Homeಅಂಕಣಗಳುಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

ಎಲೆಮರೆ-43: ಪರಿಸರ ಪ್ರಜ್ಞೆ, ಅತ್ಯಾಧುನಿಕ ತಾಂತ್ರಿಕತೆಯಿಂದ ದೇಶದ ಗಮನಸೆಳೆದ ಗೊಜನೂರು ಸರಕಾರಿ ಪ್ರೌಢಶಾಲೆ

‘ಬೆಸ್ಟ ಇಕೋ-ಕ್ಲಬ್’ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆಗೆ ಇದೆ.

- Advertisement -
- Advertisement -

ಶಾಲಾ ಆವರಣವನ್ನು ’ಪರಿಸರ’ಮಯಗೊಳಿಸುವುದಲ್ಲದೆ, ನಿಸರ್ಗಪ್ರೇರಿತ ಕಲಿಕೆಯ ಕಾರಣಕ್ಕೆ ಈ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲಿ ಆಯ್ಕೆಯಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲೂ `ರಾಷ್ಟ್ರಮಟ್ಟಕ್ಕೆ’ ಆರಿಸಲಾಗುತ್ತದೆ. 2019 ರ ಡಿಸೆಂಬರ್ 20 ರಂದು ಗುಜರಾತಿನ ಕೇವಡಿಯಾದಲ್ಲಿ ಕೇಂದ್ರ ಪರಿಸರ ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯವು ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ದೇಶದ ಆರು ಪ್ರೌಢಶಾಲೆಗಳು ‘ಬೆಸ್ಟ ಇಕೋ-ಕ್ಲಬ್ ಪ್ರಶಸ್ತಿ’ಪಡೆಯುತ್ತವೆ.

ಅದರಲ್ಲಿ ಈ ಶಾಲೆಯೂ ಆಯ್ಕೆಯಾಗುತ್ತದೆ. ಇದರೊಂದಿಗೆ ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಶಾಲೆಯೆಂಬ ಗರಿ ಮೂಡುತ್ತದೆ. ಅದುವೆ ಗದಗ ಜಿಲ್ಲೆ, ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಸರಕಾರಿ ಪೌಢಶಾಲೆ. ಈ ಹಂತಕ್ಕೆ ಶಾಲೆಯನ್ನು ರೂಪಿಸಲು ಕಳೆದ ಹತ್ತು ವರ್ಷದಿಂದ ತನ್ನನ್ನು ತಾನು ತೇದುಕೊಂಡ ಮುಖ್ಯ ಶಿಕ್ಷಕ ರವಿ ಬಸವಣ್ಣೆಪ್ಪ ಬೆಂಚಳ್ಳಿಯವರು.

ಮೂಲತಃ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ವಾಸನ ಗ್ರಾಮದ ರವಿ ಬಿ. ಬೆಂಚಳ್ಳಿಯವರು 2009-10 ರಲ್ಲಿ ಆಯ್ಕೆಯಾಗಿ ಸರಕಾರಿ ಪ್ರೌಢಶಾಲೆ ಗೊಜನೂರದಲ್ಲಿ ಮುಖ್ಯ ಶಿಕ್ಷಕರಾಗಿ ಬರುತ್ತಾರೆ. ಕಳೆದ ಹತ್ತು ವರ್ಷದಲ್ಲಿ ರವಿಯವರು ಗೊಜನೂರು ಹೈಸ್ಕೂಲಿನ ಚಹರೆಯನ್ನೆ ಬದಲಿಸಿದರು. ಈ ಶಾಲೆಯ ಪರಿಸರವನ್ನು ಪುಟ್ಟ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಂತೆ ಮೇಲ್ದರ್ಜೆಗೇರಿಸಿದರು. ಆರಂಭಕ್ಕೆ ಶಾಲೆಯನ್ನು ತಮ್ಮ ಗ್ರಾಮ ಪಂಚಾಯ್ತಿಯಲ್ಲಿ, ನಂತರ ತಾಲೂಕಿನಲ್ಲಿ, ಜಿಲ್ಲೆಯಲ್ಲಿ, ರಾಜ್ಯದಲ್ಲಿ ಕಡೆಯದಾಗಿ ದೇಶವೇ ಗಮನಿಸುವಂತೆ ರೂಪಿಸಿದರು.

