Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...