Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...