ಈ ಪಯಣದಲ್ಲಿ ಅವರೊಂದಿಗೆ ಗ್ರಾಮದ ಪಾಲಕ-ಪೋಷಕರು, ಗಣ್ಯರು, ಜನಪ್ರತಿನಿಧಿಗಳು, ಸಹಶಿಕ್ಷಕರು, ಸಿಬ್ಬಂದಿಯವರು, ಸಮುದಾಯ ಹಾಗೂ ವಿದ್ಯಾರ್ಥಿಗಳು, ಇದೆಲ್ಲಕ್ಕೂ ಸಹಕರಿಸಿ ಪ್ರೋತ್ಸಾಹಿಸಿದ ಇಲಾಖೆ ಅಧಿಕಾರಿಗಳು ಜೊತೆಯಾದರು. ಇದೆಲ್ಲದರ ಕೂಡುಶಕ್ತಿಯ ಫಲವಾಗಿ ನಾನಾ ವಿಭಾಗಗಳಲ್ಲಿ ಈ ತನಕ ಗೊಜನೂರು ಪ್ರೌಢಶಾಲೆಗೆ ಎಂಟು ಪ್ರಶಸ್ತಿಗಳು, ಮುಖ್ಯ ಶಿಕ್ಷಕರಾದ ರವಿ ಅವರಿಗೆ ಹನ್ನೆರಡು ಪ್ರಶಸ್ತಿಗಳು, ಇತರೆ ಶಿಕ್ಷಕ ವರ್ಗಕ್ಕೆ ಏಳು ಪ್ರಶಸ್ತಿಗಳು ಲಬಿಸಿವೆ.

ಹಾಗಾದರೆ ಈ ಪ್ರೌಢಶಾಲೆ ರೂಪಿಸಿದ ಮಾದರಿ ಯಾವುದು?

ಮುಖ್ಯವಾಗಿ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಸಮುದಾಯ ಸಹಭಾಗಿತ್ವದಲ್ಲಿ ಕ್ರಿಯಾಶೀಲಗೊಳಿಸಲಾಗಿದೆ. ಶಾಲಾ ಆವರಣದಲ್ಲಿ ಸಾವಯವ ಕೃಷಿ, ಮಳೆಕೊಯ್ಲು, ವನಮಹೋತ್ಸವ, ಸಾಮಾಜಿಕ ಜಾಗೃತಿ, ಗ್ರಾಮ-ಮರ-ಕೆರೆ ದತ್ತು ಪಡೆಯುವಿಕೆ ಹಾಗೂ ಸ್ವಚ್ಚತೆ, ಪ್ಲಾಸ್ಟಿಕ್ ರದ್ದು ಜಾಗೃತಿ, ಶಾಲಾ ಕೈತೋಟ, ನೀರು-ಶಕ್ತಿ ಉಳಿತಾಯ, ಕಸ ವಿಲೇವಾರಿ, ಶ್ರಮದಾನ ಆರೋಗ್ಯ ರಕ್ಷಣೆ, ಪರಿಸರ ಹಾಗೂ ಆರೋಗ್ಯದ ಕುರಿತು ದಿನಾಚರಣೆಗಳಲ್ಲಿ ಊರನ್ನು ಒಳಗೊಳ್ಳುವಿಕೆ, ನವೀನ ಸೃಜನಾತ್ಮಕ ಕಲಿಕಾ ಚಟುವಟುಕೆಗಳು ಹಾಗೂ ಗುಣಾತ್ಮಕ ಕಲಿಕಾ ವಾತಾವರಣ ಹೀಗೆ ಇಡೀ ಶಾಲೆಯನ್ನು ಒಂದು ನಿರಂತರ ಪ್ರಯೋಗಶಾಲೆಯನ್ನಾಗಿ ರೂಪಿಸಲಾಗಿದೆ.

