Homeಮುಖಪುಟಚುನಾವಣಾ ಬಾಂಡ್ ಯೋಜನೆ; ತಿನ್ನುವೆ, ತಿನ್ನಲು ಬಿಡುವೆ, ಅದೂ ಕಾನೂನಿನ ಆಧಾರದ ಮೇಲೆಯೇ!

ಚುನಾವಣಾ ಬಾಂಡ್ ಯೋಜನೆ; ತಿನ್ನುವೆ, ತಿನ್ನಲು ಬಿಡುವೆ, ಅದೂ ಕಾನೂನಿನ ಆಧಾರದ ಮೇಲೆಯೇ!

- Advertisement -
- Advertisement -

ಆಡಳಿತ ನಡೆಸುವವರು ಮತ್ತು ವ್ಯಾಪಾರಿ ವರ್ಗದ ನಡುವೆ ಇರುವ ಸಹಕಾರ, ಸಹಯೋಗ, ಸಮನ್ವಯ ಹಾಗೂ ಅದರೊಂದಿಗೆ ನಡೆಯುವ ರಹಸ್ಯ ಒಪ್ಪಂದಗಳ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಆದರೆ ಇಂತಹ ಏರ್ಪಾಡುಗಳು ಅತ್ಯಂತ ಅನೌಪಚಾರಿಕವಾಗಿರುತ್ತವೆ ಹಾಗೂ ಕಾನೂನಿನ ಪರಿಭಾಷೆಯೊಳಗೆ ಬರದಂತಹ ಏರ್ಪಾಡುಗಳಾಗಿರುತ್ತವೆ ಹಾಗೂ ಇಂತಹ ಏರ್ಪಾಡುಗಳಾಗಿವೆ ಅಥವಾ ಅಂತಹ ಸಾಧ್ಯತೆಗಳಿವೆ ಎನ್ನುವ ಸಮಯದಲ್ಲಿ ಇನ್ನೂ ಹೆಚ್ಚಿನ ನಿರ್ಬಂಧಗಳಿರುತ್ತವೆ. ಈ ಮುನ್ನ ಯಾವುದೇ ಉದ್ದಿಮೆ ಅಥವಾ ವ್ಯಾವಹಾರಿಕ ಸಂಸ್ಥೆ ತನ್ನ ಆಡಳಿತ ಹಾಗೂ ನೀತಿಗಳಲ್ಲಿ ಸರ್ಕಾರವನ್ನು ದೊಡ್ಡ ಮಟ್ಟದಲ್ಲಿ ಪ್ರಭಾವಿಸದಂತೆ ತಡೆಯೊಡ್ಡಲು ಹೆಚ್ಚು ಕಟ್ಟುನಿಟ್ಟಾದ ನಿಯಂತ್ರಣ ಮತ್ತು ನಿರ್ಬಂಧನೆಗಳನ್ನು ಹೇರಲಾಗಿತ್ತು. ಉದಾಹರಣೆಗೆ, ರಾಜಕೀಯ ಪಕ್ಷಗಳಿಗೆ ಯಾವುದೇ ಕಂಪನಿಯು ದೇಣಿಗೆ ನೀಡಬೇಕೆಂದಿದ್ದರೆ ಅವುಗಳು ತಮ್ಮ ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಆದ ಸರಾಸರಿ ನಿವ್ವಳ ಲಾಭದಲ್ಲಿ ಗರಿಷ್ಠ 7.5% ಮಾತ್ರ ನೀಡಬಹುದಾಗಿತ್ತು.

ಆದರೆ, ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯ ವಿಷಯದಲ್ಲಿ ಪಾರದರ್ಶಿಕತೆಯನ್ನು ತರುವ ನೆಪದಲ್ಲಿ ನ್ಯಾಷನಲ್ ಡೆಮಾಕ್ರೆಟಿಕ್ ಅಲಾಯನ್ಸ್ (ಎನ್‌ಡಿಎ) ಸರಕಾರವು ಮೋದಿಯ ನೇತೃತ್ವದಲ್ಲಿ ಈ ನಿಯಂತ್ರಣ ಕಾನೂನು ಮತ್ತು ನೀತಿಗಳಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡಿತು. ಅದರಿಂದ ಆಗಿದ್ದೇನೆಂದರೆ, ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಒಟ್ಟಾರೆ ಪ್ರಕ್ರಿಯೆಯು ಇನ್ನಷ್ಟು ಅಪಾರದರ್ಶಕವಾಯಿತು. ವಿರೋಧ ಪಕ್ಷಗಳ ಮೇಲೆ ಅನಧಿಕೃತ ನಿಯಂತ್ರಣಕ್ಕೆ ಮತ್ತು ಅವುಗಳನ್ನು ಮ್ಯಾನಿಪುಲೇಟ್ ಮಾಡುವುದಕ್ಕೆ ಎಡೆಮಾಡಿಕೊಟ್ಟಿತು, ಅಷ್ಟೇ ಅಲ್ಲದೇ, ದಾನಿಗಳ ಮೇಲೆಯೂ ನಿಯಂತ್ರಣ ಸಾಧಿಸಿದಂತಾಯಿತು ಹಾಗೂ ಶೆಲ್ ಕಂಪನಿಗಳ ಮೂಲಕ ಮನಿ ಲಾಂಡರಿಂಗ್‌ನ ಕೆಲಸವನ್ನು ಕಾನೂನುಬದ್ಧಗೊಳಿಸಿದಂತಾಯಿತು.

