Homeಕರ್ನಾಟಕಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ...

ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

- Advertisement -
- Advertisement -

“ಎಲ್ಲರ ಮೇಲೂ ಕೇಸ್ ಹಾಕಿ. ಎಷ್ಟು ದಿನ ಅಂತ ನೋಡೋದು ಸಾರ್‌? ರಾತ್ರಿಯಿಂದ ಬೆಳಿಗ್ಗೆ ಆರು ಗಂಟೆತನಕ ಆನೆ ಓಡಿಸುತ್ತೇವೆ. ಯಾರೂ ಇರಲ್ಲ. ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?”- ಹೀಗೆ ಆನೆ ಹಾವಳಿಯಿಂದ ನೊಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಆನೆ ಹಾವಳಿ ತಪ್ಪಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹೆಚ್ಚಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನರ ಆಕ್ರೋಶ ಭುಗಿಲೇಳುತ್ತಿದೆ. ಇತ್ತೀಚೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸ್ಥಳೀಯರು ಛೀಮಾರಿ ಹಾಕಿದ್ದರು. ಈಗ ಕಳ್ಳಬೇಟೆ ಶಿಬಿರಕ್ಕೆ ನುಗ್ಗಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲೂರು ವಲಯ ಚಿಕ್ಕಮಗಳೂರು ವಿಭಾಗದ ಕಳ್ಳ ಬೇಟೆ ನಿಗ್ರಹ ಶಿಬಿರ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಥಳೀಯರು ನೊಂದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದಲ್ಲಿ ಮಹಿಳೆ ಆನೆ ದಾಳಿಯಿಂದ ಮೃತಪಟ್ಟಿದ್ದರು. ಕಳ್ಳ ಬೇಟೆ ಶಿಬಿರ ನಿಗ್ರಹ ಅಧಿಕಾರಿಗಳು ಆನೆ ದಾಳಿಯಿಂದ ಗ್ರಾಮ ಹಾಗೂ ಸ್ಥಳೀಯ ಜನರ ರಕ್ಷಣೆ ಮಾಡುವ ಬದಲು ರಾತ್ರಿ ಹಗಲು ಮಾಂಸವನ್ನು ಬೇಯಿಸಿ, ಎಣ್ಣೆ ಕುಡಿದು ತೇಲಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಬಿರಕ್ಕೆ ನುಗ್ಗಿದ್ದಾರೆ.

ಕುಂದೂರು ಎಸ್ಟೇಟ್‌ನಲ್ಲಿರುವ ಶಿಬಿರದೊಳಗೆ ನುಗ್ಗಿದ ಯುವಕರ ಗುಂಪು ಕಟ್ಟಡದೊಳಗಿನ ಉಪಕರಣಗಳನ್ನು ಹೊರಗೆಸೆದಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಸುಧೀರ್‌, ಕೃಷ್ಣನ್‌, ನಿಖಿಲ್ ಮರಿಗೌಡ, ಸುಚಿನ್‌, ಗಣೇಶ ಮೊದಲಾದ ಯುವಕರು ಘಟನೆಯಲ್ಲಿ ಭಾಗಿಯಾಗಿದ್ದಾರೆ.

“ಇವರಿಗೆ (ಅಧಿಕಾರಿಗಳಿಗೆ) ತಿನ್ನಲು ಸೋನಮುಸುರಿ ಅಕ್ಕಿ ಬೇಕು, ಪೊಲೀಸರು ಈ ಅಧಿಕಾರಿಗಳಿಗೆ ರಕ್ಷಣೆ ಕೊಡುತ್ತೀರಾ, ನಮಗೆ ನ್ಯಾಯ ಕೊಡಿಸಲು ಆಗುತ್ತಾ? ಇಲ್ಲೇ ಮಜಾ ಮಾಡ್ತಾರೆ, ಚಿಕನ್ ಫ್ರೈ ಮಾಡ್ಕೊಂಡು ತಿನ್ನುತ್ತಾರೆ. ಇಷ್ಟು ದೊಡ್ಡ ಬಿಲ್ಡಿಂಗ್ ಇಟ್ಟುಕೊಂಡು ಇಲ್ಲೇ ಪಟಾಕಿ ಹೊಡಿದುಕೊಂಡು ಇರುತ್ತಾರೆ” ಎಂದು ದೂರಿದ್ದಾರೆ.

“ಆನೆ ಎಲ್ಲಿ ಬಂದಿದ್ದವು ಎನ್ನುತ್ತಾರೆ? ನೋಡಿ ಅಲ್ಲಿ ಚಿಕನ್ ಫ್ರೈ ಮಾಡಿಕೊಂಡು ತಿಂದಿದ್ದಾರೆ. ಸ್ಥಳೀಯರಿಗೆ ರಕ್ಷಣೆ ಕೊಡುವುದಿಲ್ಲ” ಎಂದು ನೊಂದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ಇತ್ತೀಚೆಗೆ ನಡೆದಿತ್ತು. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದರು.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

“ನನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ” ಎಂದು ಎಂ.ಪಿ ಕುಮಾರಸ್ವಾಮಿ ಆರೋಪಿದ್ದರು. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದರು.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿತ್ತು. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದರು. ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಸಾರ್ವಜನಿಕ ಸೇವಕರು” ಎಂದು ಕರೆಯಲಾಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಜನರ ಸಮಸ್ಯೆಗಳನ್ನು ಬಗೆಹರಿಸದೇ, ಕೇವಲ ಕಾನೂನನ್ನು ಚಲಾಯಿಸಲು ಮುಂದಾದಾಗ, ಜನ ರೊಚ್ಚಿಗೇಳುವುದು ಸಹಜ. ಅದರಲ್ಲೂ ನಮ್ಮ ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿದಾಗ, ಅವರು ಆಕ್ರೋಶಗೊಳ್ಳುವುದು ಸಹಜ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಿನಂಚಿನ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...