Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...