Homeಕರ್ನಾಟಕಎಲೆಮರೆ 1: ಗಡಿನಾಡಲ್ಲಿ ಹರ್ಷಿಯಾ ಬಾನುವಿನ ಕನ್ನಡ ಕಲರವ..

ಎಲೆಮರೆ 1: ಗಡಿನಾಡಲ್ಲಿ ಹರ್ಷಿಯಾ ಬಾನುವಿನ ಕನ್ನಡ ಕಲರವ..

- Advertisement -
- Advertisement -

ಆರೋಗ್ಯಕರವಾಗಿ ಚಿಂತಿಸುವ, ಬರೆವ, ಜೀವಪರ ಆಶಯಗಳನ್ನಿಟ್ಟುಕೊಂಡು ಬದ್ಧತೆಯಿಂದ ದುಡಿಯುವ ಎಲೆಮರೆಯ ವ್ಯಕ್ತಿಗಳನ್ನು ಗುರುತಿಸುವ ಮತ್ತು ಹೊಸ ತಲೆಮಾರಿಗೆ ಪ್ರೇರಕವಾಗುವಂತಹ ಮಾದರಿಗಳನ್ನು ಪರಿಚಯಿಸುವ ಸಣ್ಣ ಪ್ರಯತ್ನ `ಎಲೆಮರೆ’. ಇಲ್ಲಿ ಸಾಹಿತಿಗಳು, ಚಳವಳಿಗಾರರು, ಪತ್ರಕರ್ತರು, ಪ್ರಗತಿಪರ ಯುವ ರೈತರು, ಸಾರ್ವಜನಿಕ ಸೇವೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ನೌಕರರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸದ್ದಿಲ್ಲದೇ ಕೆಲಸ ಮಾಡುತ್ತಿರುವ ಬೆಳಕಿಗೆ ಬಾರದ ಎಲ್ಲ ವಯೋಮಾನದವರನ್ನು ಒಳಗೊಳ್ಳಲಾಗುವುದು. ಎಲೆಮರೆಯಲ್ಲಿರುವ ಹಲವರನ್ನು ಪರಿಚಯಿಸಲು ಸಂಶೋಧಕರಾದ ಅರುಣ್ ಜೋಳದಕೂಡ್ಲಿಗಿಯವರ ಜೊತೆಗೆ ರಾಜ್ಯದ ವಿವಿಧ ಭಾಗಗಳ ಸ್ನೇಹಿತರು ಕೈಜೋಡಿಸಲಿದ್ದಾರೆ.

ಫೇಸ್‍ಬುಕ್‍ನಲ್ಲಿ ಕಳೆದ ಐದಾರು ವರ್ಷದಿಂದ ಸೂಕ್ಷ್ಮವಾಗಿ ಗಮನಿಸುವ ಪ್ರೊಫೈಲುಗಳಲ್ಲಿ ಹರ್ಷಿಯಾ ಬಾನುಳ ಪೇಜ್ ಕೂಡ ಒಂದು. ಕಣ್ಣಗೊಂಬೆಗಳು ಮೇಲೆ ಸರಿದ ಹರ್ಷಿಯಾ ಡಿಪಿ ನೋಡಿದಾಗಲೆಲ್ಲಾ ಇವರು ಹೇಗೆ ಫೇಸ್‍ಬುಕ್ ಬಳಸಬಹುದು ಎಂದುಕೊಂಡೆ. ನಂತರ ಟೀಚರ್ ಎನ್ನುವುದು ತಿಳಿದಾಗಲೂ ಹರ್ಷಿಯಾ ಹೇಗೆ ಪಾಠ ಮಾಡುತ್ತಾರೆ, ಮಕ್ಕಳು ಹೇಗೆ ರಿಯಾಕ್ಟ್ ಮಾಡಬಹುದೆಂಬ ಪ್ರಶ್ನೆಯೊಂದು ಸುಳಿಯಿತು. ಈಚೆಗೆ ಹರ್ಷಿಯಾ ಮಾದರಿ ಶಿಕ್ಷಕಿ ಎನ್ನುವ ಪತ್ರಿಕಾ ವರದಿಗಳು ಬಂದಾಗ ನಿಜಕ್ಕೂ ಖುಷಿಯಾಯಿತು. ಹರ್ಷಿಯಾ ಜತೆ ಮಾತನಾಡಿದಾಗ ಅವಳ ಕಠಿಣ ದಾರಿಯನ್ನು ನೆನಪಿಸಿಕೊಂಡರು.

