Homeಅಂಕಣಗಳುಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

ಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

‘ಬೆಸ್ಟ ಇಕೋ-ಕ್ಲಬ್’ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆಗೆ ಇದೆ.

- Advertisement -
- Advertisement -

ಶಾಲಾ ಆವರಣವನ್ನು ’ಪರಿಸರ’ಮಯಗೊಳಿಸುವುದಲ್ಲದೆ, ನಿಸರ್ಗಪ್ರೇರಿತ ಕಲಿಕೆಯ ಕಾರಣಕ್ಕೆ ಈ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲಿ ಆಯ್ಕೆಯಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲೂ `ರಾಷ್ಟ್ರಮಟ್ಟಕ್ಕೆ’ ಆರಿಸಲಾಗುತ್ತದೆ. 2019 ರ ಡಿಸೆಂಬರ್ 20 ರಂದು ಗುಜರಾತಿನ ಕೇವಡಿಯಾದಲ್ಲಿ ಕೇಂದ್ರ ಪರಿಸರ ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯವು ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ದೇಶದ ಆರು ಪ್ರೌಢಶಾಲೆಗಳು ‘ಬೆಸ್ಟ ಇಕೋ-ಕ್ಲಬ್ ಪ್ರಶಸ್ತಿ’ಪಡೆಯುತ್ತವೆ.

ಅದರಲ್ಲಿ ಈ ಶಾಲೆಯೂ ಆಯ್ಕೆಯಾಗುತ್ತದೆ. ಇದರೊಂದಿಗೆ ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಮೂಡುತ್ತದೆ. ಅದುವೆ ಗದಗ ಜಿಲ್ಲೆ, ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆ. ಈ ಹಂತಕ್ಕೆ ಶಾಲೆಯನ್ನು ರೂಪಿಸಲು ಕಳೆದ ಹತ್ತು ವರ್ಷದಿಂದ ತನ್ನನ್ನು ತಾನು ತೇದುಕೊಂಡ ಮುಖ್ಯ ಶಿಕ್ಷಕ ರವಿ ಬಸವಣ್ಣೆಪ್ಪ ಬೆಂಚಳ್ಳಿಯವರು.

ಮೂಲತಃ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ವಾಸನ ಗ್ರಾಮದ ರವಿ ಬಿ. ಬೆಂಚಳ್ಳಿಯವರು 2009-10 ರಲ್ಲಿ ಆಯ್ಕೆಯಾಗಿ ಸರಕಾರಿ ಪ್ರೌಢಶಾಲೆ ಗೊಜನೂರದಲ್ಲಿ ಮುಖ್ಯ ಶಿಕ್ಷಕರಾಗಿ ಬರುತ್ತಾರೆ. ಕಳೆದ ಹತ್ತು ವರ್ಷದಲ್ಲಿ ರವಿಯವರು ಗೊಜನೂರು ಹೈಸ್ಕೂಲಿನ ಚಹರೆಯನ್ನೆ ಬದಲಿಸಿದರು. ಈ ಶಾಲೆಯ ಪರಿಸರವನ್ನು ಪುಟ್ಟ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಂತೆ ಮೇಲ್ದರ್ಜೆಗೇರಿಸಿದರು. ಆರಂಭಕ್ಕೆ ಶಾಲೆಯನ್ನು ತಮ್ಮ ಗ್ರಾಮ ಪಂಚಾಯ್ತಿಯಲ್ಲಿ, ನಂತರ ತಾಲೂಕಿನಲ್ಲಿ, ಜಿಲ್ಲೆಯಲ್ಲಿ, ರಾಜ್ಯದಲ್ಲಿ ಕಡೆಯದಾಗಿ ದೇಶವೇ ಗಮನಿಸುವಂತೆ ರೂಪಿಸಿದರು.

