Homeಅಂಕಣಗಳುಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

ಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

‘ಬೆಸ್ಟ ಇಕೋ-ಕ್ಲಬ್’ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆಗೆ ಇದೆ.

- Advertisement -
- Advertisement -

ಶಾಲಾ ಆವರಣವನ್ನು ’ಪರಿಸರ’ಮಯಗೊಳಿಸುವುದಲ್ಲದೆ, ನಿಸರ್ಗಪ್ರೇರಿತ ಕಲಿಕೆಯ ಕಾರಣಕ್ಕೆ ಈ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲಿ ಆಯ್ಕೆಯಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲೂ `ರಾಷ್ಟ್ರಮಟ್ಟಕ್ಕೆ’ ಆರಿಸಲಾಗುತ್ತದೆ. 2019 ರ ಡಿಸೆಂಬರ್ 20 ರಂದು ಗುಜರಾತಿನ ಕೇವಡಿಯಾದಲ್ಲಿ ಕೇಂದ್ರ ಪರಿಸರ ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯವು ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ದೇಶದ ಆರು ಪ್ರೌಢಶಾಲೆಗಳು ‘ಬೆಸ್ಟ ಇಕೋ-ಕ್ಲಬ್ ಪ್ರಶಸ್ತಿ’ಪಡೆಯುತ್ತವೆ.

ಅದರಲ್ಲಿ ಈ ಶಾಲೆಯೂ ಆಯ್ಕೆಯಾಗುತ್ತದೆ. ಇದರೊಂದಿಗೆ ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಮೂಡುತ್ತದೆ. ಅದುವೆ ಗದಗ ಜಿಲ್ಲೆ, ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆ. ಈ ಹಂತಕ್ಕೆ ಶಾಲೆಯನ್ನು ರೂಪಿಸಲು ಕಳೆದ ಹತ್ತು ವರ್ಷದಿಂದ ತನ್ನನ್ನು ತಾನು ತೇದುಕೊಂಡ ಮುಖ್ಯ ಶಿಕ್ಷಕ ರವಿ ಬಸವಣ್ಣೆಪ್ಪ ಬೆಂಚಳ್ಳಿಯವರು.

ಮೂಲತಃ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ವಾಸನ ಗ್ರಾಮದ ರವಿ ಬಿ. ಬೆಂಚಳ್ಳಿಯವರು 2009-10 ರಲ್ಲಿ ಆಯ್ಕೆಯಾಗಿ ಸರಕಾರಿ ಪ್ರೌಢಶಾಲೆ ಗೊಜನೂರದಲ್ಲಿ ಮುಖ್ಯ ಶಿಕ್ಷಕರಾಗಿ ಬರುತ್ತಾರೆ. ಕಳೆದ ಹತ್ತು ವರ್ಷದಲ್ಲಿ ರವಿಯವರು ಗೊಜನೂರು ಹೈಸ್ಕೂಲಿನ ಚಹರೆಯನ್ನೆ ಬದಲಿಸಿದರು. ಈ ಶಾಲೆಯ ಪರಿಸರವನ್ನು ಪುಟ್ಟ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಂತೆ ಮೇಲ್ದರ್ಜೆಗೇರಿಸಿದರು. ಆರಂಭಕ್ಕೆ ಶಾಲೆಯನ್ನು ತಮ್ಮ ಗ್ರಾಮ ಪಂಚಾಯ್ತಿಯಲ್ಲಿ, ನಂತರ ತಾಲೂಕಿನಲ್ಲಿ, ಜಿಲ್ಲೆಯಲ್ಲಿ, ರಾಜ್ಯದಲ್ಲಿ ಕಡೆಯದಾಗಿ ದೇಶವೇ ಗಮನಿಸುವಂತೆ ರೂಪಿಸಿದರು.