ಅರಸೀಕೆರೆಯ ಕರೀಂಸಾಬ್ ಗೌರ್ನಮೆಂಟ್ ಹಾಸ್ಪಿಟಲ್‍ನಲ್ಲಿ ಕೆಲಸ ಮಾಡುತ್ತಿದ್ದಾಗ, ಪುಟ್ಟ ಹರ್ಷಿಯಾ ಅಪ್ಪನ ಜತೆಗೆ ಆಸ್ಪತ್ರೆಗೆ ಹೋಗುತ್ತಿದ್ದಳು. ಚೀಟಿ ಬರೆಯುವವರು ಇಲ್ಲದೆ ಇದ್ದಾಗ ಅವಳೇ ಕೌಂಟರಲ್ಲಿ ರೋಗಿಗಳಿಗೆ ಚೀಟಿ ಬರೆಯುತ್ತಿದ್ದಳು. ಎಷ್ಟೋ ಜನರಿಗೆ ಚೀಟಿ ಬರೆಸೋದಕ್ಕೆ ಎರಡು ರೂಪಾಯಿಯೂ ಇರುತ್ತಿರಲಿಲ್ಲ. ಇದು ಹರ್ಷಿಯಾ ಮನಸ್ಸಿನ ಮೇಲೆ ಪರಿಣಾಮ ಬೀರಿತು. ಮುಂದೆ ವೈದ್ಯೆಯಾಗಿ ಬಡವರ ಸೇವೆ ಮಾಡಬೇಕೆಂಬ ಕನಸು ಕಟ್ಟಿದಳು. ಆದರೆ ಎಸ್‍ಎಸ್‍ಎಲ್‍ಸಿ ನಂತರ ಸೈನ್ಸ್ ತೆಗೆದುಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ದೃಷ್ಟಿದೋಶದ ಕಾರಣ ಸೈನ್ಸ್ ಸಿಗಲಿಲ್ಲ. ಪದವಿ ನಂತರವೂ ಕೆಎಎಸ್ ಪ್ರಿಲಿಮ್ಸ್ ಮೇನ್ಸ್ ಎಗ್ಜಾಮ್ ನಂತರ ಸಂದರ್ಶನಕ್ಕೆ ಹೋಗಬೇಕಾಗಿತ್ತು. ಆಡಳಿತದ ಹುದ್ದೆಯನ್ನು ನಿಭಾಯಿಸಲು ನಿನ್ನಿಂದ ಆಗದು ಎನ್ನುವ ಅಪ್ಪಅಮ್ಮನ ಒತ್ತಾಯಕ್ಕೆ ಈ ಕನಸೂ ಈಡೇರಲಿಲ್ಲ. ಆದರೆ ಬಿಇಡಿ ಮಾಡಿ ಇದೀಗ ಬಂಗಾರಪೇಟೆಯ ಆದರ್ಶ ಶಾಲೆಯಲ್ಲಿ ಆದರ್ಶ ಶಿಕ್ಷಕಿಯಾಗಿ ಗಮನ ಸೆಳೆದಿದ್ದಾಳೆ.

ಕನ್ನಡ ಶಾಲೆಗಳ ಅಳಿವುಉಳಿವಿನ ಚರ್ಚೆಗಳು ನಡೆಯುತ್ತಿರುವಾಗ ಶೇ.75ರಷ್ಟು ಅಂಧತ್ವವಿರುವ ಹರ್ಷಿಯಾ ಭಾನುವಿನ ಕನ್ನಡ ಪಾಠಗಳು ವಿಶೇಷವಾಗಿವೆ. ಪ್ರತೀ ಪಾಠವನ್ನು ಕಂಠಪಾಟ ಮಾಡಿ ಮರುದಿನ ಪುಸ್ತಕ ಹಿಡಿದು ಸಾಮಾನ್ಯ ಶಿಕ್ಷಕರು ಓದುವ ಹಾಗೆ ನೆನಪಿನಿಂದ ಪಾಠ ಓದುತ್ತಾಳೆ. ಇದರಿಂದ ಮಕ್ಕಳ ಗಮನ ಬೇರೆಡೆ ಹರಿಯುವುದಿಲ್ಲ. ಅಂತೆಯೇ ವ್ಯಾಕರಣಕ್ಕೆ ಸಂಬಂಧಿಸಿದ ಸರಳ ಕಲಿಕೆಗೆ ಅನುವಾಗುವಂತೆ ಹರ್ಷಿಯಾ ಮಾಡಿದ ಚಾರ್ಟ್‍ಗಳು ವಿಶೇಷವಾಗಿವೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ಶಾಲಿನಿ ರಜನೀಶ್ ಹರ್ಷಿಯಾ ವ್ಯಾಕರಣ ಮಾದರಿಯನ್ನು ಎಲ್ಲಾ ಶಿಕ್ಷಕರು ಅನುಸರಿಸಲೆಂದು ಇಲಾಖೆಯ ಶಿಕ್ಷಣ ವಾರ್ತೆಯಲ್ಲಿ ಲೇಖನ ಪ್ರಕಟಿಸಿದ್ದರು.

