Homeಕರ್ನಾಟಕಎಲೆಮರೆ 1: ಗಡಿನಾಡಲ್ಲಿ ಹರ್ಷಿಯಾ ಬಾನುವಿನ ಕನ್ನಡ ಕಲರವ..

ಎಲೆಮರೆ 1: ಗಡಿನಾಡಲ್ಲಿ ಹರ್ಷಿಯಾ ಬಾನುವಿನ ಕನ್ನಡ ಕಲರವ..

- Advertisement -
- Advertisement -

ಆರೋಗ್ಯಕರವಾಗಿ ಚಿಂತಿಸುವ, ಬರೆವ, ಜೀವಪರ ಆಶಯಗಳನ್ನಿಟ್ಟುಕೊಂಡು ಬದ್ಧತೆಯಿಂದ ದುಡಿಯುವ ಎಲೆಮರೆಯ ವ್ಯಕ್ತಿಗಳನ್ನು ಗುರುತಿಸುವ ಮತ್ತು ಹೊಸ ತಲೆಮಾರಿಗೆ ಪ್ರೇರಕವಾಗುವಂತಹ ಮಾದರಿಗಳನ್ನು ಪರಿಚಯಿಸುವ ಸಣ್ಣ ಪ್ರಯತ್ನ `ಎಲೆಮರೆ’. ಇಲ್ಲಿ ಸಾಹಿತಿಗಳು, ಚಳವಳಿಗಾರರು, ಪತ್ರಕರ್ತರು, ಪ್ರಗತಿಪರ ಯುವ ರೈತರು, ಸಾರ್ವಜನಿಕ ಸೇವೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ನೌಕರರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸದ್ದಿಲ್ಲದೇ ಕೆಲಸ ಮಾಡುತ್ತಿರುವ ಬೆಳಕಿಗೆ ಬಾರದ ಎಲ್ಲ ವಯೋಮಾನದವರನ್ನು ಒಳಗೊಳ್ಳಲಾಗುವುದು. ಎಲೆಮರೆಯಲ್ಲಿರುವ ಹಲವರನ್ನು ಪರಿಚಯಿಸಲು ಸಂಶೋಧಕರಾದ ಅರುಣ್ ಜೋಳದಕೂಡ್ಲಿಗಿಯವರ ಜೊತೆಗೆ ರಾಜ್ಯದ ವಿವಿಧ ಭಾಗಗಳ ಸ್ನೇಹಿತರು ಕೈಜೋಡಿಸಲಿದ್ದಾರೆ.

ಫೇಸ್‍ಬುಕ್‍ನಲ್ಲಿ ಕಳೆದ ಐದಾರು ವರ್ಷದಿಂದ ಸೂಕ್ಷ್ಮವಾಗಿ ಗಮನಿಸುವ ಪ್ರೊಫೈಲುಗಳಲ್ಲಿ ಹರ್ಷಿಯಾ ಬಾನುಳ ಪೇಜ್ ಕೂಡ ಒಂದು. ಕಣ್ಣಗೊಂಬೆಗಳು ಮೇಲೆ ಸರಿದ ಹರ್ಷಿಯಾ ಡಿಪಿ ನೋಡಿದಾಗಲೆಲ್ಲಾ ಇವರು ಹೇಗೆ ಫೇಸ್‍ಬುಕ್ ಬಳಸಬಹುದು ಎಂದುಕೊಂಡೆ. ನಂತರ ಟೀಚರ್ ಎನ್ನುವುದು ತಿಳಿದಾಗಲೂ ಹರ್ಷಿಯಾ ಹೇಗೆ ಪಾಠ ಮಾಡುತ್ತಾರೆ, ಮಕ್ಕಳು ಹೇಗೆ ರಿಯಾಕ್ಟ್ ಮಾಡಬಹುದೆಂಬ ಪ್ರಶ್ನೆಯೊಂದು ಸುಳಿಯಿತು. ಈಚೆಗೆ ಹರ್ಷಿಯಾ ಮಾದರಿ ಶಿಕ್ಷಕಿ ಎನ್ನುವ ಪತ್ರಿಕಾ ವರದಿಗಳು ಬಂದಾಗ ನಿಜಕ್ಕೂ ಖುಷಿಯಾಯಿತು. ಹರ್ಷಿಯಾ ಜತೆ ಮಾತನಾಡಿದಾಗ ಅವಳ ಕಠಿಣ ದಾರಿಯನ್ನು ನೆನಪಿಸಿಕೊಂಡರು.