ಈ ಪಯಣದಲ್ಲಿ ಅವರೊಂದಿಗೆ ಗ್ರಾಮದ ಪಾಲಕ-ಪೋಷಕರು, ಗಣ್ಯರು, ಜನಪ್ರತಿನಿಧಿಗಳು, ಸಹಶಿಕ್ಷಕರು, ಸಿಬ್ಬಂದಿಯವರು, ಸಮುದಾಯ ಹಾಗೂ ವಿದ್ಯಾರ್ಥಿಗಳು, ಇದೆಲ್ಲಕ್ಕೂ ಸಹಕರಿಸಿ ಪ್ರೋತ್ಸಾಹಿಸಿದ ಇಲಾಖೆ ಅಧಿಕಾರಿಗಳು ಜೊತೆಯಾದರು. ಇದೆಲ್ಲದರ ಕೂಡುಶಕ್ತಿಯ ಫಲವಾಗಿ ನಾನಾ ವಿಭಾಗಗಳಲ್ಲಿ ಈ ತನಕ ಗೊಜನೂರು ಪ್ರೌಢಶಾಲೆಗೆ ಎಂಟು ಪ್ರಶಸ್ತಿಗಳು, ಮುಖ್ಯ ಶಿಕ್ಷಕರಾದ ರವಿ ಅವರಿಗೆ ಹನ್ನೆರಡು ಪ್ರಶಸ್ತಿಗಳು, ಇತರೆ ಶಿಕ್ಷಕ ವರ್ಗಕ್ಕೆ ಏಳು ಪ್ರಶಸ್ತಿಗಳು ಲಬಿಸಿವೆ.

ಹಾಗಾದರೆ ಈ ಪ್ರೌಢಶಾಲೆ ರೂಪಿಸಿದ ಮಾದರಿ ಯಾವುದು?

ಮುಖ್ಯವಾಗಿ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಸಮುದಾಯ ಸಹಭಾಗಿತ್ವದಲ್ಲಿ ಕ್ರಿಯಾಶೀಲಗೊಳಿಸಲಾಗಿದೆ. ಶಾಲಾ ಆವರಣದಲ್ಲಿ ಸಾವಯವ ಕೃಷಿ, ಮಳೆಕೊಯ್ಲು, ವನಮಹೋತ್ಸವ, ಸಾಮಾಜಿಕ ಜಾಗೃತಿ, ಗ್ರಾಮ-ಮರ-ಕೆರೆ ದತ್ತು ಪಡೆಯುವಿಕೆ ಹಾಗೂ ಸ್ವಚ್ಚತೆ, ಪ್ಲಾಸ್ಟಿಕ್ ರದ್ದು ಜಾಗೃತಿ, ಶಾಲಾ ಕೈತೋಟ, ನೀರು-ಶಕ್ತಿ ಉಳಿತಾಯ, ಕಸ ವಿಲೇವಾರಿ, ಶ್ರಮದಾನ ಆರೋಗ್ಯ ರಕ್ಷಣೆ, ಪರಿಸರ ಹಾಗೂ ಆರೋಗ್ಯದ ಕುರಿತು ದಿನಾಚರಣೆಗಳಲ್ಲಿ ಊರನ್ನು ಒಳಗೊಳ್ಳುವಿಕೆ, ನವೀನ ಸೃಜನಾತ್ಮಕ ಕಲಿಕಾ ಚಟುವಟುಕೆಗಳು ಹಾಗೂ ಗುಣಾತ್ಮಕ ಕಲಿಕಾ ವಾತಾವರಣ ಹೀಗೆ ಇಡೀ ಶಾಲೆಯನ್ನು ಒಂದು ನಿರಂತರ ಪ್ರಯೋಗಶಾಲೆಯನ್ನಾಗಿ ರೂಪಿಸಲಾಗಿದೆ.