ಪದವಿಯಲ್ಲಿ ಮೊದಲು ಪರಿಚಯವಾದ ಕನ್ನಡದ ಪ್ರೊಫೆಸರ್ ಮತ್ತು ಲೇಖಕಿ ಸ.ಉಷಾ ಅವರ ಒಡನಾಟದಿಂದ ಹರ್ಷಿಯಾ ಓದು ಮತ್ತು ತಿಳಿವಿನ ದಿಕ್ಕು ಬದಲಾಯಿತು. ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ನೆನಪಿನ ದೋಣಿ, ಮಾಸ್ತಿಯವರ ಕತೆ ಕಾದಂಬರಿಗಳು, ನಿಸಾರ್ ಅಹಮದ್‍ರ ಕವಿತೆ, ರಹಮತ್ ತರೀಕೆರೆಯವರ ಅಂಕಣ ಬರಹ, ಆನ್‍ಲೈನ್‍ನ ಅವಧಿ, ಕೆಂಡಸಂಪಿಗೆ ಹೀಗೆ ಸಾಹಿತ್ಯದ ಓದು ಕೂಡ ಹರ್ಷಿಯಾಳನ್ನು ವೈಚಾರಿಕವಾಗಿ ಸೂಕ್ಷ್ಮವಾಗಿಸಿದೆ. ಹರ್ಷಿಯಾ ಒಳ್ಳೆಯ ಕವಯಿತ್ರಿ ಕೂಡ. ಕವನ ಸಂಕಲನ ಇನ್ನಷ್ಟೇ ಪ್ರಕಟವಾಗಬೇಕಿದೆ. ಕಳೆದ ನಾಲ್ಕೂ ಎಸ್‍ಎಸ್‍ಎಲ್‍ಸಿ ಬ್ಯಾಚ್‍ಗಳಲ್ಲಿ ಎರಡು ಬ್ಯಾಚ್ ಕನ್ನಡದಲ್ಲಿ ಶೇಕಡ ನೂರರಷ್ಟು ಫಲಿತಾಂಶ ಬಂದಿದೆ. ಉಳಿದೆರಡು ಬ್ಯಾಚ್ 98.5. ಶೇ ಫಲಿತಾಂಶ ಬಂದಿದೆ. ಕಳೆದ ಬಾರಿ ಮೂರು ವಿದ್ಯಾರ್ಥಿನಿಯರು ನೂರಕ್ಕೆ ನೂರು ಅಂಕ ಪಡೆದಿದ್ದಾರೆ. ಅವರಿಗೆ ಹರ್ಷಿಯಾ ಸ್ವಂತ ಖಾತೆಯಿಂದ ಒಂದು ಸಾವಿರ ರೂ ನಗದು ಹಾಗು ಪದಕವನ್ನು ಶಾಲಾ ಮುಖ್ಯಸ್ಥರಿಂದ ಕೊಡಿಸಿ ಗೌರವಿಸಿ ಪ್ರೋತ್ಸಾಹಿಸಿದ್ದಾರೆ.

