Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...

ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ...

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ...

ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ. ಸಿಬಿಐ ಈ ಪ್ರಕರಣದ ತನಿಖೆ...

ಚಿತ್ರದುರ್ಗ | ಹೊತ್ತಿ ಉರಿದ ಖಾಸಗಿ ಬಸ್​​​​ : 10ಕ್ಕೂ ಹೆಚ್ಚು ಜನರು ಸಜೀವ ದಹನ, ಹಲವರಿಗೆ ಗಾಯ

ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದ ಪರಿಣಾಮ 10ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ (ಡಿ.25) ನಡೆದಿದೆ. ರಾಷ್ಟ್ರೀಯ ಹೆದ್ದಾರಿ...

ಜಾಮಿಯಾ ಮಿಲ್ಲಿಯಾ |’ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ’ದ ಬಗ್ಗೆ ಪ್ರಶ್ನೆ ಕೇಳಿದ ಪ್ರಾಧ್ಯಾಪಕ ಅಮಾನತು

ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ "ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ವಿವರಿಸಿ" ಎಂಬ ಪ್ರಶ್ನೆಯ ಬಗ್ಗೆ ದೂರುಗಳು ಬಂದ ನಂತರ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಸಮಾಜ ಕಾರ್ಯ...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತ್ ರಾವ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ಎಸ್‌ಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ (ಡಿ.24) ಪ್ರತಿಭಟನೆ ನಡೆಯಿತು....

ಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆ

ಕೇಂದ್ರದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಕಾಯ್ದೆ, 2025 (ವಿಬಿ-ಜಿ ರಾಮ್‌ ಜಿ) ವಿರುದ್ದ ತಮಿಳುನಾಡಿನ ಆಡಳಿತರೂಢ ಡಿಎಂಕೆ ಮೈತ್ರಿಕೂಟವು ಬುಧವಾರ (ಡಿ.24) ರಾಜ್ಯದಾದ್ಯಂತ ಬೃಹತ್...