Homeಮುಖಪುಟಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

ಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದ ರಾಂಪುರನಗರದ ಜ್ವಾಲಾನಗರ ಪ್ರದೇಶದಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ಸುಮಾರು ಮೂರು ದಶಕಗಳಿಂದ ಜೀವನ ಸಾಗಿಸುತ್ತಿದ್ದ ಬೀದಿ ಬದಿ ಮುಸ್ಲಿಂ ವ್ಯಾಪಾರಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸಲಾಗಿದ್ದು, ಆ ಜಾಗದಲ್ಲಿ ಹಿಂದೂಗಳು ವ್ಯವಹರಿಸಲು ಈ ಕ್ರಮವನ್ನು ಆಡಳಿತ ವರ್ಗ ಜರುಗಿಸಿದೆ ಎಂದು ಹೇಳಿದ್ದಾರೆ. ಇದನ್ನು ಸ್ಥಳೀಯ ಶಾಸಕರು ನಿರಾಕರಿಸಿದ್ದಾರೆ.

“1984ರಿಂದಲೂ ನಾವು ಇಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿದ್ದೇವೆ. ಈ ಅಂಗಡಿಗಳು ನಮ್ಮ ಜೀವನಾಧಾರವಾಗಿದೆ. ಈಗ ಅದೂ ಇಲ್ಲವಾಗಿದೆ” ಎಂದು ರಶೀದ್ (ಹೆಸರು ಬದಲಿಸಲಾಗಿದೆ) ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ರಶೀದ್ ಅವರಂತಹ ಮಾರಾಟಗಾರರು ಗೃಹೋಪಯೋಗಿ ವಸ್ತುಗಳು, ಆಟಿಕೆಗಳು ಮತ್ತು ಬಟ್ಟೆಗಳನ್ನು ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ.

“ರಾಮ್-ರಹೀಮ್ ಸೇತು ಪ್ರದೇಶದಲ್ಲಿ ವ್ಯಾಪಾರ ಮಾಡುವ ನನಗೆ ಮತ್ತು ಇತರ ಬೀದಿ ಬದಿ ವ್ಯಾಪಾರಿಗಳಿಗೆ ಜನವರಿ 13ರಂದು ಪುರಸಭೆ ನೋಟಿಸ್ ಕಳಿಸಿದ್ದು, ನಿಮ್ಮ ಅಂಗಡಿಗಳನ್ನು ಮುಚ್ಚಬೇಕು. ಎರಡು ದಿನ ಅವಕಾಶವಿದೆ” ಎಂದು ತಿಳಿಸಿದ್ದಾಗಿ ರಶೀದ್ ಹೇಳುತ್ತಾರೆ.

ಎರಡು ದಿನಗಳ ನಂತರ ಕೆಲವರು ನೋಟಿಸ್ ಅನ್ವಯ ಜಾಗ ತೆರವು ಮಾಡಿದ್ದರು. ಆದರೆ ಜನವರಿ 15 ರಂದು ನಗರಸಭೆಯ 12 ಅಧಿಕಾರಿಗಳು ಮತ್ತು ಎಂಟು ಜನ ಪೊಲೀಸರು ಆಗಮಿಸಿ ಉಳಿದಿದ್ದ ಅಂಗಡಿಗಳನ್ನು ನಾಶಪಡಿಸಿದರು ಎಂದು ರಶೀದ್ ಮತ್ತು ಇತರ ಮಾರಾಟಗಾರರು ಹೇಳುತ್ತಾರೆ.