2018ರಲ್ಲಿ ಚುನಾವಣಾ ಬಾಂಡ್‌ಗಳನ್ನು ತರುವುದಕ್ಕೆ ಮುನ್ನ ಮೋದಿ ಸರಕಾರವು 2017ರಲ್ಲಿ ಕಂಪನೀಸ್ ಆಕ್ಟ್‌ಗೆ ತಿದ್ದುಪಡಿ ತಂದಿತು. ಅದರಿಂದ ಆಗಿದ್ದು, ರಾಜಕೀಯದಲ್ಲಿನ ಮತ್ತು ಕಾರ್ಪೊರೆಟ್ ಜಗತ್ತಿನ ನೀತಿಬಾಹಿರ ಶಕ್ತಿಗಳೆಲ್ಲವೂ ಒಂದೆಡೆ ಬಂದು, ಕಾನೂನುಬದ್ಧವಾಗಿರುವ ಒಂದು ರೀತಿಯ ಅಪವಿತ್ರ ಮೈತ್ರಿಯನ್ನು ರಚಿಸಿಕೊಳ್ಳಲು ಅನುವು ಮಾಡಿಕೊಟ್ಟಿತು; ಆಗ ಕಾರ್ಪೊರೆಟ್ ಕಂಪನಿಗಳಿಂದ, ಆ ಕಂಪನಿಗಳ ಅಮಾಯಕ ಷೇರುದಾರರಿಂದ ಮೌಲ್ಯದಿಂದ ಲೂಟಿ ಹೊಡೆಯಲು, ಕಪ್ಪುಹಣವನ್ನು ಬಿಳಿಹಣವಾಗಿ ಮಾರ್ಪಾಡಾಗಿಸಿ ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಮರಳಿ ತರಲು ರೌಂಡ್ ಟ್ರಿಪಿಂಗ್ ಮಾಡಲು ಮಾರಾಟ ಕಡಿಮೆ ತೋರಿಸುವುದು ಮುಂತಾದ ಕೃತ್ಯಗಳಿಗೆ ಎಡೆಮಾಡಿಕೊಟ್ಟಂತಾಯಿತು; ಇದು ಆಗಿದ್ದಕ್ಕೆ ಒಂದು ಮುಖ್ಯ ಕಾರಣ, ಆಯಾ ಕಂಪನಿಗಳ ಹಿಂದಿನ ಮೂರು ವರ್ಷಗಳಲ್ಲಿ ಸರಾಸರಿ ನಿವ್ವಳ ಲಾಭದಲ್ಲಿ 7.5% ಮಾತ್ರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಬೇಕೆಂಬ ನಿಯಮವನ್ನು ತೆಗೆದುಹಾಕಿದ್ದಕ್ಕೆ. ಇದರಿಂದ ನಿಜವಾಗಿ ಆಗಿದ್ದೇನೆಂದರೆ, ಆದಾಯದ ದಾಖಲೆಗಳಲ್ಲಿ ವಿಂಡೋ ಡ್ರೆಸಿಂಗ್ (ತೆರಿಗೆ ಉಳಿಸಲು ತಮ್ಮ ಬ್ಯಾಲೆನ್ಸ್ ಶೀಟ್‌ಅನ್ನು ತಿರುಚುವುದು) ಮಾಡುವುದರಲ್ಲಿ ನಿರತವಾಗುವುದು ಹೆಚ್ಚಿತು ಹಾಗೂ ರಾಜಕೀಯ ಪಕ್ಷಗಳಿಗೆ ಎಲ್ಲೆ ಇಲ್ಲದೇ ದೇಣಿಗೆ ನೀಡುವ ಹೆಸರಿನಲ್ಲಿ ಬ್ಯಾಲೆನ್ಸ್ ಶೀಟ್‌ಗಳಿಂದ ಹಣವನ್ನು ತೆಗೆದುಕೊಳ್ಳುವ ಪ್ರಕ್ರಿಯೆ ಶುರುವಾಯಿತು. ಈ ತಿದ್ದುಪಡಿಯ ಪರಿಣಾಮವಾಗಿ ಶೆಲ್ ಕಂಪನಿಗಳಲ್ಲಿ ಹಣ ತೊಡಗಿಸಲೆಂದೇ ಇನ್ನೊಂದು ಶೆಲ್ ಕಂಪನಿಯನ್ನು ಸೃಷ್ಟಿಸಿ, ಆಡಳಿತಾರೂಢ ರಾಜಕೀಯ ಪಕ್ಷಗಳಿಗೆ ಯಾವುದೇ ನಿಯಂತ್ರಣವಿಲ್ಲದೇ, ಮುಂಚೆ ಇದ್ದ ಒಟ್ಟಾರೆ ಲಾಭದ 7.5%ನ ಮಿತಿಯ ನಿಯಂತ್ರಣವಿಲ್ಲದೇ ಲಂಚ ನೀಡಲು ದಾರಿ ಮಾಡಿಕೊಟ್ಟಂತಾಯಿತು.

