Homeಕರ್ನಾಟಕವಿದ್ಯುತ್ ಕಳ್ಳತನ: ಬೆಸ್ಕಾಂಗೆ ದಂಡ ಪಾವತಿಸಿದ ಕುಮಾರಸ್ವಾಮಿ

ವಿದ್ಯುತ್ ಕಳ್ಳತನ: ಬೆಸ್ಕಾಂಗೆ ದಂಡ ಪಾವತಿಸಿದ ಕುಮಾರಸ್ವಾಮಿ

- Advertisement -
- Advertisement -

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೆ.ಪಿ. ನಗರದ ಮೂರನೇ ಹಂತದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಳವು ಮಾಡಿದ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಸ್ಕಾಂ ವಿಧಿಸಿದ್ದ ದಂಡವನ್ನು ಪಾವತಿಸಿರುವ ಬಗ್ಗೆ ವರದಿಯಾಗಿದೆ.

ಹೆಚ್.ಡಿ. ಕುಮಾರಸ್ವಾಮಿ ಅವರು ಬೆಸ್ಕಾಂಗೆ 68,526 ರೂ. ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎಂದು ಎಂದು ತಿಳಿದು ಬಂದಿದೆ.

ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು.

ಕುಮಾರಸ್ವಾಮಿ ಅವರ ಮನೆಗೆ ದೀಪಾಲಂಕಾರ ಮಾಡಲು ನೇರವಾಗಿ ವಿದ್ಯುತ್ ಕಂಬದಿಂದ ಸಂಪರ್ಕ ಕಲ್ಪಿಸಿರುವುದನ್ನು ಪತ್ತೆ ಹಚ್ಚಿದ್ದ ಕೆಲವರು, ಸಾಮಾಜಿಕ ಮಾಧ್ಯಮಗಳ ಮೂಲಕ ಈ ವಿಷಯ ಬಹಿರಂಗ ಪಡಿಸಿದ್ದರು.

ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿ. ಪ್ರಶಾಂತ್ ಕುಮಾರ್ ಈ ಕುರಿತು ಬೆಸ್ಕಾಂ ಜಾಗೃತ ದಳದ ಬೆಂಗಳೂರು ವೃತ್ತದ ವ್ಯಾಪ್ತಿಯ ಜಯನಗರ ಠಾಣೆಗೆ ದೂರು ಸಲ್ಲಿಸಿದ್ದರು.

”ವಿದ್ಯುಚ್ಛಕ್ತಿ ಕಾಯ್ದೆ 2003ರ ಸೆಕ್ಷನ್ 135ರ ಅಡಿಯಲ್ಲಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಬೆಸ್ಕಾಂ ಜಾಗೃತ ದಳದ ಡಿವೈಎಸ್‌ಪಿ ಅನುಷಾ ಭೇಟಿ ಪರಿಶೀಲಿಸಿದ್ದರು. ಇನ್‌ಸ್ಪೆಕ್ಟರ್ ಎಸ್. ಪ್ರದೀಪ್‌ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

”ವಿದ್ಯುತ್ ಕಳವು ಮಾಡಿರುವುದು ಸಾಬೀತಾದರೆ ಮೂರು ವರ್ಷ ಜೈಲು ಅಥವಾ ದಂಡ ವಿಧಿಸಬಹುದಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕುಮಾರಸ್ವಾಮಿ ವಿರುದ್ಧ ವಿದ್ಯುತ್‌ ಕಳ್ಳತನದ ಆರೋಪದ ಬೆನ್ನಲ್ಲೇ ”ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ” ಎಂದು ಬರೆದು ಅಂಟಿಸಿರುವ ಪೋಸ್ಟರ್‌ ವ್ಯಾಪಕವಾಗಿ ವೈರಲ್‌ ಆಗಿದೆ.

ಎಚ್‌ಡಿಕೆ ನಿವಾಸದ ಬಳಿ ‘ಕರೆಂಟ್ ಕದ್ದರು ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು’, ‘ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ’ ಎಂದು ಪೋಸ್ಟರ್‌ ಅಂಟಿಸಲಾಗಿದೆ.

ಈ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ಪೋಸ್ಟರ್‌ಗಳು ಸಾಮಾಜಿಕ ಮಾದ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಇದನ್ನೂ ಓದಿ: ಕುಮಾರಸ್ವಾಮಿಯ ಕಾಮಾಲೆ ಕಣ್ಣಿಗೆ ಎಲ್ಲವೂ ಲಂಚದ ವ್ಯವಹಾರಗಳಂತೆ ಕಾಣಿಸುತ್ತಿದೆ: ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...