ಅರಸೀಕೆರೆಯ ಕರೀಂಸಾಬ್ ಗೌರ್ನಮೆಂಟ್ ಹಾಸ್ಪಿಟಲ್‍ನಲ್ಲಿ ಕೆಲಸ ಮಾಡುತ್ತಿದ್ದಾಗ, ಪುಟ್ಟ ಹರ್ಷಿಯಾ ಅಪ್ಪನ ಜತೆಗೆ ಆಸ್ಪತ್ರೆಗೆ ಹೋಗುತ್ತಿದ್ದಳು. ಚೀಟಿ ಬರೆಯುವವರು ಇಲ್ಲದೆ ಇದ್ದಾಗ ಅವಳೇ ಕೌಂಟರಲ್ಲಿ ರೋಗಿಗಳಿಗೆ ಚೀಟಿ ಬರೆಯುತ್ತಿದ್ದಳು. ಎಷ್ಟೋ ಜನರಿಗೆ ಚೀಟಿ ಬರೆಸೋದಕ್ಕೆ ಎರಡು ರೂಪಾಯಿಯೂ ಇರುತ್ತಿರಲಿಲ್ಲ. ಇದು ಹರ್ಷಿಯಾ ಮನಸ್ಸಿನ ಮೇಲೆ ಪರಿಣಾಮ ಬೀರಿತು. ಮುಂದೆ ವೈದ್ಯೆಯಾಗಿ ಬಡವರ ಸೇವೆ ಮಾಡಬೇಕೆಂಬ ಕನಸು ಕಟ್ಟಿದಳು. ಆದರೆ ಎಸ್‍ಎಸ್‍ಎಲ್‍ಸಿ ನಂತರ ಸೈನ್ಸ್ ತೆಗೆದುಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ದೃಷ್ಟಿದೋಶದ ಕಾರಣ ಸೈನ್ಸ್ ಸಿಗಲಿಲ್ಲ. ಪದವಿ ನಂತರವೂ ಕೆಎಎಸ್ ಪ್ರಿಲಿಮ್ಸ್ ಮೇನ್ಸ್ ಎಗ್ಜಾಮ್ ನಂತರ ಸಂದರ್ಶನಕ್ಕೆ ಹೋಗಬೇಕಾಗಿತ್ತು. ಆಡಳಿತದ ಹುದ್ದೆಯನ್ನು ನಿಭಾಯಿಸಲು ನಿನ್ನಿಂದ ಆಗದು ಎನ್ನುವ ಅಪ್ಪಅಮ್ಮನ ಒತ್ತಾಯಕ್ಕೆ ಈ ಕನಸೂ ಈಡೇರಲಿಲ್ಲ. ಆದರೆ ಬಿಇಡಿ ಮಾಡಿ ಇದೀಗ ಬಂಗಾರಪೇಟೆಯ ಆದರ್ಶ ಶಾಲೆಯಲ್ಲಿ ಆದರ್ಶ ಶಿಕ್ಷಕಿಯಾಗಿ ಗಮನ ಸೆಳೆದಿದ್ದಾಳೆ.

ಕನ್ನಡ ಶಾಲೆಗಳ ಅಳಿವುಉಳಿವಿನ ಚರ್ಚೆಗಳು ನಡೆಯುತ್ತಿರುವಾಗ ಶೇ.75ರಷ್ಟು ಅಂಧತ್ವವಿರುವ ಹರ್ಷಿಯಾ ಭಾನುವಿನ ಕನ್ನಡ ಪಾಠಗಳು ವಿಶೇಷವಾಗಿವೆ. ಪ್ರತೀ ಪಾಠವನ್ನು ಕಂಠಪಾಟ ಮಾಡಿ ಮರುದಿನ ಪುಸ್ತಕ ಹಿಡಿದು ಸಾಮಾನ್ಯ ಶಿಕ್ಷಕರು ಓದುವ ಹಾಗೆ ನೆನಪಿನಿಂದ ಪಾಠ ಓದುತ್ತಾಳೆ. ಇದರಿಂದ ಮಕ್ಕಳ ಗಮನ ಬೇರೆಡೆ ಹರಿಯುವುದಿಲ್ಲ. ಅಂತೆಯೇ ವ್ಯಾಕರಣಕ್ಕೆ ಸಂಬಂಧಿಸಿದ ಸರಳ ಕಲಿಕೆಗೆ ಅನುವಾಗುವಂತೆ ಹರ್ಷಿಯಾ ಮಾಡಿದ ಚಾರ್ಟ್‍ಗಳು ವಿಶೇಷವಾಗಿವೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ಶಾಲಿನಿ ರಜನೀಶ್ ಹರ್ಷಿಯಾ ವ್ಯಾಕರಣ ಮಾದರಿಯನ್ನು ಎಲ್ಲಾ ಶಿಕ್ಷಕರು ಅನುಸರಿಸಲೆಂದು ಇಲಾಖೆಯ ಶಿಕ್ಷಣ ವಾರ್ತೆಯಲ್ಲಿ ಲೇಖನ ಪ್ರಕಟಿಸಿದ್ದರು.