“ಆ ಜಾಗದಲ್ಲಿ ಅಂಗಡಿ ಮುಂಗಟ್ಟು ಮಾಡಿಕೊಂಡಿದ್ದ ನಾನು ಹಾಗೂ ಇತರರು ಬೀದಿಬದಿ ಅಂಗಡಿಗಳನ್ನು ನಡೆಸಲು ನಗರಸಭೆಗೆ ಶುಲ್ಕ ಪಾವತಿಸಿದ್ದರೂ ಈ ಹಠಾತ್ ಕ್ರಮ ಜರುಗಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಕ್ರಮದಿಂದಾಗಿ 69 ಮಂದಿ ಬೀದಿಬದಿ ವ್ಯಾಪಾರಿಗಳು ತೊಂದರೆಗೀಡಾಗಿದ್ದಾರೆ” ಎಂದು ಅಮರ್ ಉಜಾಲಾ ಪತ್ರಿಕೆಯ ವರದಿ ತಿಳಿಸಿದೆ.

ಹೊರಹಾಕಲ್ಪಟ್ಟವರಲ್ಲಿ ಒಬ್ಬರಾದ ಹಸ್ಮತ್‌ (ಹೆಸರು ಬದಲಿಸಲಾಗಿದೆ) ಪ್ರತಿಕ್ರಿಯಿಸಿದ್ದು, “ಟ್ರಾಲಿಗಳಲ್ಲಿ ಸರಕುಗಳನ್ನು ಮಾರಾಟ ಮಾಡಲು ಹಿಂದೂ ಮಾರಾಟಗಾರರಿಗೆ ಅಂತಿಮವಾಗಿ ಅದೇ ಪ್ರದೇಶದಲ್ಲಿ ಅವಕಾಶ ನೀಡಲಾಯಿತು. ಮುಸ್ಲಿಮರ ಜಾಗವನ್ನು ಹೊಸ ಹಿಂದೂ ಮಾರಾಟಗಾರರಿಗೆ ಹಂಚಲಾಗಿದೆ” ಎಂದು ದೂರಲಾಗಿದೆ.

“ನಮ್ಮ ಜಾಗಗಳನ್ನು ಬೇರೆಯವರಿಗೆ ನೀಡಲಾಗಿದೆ” ಎನ್ನುವ ಹಸ್ಮತ್‌, “ನಮ್ಮ ಅಂಗಡಿಗಳು ಇದ್ದ ಜಾಗದಲ್ಲಿ ಬಜರಂಗದಳದವರು ಟ್ರಾಲಿಗಳನ್ನು ತಂದಿದಟ್ಟಿದ್ದಾರೆ” ಎನ್ನುತ್ತಾರೆ.

“ಕವಾರ್ ಯಾತ್ರೆಯ ಸಮಯದಲ್ಲಿ ನಾವು ನಮ್ಮ ಅಂಗಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿದ್ದೆವು, ನಾವು ಅವರಿಗಾಗಿ ಬಟ್ಟೆ ಮತ್ತು ಧ್ವಜಗಳನ್ನು ಸಹ ತಯಾರಿಸುತ್ತೇವೆ. ಆದರೆ ನಮ್ಮನ್ನು ಏಕೆ ಹೀಗೆ ಹೊರದೂಡಲಾಯಿತು” ಎಂದು ಪ್ರಶ್ನಿಸುತ್ತಾರೆ.

ಮುಸ್ಲಿಂ ಮಾರಾಟಗಾರರು ಮತ್ತೆ ಈ ಸ್ಥಳಕ್ಕೆ ಹಿಂತಿರುಗದಂತೆ ನೋಡಿಕೊಳ್ಳಲು ಈ ಪ್ರದೇಶಕ್ಕೆ ಬಜರಂಗದಳದವರ ಕಾರುಗಳು ವಾಡಿಕೆಯಂತೆ ಭೇಟಿ ನೀಡುತ್ತಿವೆ ಎಂದು ಹಸ್ಮತ್ ಆತಂಕ ವ್ಯಕ್ತಪಡಿಸಿದ್ದಾರೆ.

