Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...