ಶಾಲೆಯಲ್ಲಿ ಸಾವಯವ ಕೃಷಿ ಪದ್ಧತಿಯ ಎರೆಹುಳು ಗೊಬ್ಬರ ಘಟಕ, ಎರೆಜಲ, ಜೀವಾಮೃತ, ಜೀವಸಾರ ಘಟಕ, ಪಂಚಗವ್ಯ, ಪೈಪ್ ಕಾಂಪೋಸ್ಟ್ ಇತ್ಯಾದಿಗಳನ್ನು ನೆಲೆಗೊಳಿಸಲಾಗಿದೆ. ಶಾಲಾ ಅಂಗಳದಲ್ಲಿ ಅಂತರ್ಜಲ ಬಳಕೆ ಸಹಕಾರಿಗೆ ಇಂಗುಗುಂಡಿ, ನೀರಿನ ಸಂಗ್ರಹಕ್ಕೆ ಮಳೆನೀರು ಸಂಗ್ರಹ ತೊಟ್ಟಿ, ಶುದ್ಧ ಕುಡಿಯುವ ನೀರಿಗೆ ಮಳೆನೀರು ಕೊಯ್ಲು ನೀರಿನ ಪುನರ್ಬಳಕೆ ಮಾಡಿ ಸಸ್ಯಪಾಲನೆ ಮಾಡಲಾಗುತ್ತದೆ. ಶಕ್ತಿ ಹಾಗೂ ಇಂಧನ ಉಳಿತಾಯಕ್ಕಾಗಿ ಸೋಲಾರ್ ವ್ಯವಸ್ಥೆ, ಎಲ್.ಇ.ಡಿ. ಬಲ್ಬ್ ಬಳಕೆ ಮಾಡಲಾಗಿದೆ. ಜೈವಿಕ ಸಸ್ಯಗಳಾದ ಹೊಂಗೆ, ಸುಬಾಬುಲ್, ಬೇವು, ನೀಲಗಿರಿ ಇತ್ಯಾದಿ ಸಸ್ಯಗಳನ್ನು ಬೆಳೆಸಲಾಗಿದೆ.

ತಾಂತ್ರಿಕವಾಗಿ ಅತ್ಯುತ್ತಮ ಗುಣಮಟ್ಟದ ಸೌಲಭ್ಯವಿರುವ ‘ಗಣಕಯಂತ್ರ ಮಾಹಿತಿ ತಂತ್ರಜ್ಞಾನ ಕೊಠಡಿ’ಯನ್ನು ‘ರಾಜೀವಶೆಟ್ಟಿ ಚಾರಿಟೆಲ್ ಸೋಸೈಟಿ (ರಿ)’ ಬೆಂಗಳೂರು ಇವರ 5 ಲಕ್ಷ ದೇಣಿಗೆಯಿಂದ ಸ್ಥಾಪಿಸಲಾಗಿದೆ, ಹೀಗಾಗಿ ಮಕ್ಕಳಿಗೆ ‘ಗಣಕಯಂತ್ರ ಶಿಕ್ಷಣ’ ನೀಡಲಾಗುತ್ತಿದೆ. ಶಾಲೆಯ ಆಕರ್ಷಕ ತರಗತಿ ಕೋಣೆ, ಸಿ.ಸಿ ಕ್ಯಾಮರಾ ಹಾಗೂ ಧ್ವನಿವರ್ಧಕ, ಎಜ್ಯುಸ್ಯಾಟ್, ರೇಡಿಯೋ ಪಾಠ, ಸ್ಮಾರ್ಟ್ ಕ್ಲಾಸ್ ಹಾಗೂ ದೂರದರ್ಶನ, ಗ್ರೀನ್-ಬ್ಲ್ಯಾಕ್-ಪ್ಯಾನಲ್-ನೋಟಿಸ್ ಬೋರ್ಡ್, ಆಡಿಯೋ-ವಿಡಿಯೋ ವ್ಯವಸ್ಥೆ, ನವೀನ ಸಾಫ್ಟ್ವೇರ್ ಆಧಾರಿತ ಗುಣಾತ್ಮಕ ಶಿಕ್ಷಣವನ್ನು ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ಎಲ್ಲಾ ಕಲಿಕಾ ಪ್ರಕ್ರಿಯೆಗಳನ್ನು ಮುಖ್ಯ ಶಿಕ್ಷಕರ ಕೊಠಡಿಯಿಂದಲೇ ವೀಕ್ಷಿಸಿ ಚರ್ಚಿಸಬಹುದಾಗಿದೆ. ಈ ಬಗೆಯ ತಾಂತ್ರಿಕತೆಯು ಯಾವುದೇ ಖಾಸಗಿ ಶಾಲೆಯನ್ನು ಮೀರಿಸುವಂತಿದೆ. ಹೀಗಾಗಿ ಸುತ್ತಮುತ್ತಲ ಹಳ್ಳಿಗಳ ಪೋಷಕರು ತಮ್ಮ ಮಕ್ಕಳನ್ನು ಗೊಜನೂರು ಪ್ರೌಢಶಾಲೆಗೆ ಸೇರಿಸಲು ಧಾವಿಸುತ್ತಾರೆ, ಶಾಲೆಯಲ್ಲಿ 277 ಮಕ್ಕಳ ತನಕ ದಾಖಲಾತಿಯಾಗಿದೆ. ಹೀಗಾಗಿ ಹೆಚ್ಚುವರಿ ದಾಖಲಾತಿಯನ್ನು ನಿಲ್ಲಿಸಿದ್ದೂ ಇದೆ.

