಗಳ ವಿದ್ಯುತ್ ಬಿಲ್ 1-15ನೇ ತಾರೀಖಿನೊಳಗೆ ಗ್ರಾಹಕರ ಕೈ ಸೇರಬೇಕಿತ್ತು. ಆದರೆ ಈ ವರೆಗೂ ವಿದ್ಯುತ್ ಬಿಲ್ ನೀಡಲಾಗಿಲ್ಲ. ಈ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಮೂಡಿತ್ತು. ಇದೀಗ ಬೆಸ್ಕಾಂ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

”ವಿದ್ಯುತ್‌ ದರ ಹೆಚ್ಚಳ, ಗೃಹ ಜ್ಯೋತಿ ಯೋಜನೆ ಅನುಷ್ಠಾನ ಪ್ರಕ್ರಿಯೆಯಿಂದ ಮೀಟರ್ ರೀಡಿಂಗ್ ಐದು ದಿನ ತಡವಾಗಿದೆ. ಫ್ಲ್ಯಾಬ್‌ಗಳ ಬದಲಾವಣೆ, ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ (ಎಫ್‌ಪಿಪಿಸಿಎ) ಶುಲ್ಕ ಹೆಚ್ಚಳದಿಂದ ಜೂನ್ ತಿಂಗಳ ಬಿಲ್‌ನಲ್ಲಿ ವ್ಯತ್ಯಾಸವಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಬುಧವಾರ ಸಂಜೆಯೊಳಗೆ ಎಲ್ಲ ತಾಂತ್ರಿಕ ಸಮಸ್ಯೆ ಬಗೆಹರಿದಿದೆ. ಇನ್ನು ಮುಂದೆ ಮುದ್ರಣ ಮತ್ತು ಆನ್‌ಲೈನ್ ಬಿಲ್‌ನಲ್ಲಿ ವ್ಯತ್ಯಾಸ ಕಾಣಿಸುವುದಿಲ್ಲ. ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲಾಗಿದ್ದು, ಎರಡೂ ಒಂದೇ ರೀತಿಯಲ್ಲಿರುತ್ತವೆ” ಎಂದು ಅವರು ಹೇಳಿದರು.

”ಸಾಮಾನ್ಯವಾಗಿ ಪ್ರತಿ ತಿಂಗಳು 1ರಿಂದ 15ರವರೆಗೆ ಮೀಟರ್ ರೀಡಿಂಗ್ ಮಾಡಲಾಗುತ್ತದೆ. ಆದರೆ, ಗೃಹ ಜ್ಯೋತಿ ಯೋಜನೆ ಕುರಿತು ಈ ತಿಂಗಳ 5ರಂದು ಸರ್ಕಾರ ಆದೇಶ ಹೊರಡಿಸಿದ ಬಳಿಕ 6ನೇ ತಾರೀಕಿನಿಂದ ಮೀಟ‌ರ್ ರೀಡಿಂಗ್ ಕೈಗೊಳ್ಳಲಾಯಿತು. ಹೀಗಾಗಿ, ವಿಳಂಬವಾಗಿದೆ. ಈ ಐದು ದಿನಗಳ ಮೀಟರ್ ರೀಡಿಂಗ್ ಸಹ ಪಡೆದುಕೊಂಡಿದ್ದರಿಂದ ಬಿಲ್ ಮೊತ್ತದಲ್ಲಿ ಹೆಚ್ಚಳವಾಯಿತು. ಮುಂದಿನ ತಿಂಗಳ ಬಿಲ್‌ನಲ್ಲಿ ಐದು ದಿನಗಳ ಇಂಧನ ಬಳಕೆ ಶುಲ್ಕ ಕಡಿಮೆಯಾಗಲಿದೆ” ಎಂದು ಅಧಿಕಾರಿಗಳು ವಿವರಿಸಿದ್ದಾರೆ.

”ಮೇ 12ರಂದು ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ವಿದ್ಯುತ್ ದರ ಹೆಚ್ಚಿಸಿ ಆದೇಶ ನೀಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಏಪ್ರಿಲ್‌ನಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲು ಸೂಚಿಸಿತು. ಕೆಇಆರ್‌ಸಿ ನಿರ್ದೇಶನದಂತೆ ಇದೇ ಸಂದರ್ಭದಲ್ಲಿ 4 ಸ್ಪ್ಯಾಬ್‌ಗಳ ಬದಲಾಗಿ ಕೇವಲ ಎರಡು ಸ್ಪ್ಯಾಬ್‌ಗಳನ್ನು ಮಾತ್ರ ಉಳಿಸಿಕೊಳ್ಳಲಾಯಿತು. ನಂತರ ಇಂಧನ ಹೊಂದಾಣಿಕೆ ದರ ಹೆಚ್ಚಿಸಲಾಯಿತು. ಇದರಿಂದಾಗಿ, ದರ ಹೆಚ್ಚಳದ ಬಾಕಿಯನ್ನು ಏಪ್ರಿಲ್, ಮೇ ತಿಂಗಳಿಂದಲೇ ಗ್ರಾಹಕರಿಂದ ವಸೂಲಿ ಮಾಡಿದ್ದರಿಂದ ಬಿಲ್ ಮೊತ್ತದಲ್ಲಿ ಹೆಚ್ಚಳವಾಯಿತು. ಜತೆಗೆ, ಈ ಎಲ್ಲ ಹೊಸ ಬದಲಾವಣೆಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಕಾಲಾವಕಾಶ ಬೇಕಾಗಿದ್ದರಿಂದ ಬಿಲ್‌ ನೀಡುವುದು ವಿಳಂಬವಾಯಿತು” ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...