ನಂತರ 2018ರಲ್ಲಿ ಇಂತಹ ಕಾನೂನುಬಾಹಿರವಾಗಿ ಹಣವನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಸರಳಗೊಳಿಸಲು (ಸಕ್ರಮಗೊಳಿಸಲು) ’ಚುನಾವಣಾ ಬಾಂಡ್‌ಗಳ ವ್ಯವಸ್ಥೆ’ಯನ್ನು ಪರಿಚಯಿಸಲಾಯಿತು. 2017ರ ಫೆಬ್ರುವರಿ 1ರಂದು ಒಕ್ಕೂಟ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿಯು ಅತ್ಯಂತ ವ್ಯಂಗ್ಯವಾಗಿ ಹೇಳಿದ್ದೇನೆಂದರೆ, ಭಾರತದಲ್ಲಿ ರಾಜಕೀಯ ದೇಣಿಗೆ ನೀಡುವ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಈ ಕ್ರಮ ತರಲಾಗುತ್ತಿದೆ ಎಂದರು. ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಪ್ರಕ್ರಿಯೆಯಲ್ಲಿ ಪಾರದರ್ಶಿಕತೆ ಮತ್ತು ಹೊಣೆಗಾರಿಕೆಯನ್ನು ತರಲು ಈ ಚುನಾವಣಾ ಬಾಂಡ್ ಯೋಜನೆಯನ್ನು ತರಲಾಗಿದ್ದರೂ, ಈ ಯೋಜನೆಯ ವಿನ್ಯಾಸವು ತನ್ನ ಗುರಿಯ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂಬುದು ಸ್ಪಷ್ಟ.