ಶಾಲೆಯಲ್ಲಿ ಸಾವಯವ ಕೃಷಿ ಪದ್ಧತಿಯ ಎರೆಹುಳು ಗೊಬ್ಬರ ಘಟಕ, ಎರೆಜಲ, ಜೀವಾಮೃತ, ಜೀವಸಾರ ಘಟಕ, ಪಂಚಗವ್ಯ, ಪೈಪ್ ಕಾಂಪೋಸ್ಟ್ ಇತ್ಯಾದಿಗಳನ್ನು ನೆಲೆಗೊಳಿಸಲಾಗಿದೆ. ಶಾಲಾ ಅಂಗಳದಲ್ಲಿ ಅಂತರ್ಜಲ ಬಳಕೆ ಸಹಕಾರಿಗೆ ಇಂಗುಗುಂಡಿ, ನೀರಿನ ಸಂಗ್ರಹಕ್ಕೆ ಮಳೆನೀರು ಸಂಗ್ರಹ ತೊಟ್ಟಿ, ಶುದ್ಧ ಕುಡಿಯುವ ನೀರಿಗೆ ಮಳೆನೀರು ಕೊಯ್ಲು ನೀರಿನ ಪುನರ್ಬಳಕೆ ಮಾಡಿ ಸಸ್ಯಪಾಲನೆ ಮಾಡಲಾಗುತ್ತದೆ. ಶಕ್ತಿ ಹಾಗೂ ಇಂಧನ ಉಳಿತಾಯಕ್ಕಾಗಿ ಸೋಲಾರ್ ವ್ಯವಸ್ಥೆ, ಎಲ್.ಇ.ಡಿ. ಬಲ್ಬ್ ಬಳಕೆ ಮಾಡಲಾಗಿದೆ. ಜೈವಿಕ ಸಸ್ಯಗಳಾದ ಹೊಂಗೆ, ಸುಬಾಬುಲ್, ಬೇವು, ನೀಲಗಿರಿ ಇತ್ಯಾದಿ ಸಸ್ಯಗಳನ್ನು ಬೆಳೆಸಲಾಗಿದೆ.

ತಾಂತ್ರಿಕವಾಗಿ ಅತ್ಯುತ್ತಮ ಗುಣಮಟ್ಟದ ಸೌಲಭ್ಯವಿರುವ ‘ಗಣಕಯಂತ್ರ ಮಾಹಿತಿ ತಂತ್ರಜ್ಞಾನ ಕೊಠಡಿ’ಯನ್ನು ‘ರಾಜೀವಶೆಟ್ಟಿ ಚಾರಿಟೆಲ್ ಸೋಸೈಟಿ (ರಿ)’ ಬೆಂಗಳೂರು ಇವರ 5 ಲಕ್ಷ ದೇಣಿಗೆಯಿಂದ ಸ್ಥಾಪಿಸಲಾಗಿದೆ, ಹೀಗಾಗಿ ಮಕ್ಕಳಿಗೆ ‘ಗಣಕಯಂತ್ರ ಶಿಕ್ಷಣ’ ನೀಡಲಾಗುತ್ತಿದೆ. ಶಾಲೆಯ ಆಕರ್ಷಕ ತರಗತಿ ಕೋಣೆ, ಸಿ.ಸಿ ಕ್ಯಾಮರಾ ಹಾಗೂ ಧ್ವನಿವರ್ಧಕ, ಎಜ್ಯುಸ್ಯಾಟ್, ರೇಡಿಯೋ ಪಾಠ, ಸ್ಮಾರ್ಟ್ ಕ್ಲಾಸ್ ಹಾಗೂ ದೂರದರ್ಶನ, ಗ್ರೀನ್-ಬ್ಲ್ಯಾಕ್-ಪ್ಯಾನಲ್-ನೋಟಿಸ್ ಬೋರ್ಡ್, ಆಡಿಯೋ-ವಿಡಿಯೋ ವ್ಯವಸ್ಥೆ, ನವೀನ ಸಾಫ್ಟ್ವೇರ್ ಆಧಾರಿತ ಗುಣಾತ್ಮಕ ಶಿಕ್ಷಣವನ್ನು ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ಎಲ್ಲಾ ಕಲಿಕಾ ಪ್ರಕ್ರಿಯೆಗಳನ್ನು ಮುಖ್ಯ ಶಿಕ್ಷಕರ ಕೊಠಡಿಯಿಂದಲೇ ವೀಕ್ಷಿಸಿ ಚರ್ಚಿಸಬಹುದಾಗಿದೆ. ಈ ಬಗೆಯ ತಾಂತ್ರಿಕತೆಯು ಯಾವುದೇ ಖಾಸಗಿ ಶಾಲೆಯನ್ನು ಮೀರಿಸುವಂತಿದೆ. ಹೀಗಾಗಿ ಸುತ್ತಮುತ್ತಲ ಹಳ್ಳಿಗಳ ಪೋಷಕರು ತಮ್ಮ ಮಕ್ಕಳನ್ನು ಗೊಜನೂರು ಪ್ರೌಢಶಾಲೆಗೆ ಸೇರಿಸಲು ಧಾವಿಸುತ್ತಾರೆ, ಶಾಲೆಯಲ್ಲಿ 277 ಮಕ್ಕಳ ತನಕ ದಾಖಲಾತಿಯಾಗಿದೆ. ಹೀಗಾಗಿ ಹೆಚ್ಚುವರಿ ದಾಖಲಾತಿಯನ್ನು ನಿಲ್ಲಿಸಿದ್ದೂ ಇದೆ.