ಈ ಪಯಣದಲ್ಲಿ ಅವರೊಂದಿಗೆ ಗ್ರಾಮದ ಪಾಲಕ-ಪೋಷಕರು, ಗಣ್ಯರು, ಜನಪ್ರತಿನಿಧಿಗಳು, ಸಹಶಿಕ್ಷಕರು, ಸಿಬ್ಬಂದಿಯವರು, ಸಮುದಾಯ ಹಾಗೂ ವಿದ್ಯಾರ್ಥಿಗಳು, ಇದೆಲ್ಲಕ್ಕೂ ಸಹಕರಿಸಿ ಪ್ರೋತ್ಸಾಹಿಸಿದ ಇಲಾಖೆ ಅಧಿಕಾರಿಗಳು ಜೊತೆಯಾದರು. ಇದೆಲ್ಲದರ ಕೂಡುಶಕ್ತಿಯ ಫಲವಾಗಿ ನಾನಾ ವಿಭಾಗಗಳಲ್ಲಿ ಈ ತನಕ ಗೊಜನೂರು ಪ್ರೌಢಶಾಲೆಗೆ ಎಂಟು ಪ್ರಶಸ್ತಿಗಳು, ಮುಖ್ಯ ಶಿಕ್ಷಕರಾದ ರವಿ ಅವರಿಗೆ ಹನ್ನೆರಡು ಪ್ರಶಸ್ತಿಗಳು, ಇತರೆ ಶಿಕ್ಷಕ ವರ್ಗಕ್ಕೆ ಏಳು ಪ್ರಶಸ್ತಿಗಳು ಲಬಿಸಿವೆ.

ಹಾಗಾದರೆ ಈ ಪ್ರೌಢಶಾಲೆ ರೂಪಿಸಿದ ಮಾದರಿ ಯಾವುದು?

ಮುಖ್ಯವಾಗಿ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಸಮುದಾಯ ಸಹಭಾಗಿತ್ವದಲ್ಲಿ ಕ್ರಿಯಾಶೀಲಗೊಳಿಸಲಾಗಿದೆ. ಶಾಲಾ ಆವರಣದಲ್ಲಿ ಸಾವಯವ ಕೃಷಿ, ಮಳೆಕೊಯ್ಲು, ವನಮಹೋತ್ಸವ, ಸಾಮಾಜಿಕ ಜಾಗೃತಿ, ಗ್ರಾಮ-ಮರ-ಕೆರೆ ದತ್ತು ಪಡೆಯುವಿಕೆ ಹಾಗೂ ಸ್ವಚ್ಚತೆ, ಪ್ಲಾಸ್ಟಿಕ್ ರದ್ದು ಜಾಗೃತಿ, ಶಾಲಾ ಕೈತೋಟ, ನೀರು-ಶಕ್ತಿ ಉಳಿತಾಯ, ಕಸ ವಿಲೇವಾರಿ, ಶ್ರಮದಾನ ಆರೋಗ್ಯ ರಕ್ಷಣೆ, ಪರಿಸರ ಹಾಗೂ ಆರೋಗ್ಯದ ಕುರಿತು ದಿನಾಚರಣೆಗಳಲ್ಲಿ ಊರನ್ನು ಒಳಗೊಳ್ಳುವಿಕೆ, ನವೀನ ಸೃಜನಾತ್ಮಕ ಕಲಿಕಾ ಚಟುವಟುಕೆಗಳು ಹಾಗೂ ಗುಣಾತ್ಮಕ ಕಲಿಕಾ ವಾತಾವರಣ ಹೀಗೆ ಇಡೀ ಶಾಲೆಯನ್ನು ಒಂದು ನಿರಂತರ ಪ್ರಯೋಗಶಾಲೆಯನ್ನಾಗಿ ರೂಪಿಸಲಾಗಿದೆ.