2010 ರಿಂದ 2020 ರ ತನಕ ಪ್ರತಿ ವರ್ಷವೂ ಶಾಲಾ ಸಾಧನೆ, ಮಕ್ಕಳ ಮತ್ತು ಮೇಷ್ಟ್ರುಗಳ ಬರಹಗಳನ್ನೊಳಗೊಂಡ ವಾರ್ಷಿಕ ಸಂಚಿಕೆಗಳನ್ನು ರವಿ ಅವರು ಸಂಪಾದಿಸಿದ್ದಾರೆ. ಈತನಕ ಅಕ್ಷರ ದುಂದುಬಿ, ಶಿಖರ ಸಂಪದ, ಜ್ಞಾನ ಮಂಜರಿ, ಅಷ್ಟಾದಶ ದರ್ಪಣ, ಪಂಚವಟಿ, ಅಂಬರಮಣಿ, ಸಪ್ತಗಿರಿ ವೈಭವ, ಗಿರಿತೇಜ ಲಹರಿ, ನವ ನಿಕೇತನ, ದಶದೀಪ್ತಿ ದರ್ಶಿಕೆ ಎಂಬ ಹತ್ತು ಸ್ಮರಣ ಸಂಚಿಕೆಗಳನ್ನು ತರಲಾಗಿದೆ. ಈ ಸಂಚಿಕೆಗಳು ಶಾಲೆಯ ಎಲ್ಲಾ ಬಗೆಯ ಕ್ರಿಯಾಶೀಲ ಚಟುವಟಿಕೆಗಳ ದಾಖಲೆಗಳಾಗಿವೆ.

ಇಷ್ಟಾಗಿಯೂ ರವಿ ಅವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸೂಕ್ಷ್ಮವಾಗಿ ಧಾರ್ಮಿಕತೆಯ ಪ್ರಭಾವವಿದೆ. ಅಂಬೇಡ್ಕರ್, ಸಂವಿಧಾನ ಪ್ರಜಾಪ್ರಭುತ್ವದ ಆಶಯಗಳ ಕುರಿತ ವೈಚಾರಿಕ ಕಾರ್ಯಕ್ರಮಗಳು ನಡೆದದ್ದು ತುಂಬಾ ವಿರಳ. ಅಂತೆಯೇ ಶಾಲಾ ಆವರಣದ ವಿವೇಕಾನಂದ ಪ್ರತಿಮೆ, ಪಂಚವಟಿ, ಶಾಲಾ ಸಂಚಿಕೆಯ ಹೆಸರುಗಳು, ಸ್ವಾಮೀಜಿಗಳನ್ನು ಶಾಲೆಗೆ ಕರೆಸುವುದು ಇಂತದ್ದರಲ್ಲೆಲ್ಲಾ ಸನಾತನತೆ ಇಣುಕುತ್ತದೆ. ಇದು ಮುಂದೆ ಶಾಲೆಯ ಸಾಧನೆಯನ್ನು ಮಂಕಾಗಿಸಬಹುದು.