“ಸಹಾಯಕ್ಕಾಗಿ ರಾಂಪುರ ಶಾಸಕ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಇಬ್ಬರನ್ನೂ ಸಂಪರ್ಕಿಸಿದ್ದೇವೆ, ಆದರೆ ಇಲ್ಲಿಯವರೆಗೆ ಮನವಿಯನ್ನು ನಿರ್ಲಕ್ಷಿಸಲಾಗಿದೆ” ಎಂದು ಮಾರಾಟಗಾರರು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ಸಕ್ಸೇನಾ ಅವರು ಮುಸ್ಲಿಂ ಮಾರಾಟಗಾರರೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ. ಹಿಂದೂ ಮಾರಾಟಗಾರರಿಗೆ ಮಾತ್ರ ಅವರ ಜಾಗಗಳನ್ನು ಹಿಂತಿರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಕೆಲವು ಮುಸ್ಲಿಂ ಮಾರಾಟಗಾರರು ತಿಳಿಸಿದ್ದಾರೆ.

ತನ್ನ ಸ್ಥಳಕ್ಕೆ ಹಿಂತಿರುಗಲು ಸಾಧ್ಯವಾದ ಮಾರಾಟಗಾರ ದಿಲೀಪ್ ಸಕ್ಸೇನಾ, “ಹಿಂದಿರುಗಿದ ನಂತರ ತಾನು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ. ಶಾಸಕರು ಶಾಂತಿಯ ಭರವಸೆ ನೀಡಿದ್ದಾರೆ” ಎಂದು ‘ದಿ ವೈರ್‌’ಗೆ ಮಾಹಿತಿ ನೀಡಿದ್ದಾರೆ.

“ಶಾಸಕ ಸಕ್ಸೇನಾ ಅವರು ಆ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ” ಎಂದು ಮುಸ್ಲಿಂ ಮಾರಾಟಗಾರರ ಒಂದು ವಿಭಾಗವು ಆರೋಪಿಸಿದೆ. “ಶುಚಿಗೊಳಿಸುವ ಸಮಯ ಬಂದಿದೆ” ಎಂದು ಶಾಸಕರು ಹೇಳಿರುವುದಾಗಿ ದೂರಲಾಗುತ್ತಿದೆ. ಆದರೆ ಸ್ವತಃ ಶಾಸಕರೇ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲರ ಪರವಾಗಿ ತಾವು ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

“ನಾನು ನಗರವನ್ನು ಸುಂದರಗೊಳಿಸಲು ಕೆಲಸ ಮಾಡುತ್ತಿದ್ದೇನೆ ಮತ್ತು ಯಾರನ್ನೂ ಅವರ ಸ್ಥಳದಿಂದ ಸ್ಥಳಾಂತರಿಸುವುದಿಲ್ಲ. ಹೇಗಾದರೂ, ಯಾರಾದರೂ ಹಾಗೆ ಭಾವಿಸಿದರೆ, ಸಹಾಯಕ್ಕಾಗಿ ನನ್ನ ಬಳಿಗೆ ಬರಲು ನಾನು ಅವರನ್ನು ಪ್ರೋತ್ಸಾಹಿಸುತ್ತೇನೆ. ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡುತ್ತೇನೆ. ರಾಂಪುರದಲ್ಲಿ ರಾಮ್ ಮತ್ತು ರಹೀಮ್ ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಾರೆ ಮತ್ತು ನಾನು ಎಲ್ಲರ ಸಮುದಾಯದ ನಾಯಕನಾಗಲು ಬಯಸುತ್ತೇನೆ” ಎಂದಿದ್ದಾರೆ ಸಕ್ಸೇನಾ.

“ನಮ್ಮ ಕ್ಷೇತ್ರದಲ್ಲಿರುವ ಸುಮಾರು 250 ಬೀದಿಬದಿ ವ್ಯಾಪಾರಿಗಳಲ್ಲಿ ಸುಮಾರು 100 ಮಂದಿ ಮುಸ್ಲಿಮರು ಮತ್ತು 150 ಮಂದಿ ಹಿಂದೂಗಳು ಇದ್ದಾರೆ” ಎಂದು ಅವರು ಸಮಜಾಯಿಸಿ ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...