ಶಾಲೆಯಲ್ಲಿ ಸಾವಯವ ಕೃಷಿ ಪದ್ಧತಿಯ ಎರೆಹುಳು ಗೊಬ್ಬರ ಘಟಕ, ಎರೆಜಲ, ಜೀವಾಮೃತ, ಜೀವಸಾರ ಘಟಕ, ಪಂಚಗವ್ಯ, ಪೈಪ್ ಕಾಂಪೋಸ್ಟ್ ಇತ್ಯಾದಿಗಳನ್ನು ನೆಲೆಗೊಳಿಸಲಾಗಿದೆ. ಶಾಲಾ ಅಂಗಳದಲ್ಲಿ ಅಂತರ್ಜಲ ಬಳಕೆ ಸಹಕಾರಿಗೆ ಇಂಗುಗುಂಡಿ, ನೀರಿನ ಸಂಗ್ರಹಕ್ಕೆ ಮಳೆನೀರು ಸಂಗ್ರಹ ತೊಟ್ಟಿ, ಶುದ್ಧ ಕುಡಿಯುವ ನೀರಿಗೆ ಮಳೆನೀರು ಕೊಯ್ಲು ನೀರಿನ ಪುನರ್ಬಳಕೆ ಮಾಡಿ ಸಸ್ಯಪಾಲನೆ ಮಾಡಲಾಗುತ್ತದೆ. ಶಕ್ತಿ ಹಾಗೂ ಇಂಧನ ಉಳಿತಾಯಕ್ಕಾಗಿ ಸೋಲಾರ್ ವ್ಯವಸ್ಥೆ, ಎಲ್.ಇ.ಡಿ. ಬಲ್ಬ್ ಬಳಕೆ ಮಾಡಲಾಗಿದೆ. ಜೈವಿಕ ಸಸ್ಯಗಳಾದ ಹೊಂಗೆ, ಸುಬಾಬುಲ್, ಬೇವು, ನೀಲಗಿರಿ ಇತ್ಯಾದಿ ಸಸ್ಯಗಳನ್ನು ಬೆಳೆಸಲಾಗಿದೆ.

ತಾಂತ್ರಿಕವಾಗಿ ಅತ್ಯುತ್ತಮ ಗುಣಮಟ್ಟದ ಸೌಲಭ್ಯವಿರುವ ‘ಗಣಕಯಂತ್ರ ಮಾಹಿತಿ ತಂತ್ರಜ್ಞಾನ ಕೊಠಡಿ’ಯನ್ನು ‘ರಾಜೀವಶೆಟ್ಟಿ ಚಾರಿಟೆಲ್ ಸೋಸೈಟಿ (ರಿ)’ ಬೆಂಗಳೂರು ಇವರ 5 ಲಕ್ಷ ದೇಣಿಗೆಯಿಂದ ಸ್ಥಾಪಿಸಲಾಗಿದೆ, ಹೀಗಾಗಿ ಮಕ್ಕಳಿಗೆ ‘ಗಣಕಯಂತ್ರ ಶಿಕ್ಷಣ’ ನೀಡಲಾಗುತ್ತಿದೆ. ಶಾಲೆಯ ಆಕರ್ಷಕ ತರಗತಿ ಕೋಣೆ, ಸಿ.ಸಿ ಕ್ಯಾಮರಾ ಹಾಗೂ ಧ್ವನಿವರ್ಧಕ, ಎಜ್ಯುಸ್ಯಾಟ್, ರೇಡಿಯೋ ಪಾಠ, ಸ್ಮಾರ್ಟ್ ಕ್ಲಾಸ್ ಹಾಗೂ ದೂರದರ್ಶನ, ಗ್ರೀನ್-ಬ್ಲ್ಯಾಕ್-ಪ್ಯಾನಲ್-ನೋಟಿಸ್ ಬೋರ್ಡ್, ಆಡಿಯೋ-ವಿಡಿಯೋ ವ್ಯವಸ್ಥೆ, ನವೀನ ಸಾಫ್ಟ್ವೇರ್ ಆಧಾರಿತ ಗುಣಾತ್ಮಕ ಶಿಕ್ಷಣವನ್ನು ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ಎಲ್ಲಾ ಕಲಿಕಾ ಪ್ರಕ್ರಿಯೆಗಳನ್ನು ಮುಖ್ಯ ಶಿಕ್ಷಕರ ಕೊಠಡಿಯಿಂದಲೇ ವೀಕ್ಷಿಸಿ ಚರ್ಚಿಸಬಹುದಾಗಿದೆ. ಈ ಬಗೆಯ ತಾಂತ್ರಿಕತೆಯು ಯಾವುದೇ ಖಾಸಗಿ ಶಾಲೆಯನ್ನು ಮೀರಿಸುವಂತಿದೆ. ಹೀಗಾಗಿ ಸುತ್ತಮುತ್ತಲ ಹಳ್ಳಿಗಳ ಪೋಷಕರು ತಮ್ಮ ಮಕ್ಕಳನ್ನು ಗೊಜನೂರು ಪ್ರೌಢಶಾಲೆಗೆ ಸೇರಿಸಲು ಧಾವಿಸುತ್ತಾರೆ, ಶಾಲೆಯಲ್ಲಿ 277 ಮಕ್ಕಳ ತನಕ ದಾಖಲಾತಿಯಾಗಿದೆ. ಹೀಗಾಗಿ ಹೆಚ್ಚುವರಿ ದಾಖಲಾತಿಯನ್ನು ನಿಲ್ಲಿಸಿದ್ದೂ ಇದೆ.

