Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...