Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...