ಹರ್ಷಿಯಾ ವ್ಯಕ್ತಿತ್ವ ಮಾನವೀಯ ಮೌಲ್ಯಗಳ ನೆಲೆಗಳಲ್ಲಿ ರೂಪುಗೊಂಡಿದೆ. ಅಂತೆಯೇ ಸಮಾನತೆಯ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತುವ ಹೊಣೆಗಾರಿಕೆಯನ್ನು ತುಂಬಾ ಎಚ್ಚರದಿಂದ ನಿರ್ವಹಿಸುತ್ತಿದ್ದಾರೆ. ಬಾಲ್ಯದಿಂದಲೂ ಹಂತಹಂತವಾಗಿ ತನಗಿರುವ ದೃಷ್ಟಿದೋಶದ ಸಮಸ್ಯೆಯನ್ನೂ, ಲೋಕದ ಕಣ್ಣಿನ ಅನುಕಂಪವನ್ನೂ ಮೀರಿದ ಛಲದಿಂದ ಬದುಕನ್ನು ಕಟ್ಟಿಕೊಂಡವರು. `ನನಗೆ ದೂರದೃಷ್ಟಿ ದೋಶವಿದೆ. ತೀರಾ ಹತ್ತಿರದಿಂದ ಓದಕೋಬೇಕು. ನನ್ನ ಐಬಾಲ್ ಶೇಕ್ ಆಗೋದ್ರಿಂದ ಅದು ಆಪರೇಷನ್‍ಗೂ ಸಪೋರ್ಟ್ ಮಾಡಲ್ಲ, ಮತ್ತೆ ಯಾವ ಗ್ಲಾಸ್ ಕೂಡ ನನ್ನ ಕಣ್ ಮೇಲೆ ವರ್ಕ್ ಆಗೋಲ್ಲ. ಈ ತರಹದ ಸಮಸ್ಯೆ ಆಗಿರೋದ್ರಿಂದ ನನ್ನ ಅಂಧತ್ವದ ಸ್ಥಿತಿಯನ್ನು ಸರ್ಜರಿಯಿಂದಲೋ, ಟ್ರೀಟ್‍ಮೆಂಟಿಂದಲೋ ವಾಸಿ ಮಾಡ್ಕೊಳ್ಳೋಕೆ ಆಗಲ್ಲ. ಹೀಗಾಗಿ ನನ್ನದೇ ಕೆಲಸಗಳಲ್ಲಿ ತೊಡಗಿಕೊಂಡು ಅಂಧತ್ವವನ್ನೂ ಮರೆತ್ತಿದ್ದೇನೆ’ ಎಂದು ಹರ್ಷಿಯಾ ಆತ್ಮವಿಶ್ವಾಸದಿಂದ ಮಾತನಾಡುತ್ತಾಳೆ.

ಹೀಗೆ ಅರಸೀಕೆರೆಯ ಕರೀಂಸಾಬ್ ಮತ್ತು ರಿಹಾನ್ ಭಾನು ದಂಪತಿಗಳ ಹಿರಿಯ ಮಗಳಾದ ಹರ್ಷಿಯಾ ಸಾಮಾನ್ಯ ಸ್ಕೂಲುಗಳಲ್ಲೆ ವಿದ್ಯಾಭ್ಯಾಸ ಪಡೆದು ಶಿಕ್ಷಕಿಯಾಗಿ ತನ್ನದೇ ಆದ ವಿಶಿಷ್ಟ ಬೋಧನೆಯ ಮೂಲಕ ಜಡಶಿಕ್ಷಕ ವರ್ಗಕ್ಕೆ ಮಾದರಿಯಾಗಿದ್ದಾಳೆ. ಇದನ್ನು ಗುರುತಿಸಿ ಕರ್ನಾಟಕ ಕಾವಲು ಪಡೆಯ `ಆದರ್ಶ ಶಿಕ್ಷಕಿ’ ಪ್ರಶಸ್ತಿ, ದೆಹಲಿಯ ಆವಂತಿಕಾ ಸಂಸ್ಥೆಯ `ಡಾ.ಅಬ್ದುಲ್ ಕಲಾಂ’ ಪ್ರಶಸ್ತಿಯನ್ನು ಒಳಗೊಂಡಂತೆ ಹಲವು ಖಾಸಗಿ ಸಂಸ್ಥೆಗಳು ಗೌರವಿಸಿವೆ. ಹರ್ಷಿಯಾಳ ಕನಸುಗಳು ಮತ್ತಷ್ಟು ದೃಢವಾಗಲಿ. ತನ್ನ ಸುತ್ತಮುತ್ತಣ ಪರಿಸರದಲ್ಲಿ ಹರ್ಷಿಯಾಳ ಒಳಗಣ್ಣಿನ ಬೆಳಕು ಬದಲಾವಣೆಗೆ ನೆರವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...