Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...