2010 ರಿಂದ 2020 ರ ತನಕ ಪ್ರತಿ ವರ್ಷವೂ ಶಾಲಾ ಸಾಧನೆ, ಮಕ್ಕಳ ಮತ್ತು ಮೇಷ್ಟ್ರುಗಳ ಬರಹಗಳನ್ನೊಳಗೊಂಡ ವಾರ್ಷಿಕ ಸಂಚಿಕೆಗಳನ್ನು ರವಿ ಅವರು ಸಂಪಾದಿಸಿದ್ದಾರೆ. ಈತನಕ ಅಕ್ಷರ ದುಂದುಬಿ, ಶಿಖರ ಸಂಪದ, ಜ್ಞಾನ ಮಂಜರಿ, ಅಷ್ಟಾದಶ ದರ್ಪಣ, ಪಂಚವಟಿ, ಅಂಬರಮಣಿ, ಸಪ್ತಗಿರಿ ವೈಭವ, ಗಿರಿತೇಜ ಲಹರಿ, ನವ ನಿಕೇತನ, ದಶದೀಪ್ತಿ ದರ್ಶಿಕೆ ಎಂಬ ಹತ್ತು ಸ್ಮರಣ ಸಂಚಿಕೆಗಳನ್ನು ತರಲಾಗಿದೆ. ಈ ಸಂಚಿಕೆಗಳು ಶಾಲೆಯ ಎಲ್ಲಾ ಬಗೆಯ ಕ್ರಿಯಾಶೀಲ ಚಟುವಟಿಕೆಗಳ ದಾಖಲೆಗಳಾಗಿವೆ.

ಇಷ್ಟಾಗಿಯೂ ರವಿ ಅವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸೂಕ್ಷ್ಮವಾಗಿ ಧಾರ್ಮಿಕತೆಯ ಪ್ರಭಾವವಿದೆ. ಅಂಬೇಡ್ಕರ್, ಸಂವಿಧಾನ ಪ್ರಜಾಪ್ರಭುತ್ವದ ಆಶಯಗಳ ಕುರಿತ ವೈಚಾರಿಕ ಕಾರ್ಯಕ್ರಮಗಳು ನಡೆದದ್ದು ತುಂಬಾ ವಿರಳ. ಅಂತೆಯೇ ಶಾಲಾ ಆವರಣದ ವಿವೇಕಾನಂದ ಪ್ರತಿಮೆ, ಪಂಚವಟಿ, ಶಾಲಾ ಸಂಚಿಕೆಯ ಹೆಸರುಗಳು, ಸ್ವಾಮೀಜಿಗಳನ್ನು ಶಾಲೆಗೆ ಕರೆಸುವುದು ಇಂತದ್ದರಲ್ಲೆಲ್ಲಾ ಸನಾತನತೆ ಇಣುಕುತ್ತದೆ. ಇದು ಮುಂದೆ ಶಾಲೆಯ ಸಾಧನೆಯನ್ನು ಮಂಕಾಗಿಸಬಹುದು.