2010 ರಿಂದ 2020 ರ ತನಕ ಪ್ರತಿ ವರ್ಷವೂ ಶಾಲಾ ಸಾಧನೆ, ಮಕ್ಕಳ ಮತ್ತು ಮೇಷ್ಟ್ರುಗಳ ಬರಹಗಳನ್ನೊಳಗೊಂಡ ವಾರ್ಷಿಕ ಸಂಚಿಕೆಗಳನ್ನು ರವಿ ಅವರು ಸಂಪಾದಿಸಿದ್ದಾರೆ. ಈತನಕ ಅಕ್ಷರ ದುಂದುಬಿ, ಶಿಖರ ಸಂಪದ, ಜ್ಞಾನ ಮಂಜರಿ, ಅಷ್ಟಾದಶ ದರ್ಪಣ, ಪಂಚವಟಿ, ಅಂಬರಮಣಿ, ಸಪ್ತಗಿರಿ ವೈಭವ, ಗಿರಿತೇಜ ಲಹರಿ, ನವ ನಿಕೇತನ, ದಶದೀಪ್ತಿ ದರ್ಶಿಕೆ ಎಂಬ ಹತ್ತು ಸ್ಮರಣ ಸಂಚಿಕೆಗಳನ್ನು ತರಲಾಗಿದೆ. ಈ ಸಂಚಿಕೆಗಳು ಶಾಲೆಯ ಎಲ್ಲಾ ಬಗೆಯ ಕ್ರಿಯಾಶೀಲ ಚಟುವಟಿಕೆಗಳ ದಾಖಲೆಗಳಾಗಿವೆ.

ಇಷ್ಟಾಗಿಯೂ ರವಿ ಅವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸೂಕ್ಷ್ಮವಾಗಿ ಧಾರ್ಮಿಕತೆಯ ಪ್ರಭಾವವಿದೆ. ಅಂಬೇಡ್ಕರ್, ಸಂವಿಧಾನ ಪ್ರಜಾಪ್ರಭುತ್ವದ ಆಶಯಗಳ ಕುರಿತ ವೈಚಾರಿಕ ಕಾರ್ಯಕ್ರಮಗಳು ನಡೆದದ್ದು ತುಂಬಾ ವಿರಳ. ಅಂತೆಯೇ ಶಾಲಾ ಆವರಣದ ವಿವೇಕಾನಂದ ಪ್ರತಿಮೆ, ಪಂಚವಟಿ, ಶಾಲಾ ಸಂಚಿಕೆಯ ಹೆಸರುಗಳು, ಸ್ವಾಮೀಜಿಗಳನ್ನು ಶಾಲೆಗೆ ಕರೆಸುವುದು ಇಂತದ್ದರಲ್ಲೆಲ್ಲಾ ಸನಾತನತೆ ಇಣುಕುತ್ತದೆ. ಇದು ಮುಂದೆ ಶಾಲೆಯ ಸಾಧನೆಯನ್ನು ಮಂಕಾಗಿಸಬಹುದು.