ಪದವಿಯಲ್ಲಿ ಮೊದಲು ಪರಿಚಯವಾದ ಕನ್ನಡದ ಪ್ರೊಫೆಸರ್ ಮತ್ತು ಲೇಖಕಿ ಸ.ಉಷಾ ಅವರ ಒಡನಾಟದಿಂದ ಹರ್ಷಿಯಾ ಓದು ಮತ್ತು ತಿಳಿವಿನ ದಿಕ್ಕು ಬದಲಾಯಿತು. ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ನೆನಪಿನ ದೋಣಿ, ಮಾಸ್ತಿಯವರ ಕತೆ ಕಾದಂಬರಿಗಳು, ನಿಸಾರ್ ಅಹಮದ್‍ರ ಕವಿತೆ, ರಹಮತ್ ತರೀಕೆರೆಯವರ ಅಂಕಣ ಬರಹ, ಆನ್‍ಲೈನ್‍ನ ಅವಧಿ, ಕೆಂಡಸಂಪಿಗೆ ಹೀಗೆ ಸಾಹಿತ್ಯದ ಓದು ಕೂಡ ಹರ್ಷಿಯಾಳನ್ನು ವೈಚಾರಿಕವಾಗಿ ಸೂಕ್ಷ್ಮವಾಗಿಸಿದೆ. ಹರ್ಷಿಯಾ ಒಳ್ಳೆಯ ಕವಯಿತ್ರಿ ಕೂಡ. ಕವನ ಸಂಕಲನ ಇನ್ನಷ್ಟೇ ಪ್ರಕಟವಾಗಬೇಕಿದೆ. ಕಳೆದ ನಾಲ್ಕೂ ಎಸ್‍ಎಸ್‍ಎಲ್‍ಸಿ ಬ್ಯಾಚ್‍ಗಳಲ್ಲಿ ಎರಡು ಬ್ಯಾಚ್ ಕನ್ನಡದಲ್ಲಿ ಶೇಕಡ ನೂರರಷ್ಟು ಫಲಿತಾಂಶ ಬಂದಿದೆ. ಉಳಿದೆರಡು ಬ್ಯಾಚ್ 98.5. ಶೇ ಫಲಿತಾಂಶ ಬಂದಿದೆ. ಕಳೆದ ಬಾರಿ ಮೂರು ವಿದ್ಯಾರ್ಥಿನಿಯರು ನೂರಕ್ಕೆ ನೂರು ಅಂಕ ಪಡೆದಿದ್ದಾರೆ. ಅವರಿಗೆ ಹರ್ಷಿಯಾ ಸ್ವಂತ ಖಾತೆಯಿಂದ ಒಂದು ಸಾವಿರ ರೂ ನಗದು ಹಾಗು ಪದಕವನ್ನು ಶಾಲಾ ಮುಖ್ಯಸ್ಥರಿಂದ ಕೊಡಿಸಿ ಗೌರವಿಸಿ ಪ್ರೋತ್ಸಾಹಿಸಿದ್ದಾರೆ.