ಚುನಾವಣಾ ಬಾಂಡ್‌ನ ಯೋಜನೆಯ ವಿನ್ಯಾಸದಲ್ಲಿ ಇರುವ ಅತ್ಯಂತ ಗಮನಾರ್ಹ ಲಕ್ಷಣವೆಂದರೆ 1000 ರೂಪಾಯಿಗಳಿಂದ 1 ಕೋಟಿ ರೂಪಾಯಿಗಳವರೆಗಿನ ಮೌಲ್ಯದಲ್ಲಿ ಬೀಯರರ್ ಇನ್‌ಸ್ಟ್ರುಮೆಂಟ್‌ನ್ನು ನೀಡುವ ಸ್ವರೂಪ; ಅದು ಪಾರದರ್ಶಿಕತೆ ಮತ್ತು ಹೊಣೆಗಾರಿಕೆಯ ನಿಟ್ಟಿನಲ್ಲಿ ಅತ್ಯಂತ ಗಂಭೀರವಾದ ಸಂಶಯಗಳನ್ನು ಸೃಷ್ಟಿಸುತ್ತದೆ. (ಬೀಯರರ್ ಇನ್‌ಸ್ಟ್ರುಮೆಂಟ್- ಆ ಇನ್‌ಸ್ಟ್ರುಮೆಂಟ್‌ಅನ್ನು ಹೊಂದಿರುವರಿಗೆ ಅದರ ಮೌಲ್ಯವು ಅನಾಮಧೇಯವಾಗಿ ಸಲ್ಲುತ್ತದೆ. ಅದು ಅದರ ಮೇಲೆ ದುಡ್ಡು ಕೊಟ್ಟಿದ್ದವರ ಅಥವಾ ಸ್ವೀಕರಿಸಿದ್ದವರ ಹೆಸರು ಇರುವುದಿಲ್ಲ.) ಅಂದರೆ ಈ ಪ್ರಕ್ರಿಯೆಗೂ ಮತ್ತು ಒಂದು ಪಕ್ಷಕ್ಕೆ ನಗದು ರೂಪದಲ್ಲಿ ಹಣ ಕೊಡುವುದಕ್ಕೂ ವ್ಯತ್ಯಾಸವಿಲ್ಲ. ಏಕೆಂದರೆ ನಗದು ಹಣವೂ ಬೀಯರರ್ ಇನ್‌ಸ್ಟ್ರುಮೆಂಟ್ ಆಗಿದೆ. ಆದರೆ ಹಣವನ್ನು ನಗದು ರೂಪದಲ್ಲಿ ನೀಡಲು ಗರಿಷ್ಠ 2000/- ರೂಪಾಯಿಯ ಮಿತಿ ಇದೆ. ಆದರೆ ಚುನಾವಣಾ ಬಾಂಡ್‌ಗಳ ಗರಿಷ್ಠ ಮಿತಿ 1 ಕೋಟಿ ರೂಪಾಯಿ. ನಗದು ಹಣ ಮತ್ತು ಚುನಾವಣಾ ಬಾಂಡ್‌ನಲ್ಲಿ ಇರುವ ಅನಾಮಧೇಯತೆಯ ಸ್ವರೂಪದಿಂದ ರಾಜಕೀಯ ಪಕ್ಷಗಳಿಗೆ ಅದರಲ್ಲೂ ಆಡಳಿತಾರೂಢ ಪಕ್ಷಗಳಿಗೆ ಲಂಚ ನೀಡುವುದು ಅತ್ಯಂತ ಸುಲಭವಾಗಿದೆ. ಈಗ ಚುನಾವಣಾ ಬಾಂಡ್ ಇಲ್ಲದೇ ಇರುವ ಸನ್ನಿವೇಶ ಕಲ್ಪಿಸಿಕೊಳ್ಳಿ; ಒಬ್ಬ ವ್ಯಕ್ತಿಯೋ ಅಥವಾ ಕಾರ್ಪೊರೆಟ್ ಕಂಪನಿಯೋ ಒಂದು ರಾಜಕೀಯ ಪಕ್ಷಕ್ಕೆ ನೂರು ಕೋಟಿ ರೂಪಾಯಿಯ ಲಂಚ ಕೊಡಬೇಕಾದರೆ, ಆಗ ಅವರು ಲಭ್ಯವಿರುವ 2000ದ ಅಥವಾ 500ರ ಅತ್ಯಂತ ದೊಡ್ಡ ಸಂಖ್ಯೆಯ ನೋಟುಗಳನ್ನು ಏರ್ಪಾಡು ಮಾಡಿ, ಅವುಗಳನ್ನು ಸೂಟ್‌ಕೇಸ್‌ನಲ್ಲಿ ಭದ್ರಗೊಳಿಸಿ ತಲುಪಿಸಬೇಕಾಗಬಹುದು; ಅದು ಸ್ವಾಭಾವಿಕವಾಗಿ ಅಪಾಯಕಾರಿ ನಡೆ. ಆದರೆ, ಮೋದಿ ಸರಕಾರ ತಂದ ಚುನಾವಣಾ ಬಾಂಡ್‌ಗಳು ಬಂದನಂತರ ಒಂದು ಪುಟ್ಟ ಚೀಲದಲ್ಲಿ 1 ಕೋಟಿಯ ಮೌಲ್ಯದ ನೂರು ಚುನಾವಣಾ ಬಾಂಡ್‌ಗಳನ್ನು ತೆಗೆದುಕೊಂಡು ಹೋದರೆ 100 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಸುಲಭವಾಗಿ ತಲುಪಿಸಬಹುದು. ಬಾಂಡ್ ನೀಡಿದವರ ಹೆಸರು ಇರುವುದಿಲ್ಲವಾದ್ದರಿಂದ ಅವನ್ನು ಅನಾಮಧೇಯವಾಗಿ ರಾಜಕೀಯ ಪಕ್ಷಗಳು ನಗದು ಮಾಡಿಕೊಳ್ಳಬಹುದು.