ಸಂವಿಧಾನ ಬದ್ಧ ಸಾರ್ವಜನಿಕ ಸಂಸ್ಥೆಯಾದ ಶಾಲೆಯೊಂದರಲ್ಲಿ ಯಾವುದೇ ಧರ್ಮದ ಛಾಯೆಗಳು ಢಾಳಾಗಿ ಕಾಣಿಸಕೂಡದು. ’ಭಾರತೀಯರಾದ ನಾವು’ ಎಂದು ಆರಂಭವಾಗುವ ಸಂವಿಧಾನದ ಪ್ರಸ್ತಾವನೆಗೆ ಪೂರಕವಾಗಿ ಶಾಲೆಯ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸುವುದು ಶಿಕ್ಷಕರ ಆದ್ಯ ಕರ್ತವ್ಯ. ಈ ಬೆಳವಣಿಗೆ ಅಕಸ್ಮಾತ್ ನಡೆದಿದ್ದರೆ, ಮುಂದಿನ ದಿನಗಳಲ್ಲಿ ರವಿ ಬೆಂಚಳ್ಳಿಯವರು ಇದನ್ನು ಸರಿಪಡಿಸಿಕೊಳ್ಳುತ್ತಾರೆಂದು ಭಾವಿಸುವೆ.

ತನ್ನ ಬಿಡುವಿಲ್ಲದ ಕೆಲಸಗಳಿಗೆ ತನ್ನ ಸಂಗಾತಿ ಸುಮತಿಯವರ ನೆರವಿದೆ ಎಂದು ರವಿ ಹೇಳುತ್ತಾರೆ. ಮಕ್ಕಳಾದ ವೈಭವ್ ಮತ್ತು ವರ್ಷಿತ ಅವರರೊಂದಿಗೆ ಸದ್ಯಕ್ಕೆ ರವಿಯವರು ಲಕ್ಷ್ಮೇಶ್ವರದಲ್ಲಿ ನೆಲೆಸಿದ್ದಾರೆ. ಊರಿನವರ ಸಹಕಾರದೊಂದಿಗೆ ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಹೊಯ್ಯಲಿ, ಸರಕಾರಿ ಪ್ರೌಢಶಾಲೆಗಳಿಗೆ ಅತ್ಯುತ್ತಮ ಮಾದರಿಯನ್ನು ರೂಪಿಸಲಿ ಎಂದು ನಾನುಗೌರಿ.ಕಾಮ್ ಆಶಿಸುತ್ತದೆ.

ಗೊಜನೂರು ಪ್ರೌಢಶಾಲೆ ತನ್ನದೇ ಸ್ವಂತ ವೆಬ್ ಸೈಟ್ ಹೊಂದಿದೆ. ಆಸಕ್ತರು ಶಾಲೆಯನ್ನು ಈ www.ghsgojanur.com ಕೊಂಡಿಯಿಂದ ಸಂಪರ್ಕಿಸಬಹುದು. ಅಲ್ಲದೇ ಶಾಲೆಯ ಕಲಿಕಾ ಪ್ರಗತಿ, ಚಟುವಟಿಕೆ ಹಾಗೂ ಸಾಧನೆಗಳನ್ನು youtube ನ ghsgojanur ಚಾನಲ್ ಮೂಲಕ ವೀಕ್ಷೀಸಬಹುದು. ಸಂಪರ್ಕಕ್ಕೆ ಇಮೇಲ್‌ [email protected] ಸಂಪರ್ಕಿಸಬಹುದು.

-ಅರುಣ್ ಜೋಳದಕೂಡ್ಲಿಗಿ


ಓದಿ: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....