Homeಕರ್ನಾಟಕಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ...

ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

- Advertisement -
- Advertisement -

“ಎಲ್ಲರ ಮೇಲೂ ಕೇಸ್ ಹಾಕಿ. ಎಷ್ಟು ದಿನ ಅಂತ ನೋಡೋದು ಸಾರ್‌? ರಾತ್ರಿಯಿಂದ ಬೆಳಿಗ್ಗೆ ಆರು ಗಂಟೆತನಕ ಆನೆ ಓಡಿಸುತ್ತೇವೆ. ಯಾರೂ ಇರಲ್ಲ. ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?”- ಹೀಗೆ ಆನೆ ಹಾವಳಿಯಿಂದ ನೊಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಆನೆ ಹಾವಳಿ ತಪ್ಪಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹೆಚ್ಚಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನರ ಆಕ್ರೋಶ ಭುಗಿಲೇಳುತ್ತಿದೆ. ಇತ್ತೀಚೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸ್ಥಳೀಯರು ಛೀಮಾರಿ ಹಾಕಿದ್ದರು. ಈಗ ಕಳ್ಳಬೇಟೆ ಶಿಬಿರಕ್ಕೆ ನುಗ್ಗಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲೂರು ವಲಯ ಚಿಕ್ಕಮಗಳೂರು ವಿಭಾಗದ ಕಳ್ಳ ಬೇಟೆ ನಿಗ್ರಹ ಶಿಬಿರ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಥಳೀಯರು ನೊಂದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದಲ್ಲಿ ಮಹಿಳೆ ಆನೆ ದಾಳಿಯಿಂದ ಮೃತಪಟ್ಟಿದ್ದರು. ಕಳ್ಳ ಬೇಟೆ ಶಿಬಿರ ನಿಗ್ರಹ ಅಧಿಕಾರಿಗಳು ಆನೆ ದಾಳಿಯಿಂದ ಗ್ರಾಮ ಹಾಗೂ ಸ್ಥಳೀಯ ಜನರ ರಕ್ಷಣೆ ಮಾಡುವ ಬದಲು ರಾತ್ರಿ ಹಗಲು ಮಾಂಸವನ್ನು ಬೇಯಿಸಿ, ಎಣ್ಣೆ ಕುಡಿದು ತೇಲಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಬಿರಕ್ಕೆ ನುಗ್ಗಿದ್ದಾರೆ.

ಕುಂದೂರು ಎಸ್ಟೇಟ್‌ನಲ್ಲಿರುವ ಶಿಬಿರದೊಳಗೆ ನುಗ್ಗಿದ ಯುವಕರ ಗುಂಪು ಕಟ್ಟಡದೊಳಗಿನ ಉಪಕರಣಗಳನ್ನು ಹೊರಗೆಸೆದಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಸುಧೀರ್‌, ಕೃಷ್ಣನ್‌, ನಿಖಿಲ್ ಮರಿಗೌಡ, ಸುಚಿನ್‌, ಗಣೇಶ ಮೊದಲಾದ ಯುವಕರು ಘಟನೆಯಲ್ಲಿ ಭಾಗಿಯಾಗಿದ್ದಾರೆ.

“ಇವರಿಗೆ (ಅಧಿಕಾರಿಗಳಿಗೆ) ತಿನ್ನಲು ಸೋನಮುಸುರಿ ಅಕ್ಕಿ ಬೇಕು, ಪೊಲೀಸರು ಈ ಅಧಿಕಾರಿಗಳಿಗೆ ರಕ್ಷಣೆ ಕೊಡುತ್ತೀರಾ, ನಮಗೆ ನ್ಯಾಯ ಕೊಡಿಸಲು ಆಗುತ್ತಾ? ಇಲ್ಲೇ ಮಜಾ ಮಾಡ್ತಾರೆ, ಚಿಕನ್ ಫ್ರೈ ಮಾಡ್ಕೊಂಡು ತಿನ್ನುತ್ತಾರೆ. ಇಷ್ಟು ದೊಡ್ಡ ಬಿಲ್ಡಿಂಗ್ ಇಟ್ಟುಕೊಂಡು ಇಲ್ಲೇ ಪಟಾಕಿ ಹೊಡಿದುಕೊಂಡು ಇರುತ್ತಾರೆ” ಎಂದು ದೂರಿದ್ದಾರೆ.

“ಆನೆ ಎಲ್ಲಿ ಬಂದಿದ್ದವು ಎನ್ನುತ್ತಾರೆ? ನೋಡಿ ಅಲ್ಲಿ ಚಿಕನ್ ಫ್ರೈ ಮಾಡಿಕೊಂಡು ತಿಂದಿದ್ದಾರೆ. ಸ್ಥಳೀಯರಿಗೆ ರಕ್ಷಣೆ ಕೊಡುವುದಿಲ್ಲ” ಎಂದು ನೊಂದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ಇತ್ತೀಚೆಗೆ ನಡೆದಿತ್ತು. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದರು.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

“ನನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ” ಎಂದು ಎಂ.ಪಿ ಕುಮಾರಸ್ವಾಮಿ ಆರೋಪಿದ್ದರು. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದರು.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿತ್ತು. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದರು. ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಸಾರ್ವಜನಿಕ ಸೇವಕರು” ಎಂದು ಕರೆಯಲಾಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಜನರ ಸಮಸ್ಯೆಗಳನ್ನು ಬಗೆಹರಿಸದೇ, ಕೇವಲ ಕಾನೂನನ್ನು ಚಲಾಯಿಸಲು ಮುಂದಾದಾಗ, ಜನ ರೊಚ್ಚಿಗೇಳುವುದು ಸಹಜ. ಅದರಲ್ಲೂ ನಮ್ಮ ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿದಾಗ, ಅವರು ಆಕ್ರೋಶಗೊಳ್ಳುವುದು ಸಹಜ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಿನಂಚಿನ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...