2018ರ ಜನವರಿ 2ರಂದು ಭಾರತ ಸರಕಾರದ ಬಜೆಟ್ ಡಿವಿಷನ್ ಆಫ್ ಮಿನಿಸ್ಟ್ರಿ ಆಫ್ ಫೈನಾನ್ಸ್ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯ ಪ್ರಕಾರ, “ಚುನಾವಣಾ ಬಾಂಡ್‌ಗಳಿಗೆ ಕೇವಲ 15 ದಿನಗಳ ಅವಧಿ ಇದ್ದು, ಆ ಅವಧಿಯಲ್ಲಿ ಅದನ್ನು ರೆಪ್ರಸೆಂಟೇಷನ್ ಆಫ್ ಪೀಪಲ್ಸ್ ಆಕ್ಟ್, 1951ರ (1951ರ 43ನೇ) ಸೆಕ್ಷನ್ 29ಎ ಅಡಿಯಲ್ಲಿ ನೋಂದಾಯಿಸಲಾದ ಹಾಗೂ ಲೋಕಸಭೆ ಅಥವಾ ವಿಧಾನಸಭೆಗೆ ನಡೆದ ಕಳೆದ ಚುನಾವಣೆಯಲ್ಲಿ ಒಟ್ಟು ಮತದಾನದ 1% ಗಿಂತಲೂ ಕಡಿಮೆ ಮತ ಪಡೆಯದೇ ಇದ್ದ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಳಸಬಹುದಾಗಿದೆ”. ಇದರರ್ಥ ಬಿಜೆಪಿ, ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿ, ಜೆಡಿಎಸ್ ಮುಂತಾದ ದೊಡ್ಡ ಪಕ್ಷಗಳು ಮಾತ್ರ ದೇಣಿಗೆ ಪಡೆಯಲು ಅರ್ಹರಾಗಿರುತ್ತವೆ ಹಾಗೂ ಇದರಿಂದ ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಅವರನ್ನು ಪ್ರತಿನಿಧಿಸುವ ಪರ್ಯಾಯ, ಹೊಸ ಪಕ್ಷಗಳು ಈ ಬಾಂಡ್‌ಗಳ ಲಾಭ ಪಡೆಯದೇ ಅವುಗಳು ಬೆಳೆಯುವ ಸಾಧ್ಯತೆಗಳನ್ನು ತಡೆದಂತಾಗುತ್ತದೆ.

ಇನ್ನೊಂದು ವಿಷಯವೇನೆಂದರೆ, ಇಲ್ಲಿಯವರೆಗೆ ಆದ ಒಟ್ಟಾರೆ ಚುನಾವಣಾ ಬಾಂಡ್‌ಗಳಲ್ಲಿ 75% ಬಾಂಡ್‌ಗಳು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಜೆಪಿ ಪಕ್ಷಕ್ಕೇ ಹೋಗಿವೆ. ಮೋದಿ ಸರಕಾರದ ’ನಾ ಖಾವೂಂಗಾ, ನಾ ಖಾನೆದೂಂಗಾ’ (ತಿನ್ನಲ್ಲ, ತಿನ್ನಕ್ಕೆ ಬಿಡುವುದಿಲ್ಲ) ಎಂಬ ಘೋಷಣೆ, ಚುನಾವಣಾ ಬಾಂಡ್ ಪರಿಚಯಿಸುವ ಮತ್ತು ಕಂಪನಿಗಳ ರಾಜಕೀಯ ದೇಣಿಗೆಗೆ ಇದ್ದ 7.5% ಮಿತಿಯನ್ನು ತೆಗೆದುಹಾಕುವ ಕ್ರಮಗಳಿಗೆ ಹೊಂದಾಣಿಕೆಯಾಗುವುದಿಲ್ಲ. ಈ ಕ್ರಮಗಳು ಸೂಚಿಸುತ್ತಿರುವುದು ಸ್ಪಷ್ಟವಾಗಿದೆ – ಖಾವೂಂಗಾ, ಖಾನೆದೂಂಗಾ, ಕಾನೂನ್‌ಕೆ ಆಧಾರ್‌ಪೆ’ (ತಿನ್ನುವೆ, ತಿನ್ನಲು ಬಿಡುವೆ, ಅದೂ ಕಾನೂನಿನ ಆಧಾರದ ಮೇಲೆ”.

ಆದರ್ಶ ಐಯ್ಯರ್

ಆದರ್ಶ ಐಯ್ಯರ್
ಸಹ ಅಧ್ಯಕ್ಷರು, ಜನಾಧಿಕಾರ ಸಂಘರ್ಷ ಪರಿಷತ್ತು (ಜೆಸ್‌ಪಿ)


ಇದನ್ನೂ ಓದಿ: ಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...