Homeಕರ್ನಾಟಕವಿದ್ಯುತ್ ಕಳ್ಳತನ: ಬೆಸ್ಕಾಂಗೆ ದಂಡ ಪಾವತಿಸಿದ ಕುಮಾರಸ್ವಾಮಿ

ವಿದ್ಯುತ್ ಕಳ್ಳತನ: ಬೆಸ್ಕಾಂಗೆ ದಂಡ ಪಾವತಿಸಿದ ಕುಮಾರಸ್ವಾಮಿ

- Advertisement -
- Advertisement -

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೆ.ಪಿ. ನಗರದ ಮೂರನೇ ಹಂತದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಳವು ಮಾಡಿದ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಸ್ಕಾಂ ವಿಧಿಸಿದ್ದ ದಂಡವನ್ನು ಪಾವತಿಸಿರುವ ಬಗ್ಗೆ ವರದಿಯಾಗಿದೆ.

ಹೆಚ್.ಡಿ. ಕುಮಾರಸ್ವಾಮಿ ಅವರು ಬೆಸ್ಕಾಂಗೆ 68,526 ರೂ. ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎಂದು ಎಂದು ತಿಳಿದು ಬಂದಿದೆ.

ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು.

ಕುಮಾರಸ್ವಾಮಿ ಅವರ ಮನೆಗೆ ದೀಪಾಲಂಕಾರ ಮಾಡಲು ನೇರವಾಗಿ ವಿದ್ಯುತ್ ಕಂಬದಿಂದ ಸಂಪರ್ಕ ಕಲ್ಪಿಸಿರುವುದನ್ನು ಪತ್ತೆ ಹಚ್ಚಿದ್ದ ಕೆಲವರು, ಸಾಮಾಜಿಕ ಮಾಧ್ಯಮಗಳ ಮೂಲಕ ಈ ವಿಷಯ ಬಹಿರಂಗ ಪಡಿಸಿದ್ದರು.

ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿ. ಪ್ರಶಾಂತ್ ಕುಮಾರ್ ಈ ಕುರಿತು ಬೆಸ್ಕಾಂ ಜಾಗೃತ ದಳದ ಬೆಂಗಳೂರು ವೃತ್ತದ ವ್ಯಾಪ್ತಿಯ ಜಯನಗರ ಠಾಣೆಗೆ ದೂರು ಸಲ್ಲಿಸಿದ್ದರು.

”ವಿದ್ಯುಚ್ಛಕ್ತಿ ಕಾಯ್ದೆ 2003ರ ಸೆಕ್ಷನ್ 135ರ ಅಡಿಯಲ್ಲಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಬೆಸ್ಕಾಂ ಜಾಗೃತ ದಳದ ಡಿವೈಎಸ್‌ಪಿ ಅನುಷಾ ಭೇಟಿ ಪರಿಶೀಲಿಸಿದ್ದರು. ಇನ್‌ಸ್ಪೆಕ್ಟರ್ ಎಸ್. ಪ್ರದೀಪ್‌ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

”ವಿದ್ಯುತ್ ಕಳವು ಮಾಡಿರುವುದು ಸಾಬೀತಾದರೆ ಮೂರು ವರ್ಷ ಜೈಲು ಅಥವಾ ದಂಡ ವಿಧಿಸಬಹುದಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕುಮಾರಸ್ವಾಮಿ ವಿರುದ್ಧ ವಿದ್ಯುತ್‌ ಕಳ್ಳತನದ ಆರೋಪದ ಬೆನ್ನಲ್ಲೇ ”ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ” ಎಂದು ಬರೆದು ಅಂಟಿಸಿರುವ ಪೋಸ್ಟರ್‌ ವ್ಯಾಪಕವಾಗಿ ವೈರಲ್‌ ಆಗಿದೆ.

ಎಚ್‌ಡಿಕೆ ನಿವಾಸದ ಬಳಿ ‘ಕರೆಂಟ್ ಕದ್ದರು ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು’, ‘ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ’ ಎಂದು ಪೋಸ್ಟರ್‌ ಅಂಟಿಸಲಾಗಿದೆ.

ಈ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ಪೋಸ್ಟರ್‌ಗಳು ಸಾಮಾಜಿಕ ಮಾದ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಇದನ್ನೂ ಓದಿ: ಕುಮಾರಸ್ವಾಮಿಯ ಕಾಮಾಲೆ ಕಣ್ಣಿಗೆ ಎಲ್ಲವೂ ಲಂಚದ ವ್ಯವಹಾರಗಳಂತೆ ಕಾಣಿಸುತ್ತಿದೆ: ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...