Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...