ಹರ್ಷಿಯಾ ವ್ಯಕ್ತಿತ್ವ ಮಾನವೀಯ ಮೌಲ್ಯಗಳ ನೆಲೆಗಳಲ್ಲಿ ರೂಪುಗೊಂಡಿದೆ. ಅಂತೆಯೇ ಸಮಾನತೆಯ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತುವ ಹೊಣೆಗಾರಿಕೆಯನ್ನು ತುಂಬಾ ಎಚ್ಚರದಿಂದ ನಿರ್ವಹಿಸುತ್ತಿದ್ದಾರೆ. ಬಾಲ್ಯದಿಂದಲೂ ಹಂತಹಂತವಾಗಿ ತನಗಿರುವ ದೃಷ್ಟಿದೋಶದ ಸಮಸ್ಯೆಯನ್ನೂ, ಲೋಕದ ಕಣ್ಣಿನ ಅನುಕಂಪವನ್ನೂ ಮೀರಿದ ಛಲದಿಂದ ಬದುಕನ್ನು ಕಟ್ಟಿಕೊಂಡವರು. `ನನಗೆ ದೂರದೃಷ್ಟಿ ದೋಶವಿದೆ. ತೀರಾ ಹತ್ತಿರದಿಂದ ಓದಕೋಬೇಕು. ನನ್ನ ಐಬಾಲ್ ಶೇಕ್ ಆಗೋದ್ರಿಂದ ಅದು ಆಪರೇಷನ್‍ಗೂ ಸಪೋರ್ಟ್ ಮಾಡಲ್ಲ, ಮತ್ತೆ ಯಾವ ಗ್ಲಾಸ್ ಕೂಡ ನನ್ನ ಕಣ್ ಮೇಲೆ ವರ್ಕ್ ಆಗೋಲ್ಲ. ಈ ತರಹದ ಸಮಸ್ಯೆ ಆಗಿರೋದ್ರಿಂದ ನನ್ನ ಅಂಧತ್ವದ ಸ್ಥಿತಿಯನ್ನು ಸರ್ಜರಿಯಿಂದಲೋ, ಟ್ರೀಟ್‍ಮೆಂಟಿಂದಲೋ ವಾಸಿ ಮಾಡ್ಕೊಳ್ಳೋಕೆ ಆಗಲ್ಲ. ಹೀಗಾಗಿ ನನ್ನದೇ ಕೆಲಸಗಳಲ್ಲಿ ತೊಡಗಿಕೊಂಡು ಅಂಧತ್ವವನ್ನೂ ಮರೆತ್ತಿದ್ದೇನೆ’ ಎಂದು ಹರ್ಷಿಯಾ ಆತ್ಮವಿಶ್ವಾಸದಿಂದ ಮಾತನಾಡುತ್ತಾಳೆ.

ಹೀಗೆ ಅರಸೀಕೆರೆಯ ಕರೀಂಸಾಬ್ ಮತ್ತು ರಿಹಾನ್ ಭಾನು ದಂಪತಿಗಳ ಹಿರಿಯ ಮಗಳಾದ ಹರ್ಷಿಯಾ ಸಾಮಾನ್ಯ ಸ್ಕೂಲುಗಳಲ್ಲೆ ವಿದ್ಯಾಭ್ಯಾಸ ಪಡೆದು ಶಿಕ್ಷಕಿಯಾಗಿ ತನ್ನದೇ ಆದ ವಿಶಿಷ್ಟ ಬೋಧನೆಯ ಮೂಲಕ ಜಡಶಿಕ್ಷಕ ವರ್ಗಕ್ಕೆ ಮಾದರಿಯಾಗಿದ್ದಾಳೆ. ಇದನ್ನು ಗುರುತಿಸಿ ಕರ್ನಾಟಕ ಕಾವಲು ಪಡೆಯ `ಆದರ್ಶ ಶಿಕ್ಷಕಿ’ ಪ್ರಶಸ್ತಿ, ದೆಹಲಿಯ ಆವಂತಿಕಾ ಸಂಸ್ಥೆಯ `ಡಾ.ಅಬ್ದುಲ್ ಕಲಾಂ’ ಪ್ರಶಸ್ತಿಯನ್ನು ಒಳಗೊಂಡಂತೆ ಹಲವು ಖಾಸಗಿ ಸಂಸ್ಥೆಗಳು ಗೌರವಿಸಿವೆ. ಹರ್ಷಿಯಾಳ ಕನಸುಗಳು ಮತ್ತಷ್ಟು ದೃಢವಾಗಲಿ. ತನ್ನ ಸುತ್ತಮುತ್ತಣ ಪರಿಸರದಲ್ಲಿ ಹರ್ಷಿಯಾಳ ಒಳಗಣ್ಣಿನ ಬೆಳಕು ಬದಲಾವಣೆಗೆ ನೆರವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...