ಸಂವಿಧಾನ ಬದ್ಧ ಸಾರ್ವಜನಿಕ ಸಂಸ್ಥೆಯಾದ ಶಾಲೆಯೊಂದರಲ್ಲಿ ಯಾವುದೇ ಧರ್ಮದ ಛಾಯೆಗಳು ಢಾಳಾಗಿ ಕಾಣಿಸಕೂಡದು. ’ಭಾರತೀಯರಾದ ನಾವು’ ಎಂದು ಆರಂಭವಾಗುವ ಸಂವಿಧಾನದ ಪ್ರಸ್ತಾವನೆಗೆ ಪೂರಕವಾಗಿ ಶಾಲೆಯ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸುವುದು ಶಿಕ್ಷಕರ ಆದ್ಯ ಕರ್ತವ್ಯ. ಈ ಬೆಳವಣಿಗೆ ಅಕಸ್ಮಾತ್ ನಡೆದಿದ್ದರೆ, ಮುಂದಿನ ದಿನಗಳಲ್ಲಿ ರವಿ ಬೆಂಚಳ್ಳಿಯವರು ಇದನ್ನು ಸರಿಪಡಿಸಿಕೊಳ್ಳುತ್ತಾರೆಂದು ಭಾವಿಸುವೆ.

ತನ್ನ ಬಿಡುವಿಲ್ಲದ ಕೆಲಸಗಳಿಗೆ ತನ್ನ ಸಂಗಾತಿ ಸುಮತಿಯವರ ನೆರವಿದೆ ಎಂದು ರವಿ ಹೇಳುತ್ತಾರೆ. ಮಕ್ಕಳಾದ ವೈಭವ್ ಮತ್ತು ವರ್ಷಿತ ಅವರರೊಂದಿಗೆ ಸದ್ಯಕ್ಕೆ ರವಿಯವರು ಲಕ್ಷ್ಮೇಶ್ವರದಲ್ಲಿ ನೆಲೆಸಿದ್ದಾರೆ. ಊರಿನವರ ಸಹಕಾರದೊಂದಿಗೆ ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಹೊಯ್ಯಲಿ, ಸರಕಾರಿ ಪ್ರೌಢಶಾಲೆಗಳಿಗೆ ಅತ್ಯುತ್ತಮ ಮಾದರಿಯನ್ನು ರೂಪಿಸಲಿ ಎಂದು ನಾನುಗೌರಿ.ಕಾಮ್ ಆಶಿಸುತ್ತದೆ.

ಗೊಜನೂರು ಪ್ರೌಢಶಾಲೆ ತನ್ನದೇ ಸ್ವಂತ ವೆಬ್ ಸೈಟ್ ಹೊಂದಿದೆ. ಆಸಕ್ತರು ಶಾಲೆಯನ್ನು ಈ www.ghsgojanur.com ಕೊಂಡಿಯಿಂದ ಸಂಪರ್ಕಿಸಬಹುದು. ಅಲ್ಲದೇ ಶಾಲೆಯ ಕಲಿಕಾ ಪ್ರಗತಿ, ಚಟುವಟಿಕೆ ಹಾಗೂ ಸಾಧನೆಗಳನ್ನು youtube ನ ghsgojanur ಚಾನಲ್ ಮೂಲಕ ವೀಕ್ಷೀಸಬಹುದು. ಸಂಪರ್ಕಕ್ಕೆ ಇಮೇಲ್‌ [email protected] ಸಂಪರ್ಕಿಸಬಹುದು.

-ಅರುಣ್ ಜೋಳದಕೂಡ್ಲಿಗಿ


ಓದಿ: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...