ಸಂವಿಧಾನ ಬದ್ಧ ಸಾರ್ವಜನಿಕ ಸಂಸ್ಥೆಯಾದ ಶಾಲೆಯೊಂದರಲ್ಲಿ ಯಾವುದೇ ಧರ್ಮದ ಛಾಯೆಗಳು ಢಾಳಾಗಿ ಕಾಣಿಸಕೂಡದು. ’ಭಾರತೀಯರಾದ ನಾವು’ ಎಂದು ಆರಂಭವಾಗುವ ಸಂವಿಧಾನದ ಪ್ರಸ್ತಾವನೆಗೆ ಪೂರಕವಾಗಿ ಶಾಲೆಯ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸುವುದು ಶಿಕ್ಷಕರ ಆದ್ಯ ಕರ್ತವ್ಯ. ಈ ಬೆಳವಣಿಗೆ ಅಕಸ್ಮಾತ್ ನಡೆದಿದ್ದರೆ, ಮುಂದಿನ ದಿನಗಳಲ್ಲಿ ರವಿ ಬೆಂಚಳ್ಳಿಯವರು ಇದನ್ನು ಸರಿಪಡಿಸಿಕೊಳ್ಳುತ್ತಾರೆಂದು ಭಾವಿಸುವೆ.

ತನ್ನ ಬಿಡುವಿಲ್ಲದ ಕೆಲಸಗಳಿಗೆ ತನ್ನ ಸಂಗಾತಿ ಸುಮತಿಯವರ ನೆರವಿದೆ ಎಂದು ರವಿ ಹೇಳುತ್ತಾರೆ. ಮಕ್ಕಳಾದ ವೈಭವ್ ಮತ್ತು ವರ್ಷಿತ ಅವರರೊಂದಿಗೆ ಸದ್ಯಕ್ಕೆ ರವಿಯವರು ಲಕ್ಷ್ಮೇಶ್ವರದಲ್ಲಿ ನೆಲೆಸಿದ್ದಾರೆ. ಊರಿನವರ ಸಹಕಾರದೊಂದಿಗೆ ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಹೊಯ್ಯಲಿ, ಸರಕಾರಿ ಪ್ರೌಢಶಾಲೆಗಳಿಗೆ ಅತ್ಯುತ್ತಮ ಮಾದರಿಯನ್ನು ರೂಪಿಸಲಿ ಎಂದು ನಾನುಗೌರಿ.ಕಾಮ್ ಆಶಿಸುತ್ತದೆ.

ಗೊಜನೂರು ಪ್ರೌಢಶಾಲೆ ತನ್ನದೇ ಸ್ವಂತ ವೆಬ್ ಸೈಟ್ ಹೊಂದಿದೆ. ಆಸಕ್ತರು ಶಾಲೆಯನ್ನು ಈ www.ghsgojanur.com ಕೊಂಡಿಯಿಂದ ಸಂಪರ್ಕಿಸಬಹುದು. ಅಲ್ಲದೇ ಶಾಲೆಯ ಕಲಿಕಾ ಪ್ರಗತಿ, ಚಟುವಟಿಕೆ ಹಾಗೂ ಸಾಧನೆಗಳನ್ನು youtube ನ ghsgojanur ಚಾನಲ್ ಮೂಲಕ ವೀಕ್ಷೀಸಬಹುದು. ಸಂಪರ್ಕಕ್ಕೆ ಇಮೇಲ್‌ [email protected] ಸಂಪರ್ಕಿಸಬಹುದು.

-ಅರುಣ್ ಜೋಳದಕೂಡ್ಲಿಗಿ


ಓದಿ: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...